ಗುಡ್ಡದ ಮೇಲೆ ಮಜಾ ಮಾಡುತ್ತಿದ್ದ ಅನ್ಯಕೋಮಿನ ಜೋಡಿ, ಥಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

Thursday, February 4th, 2021
mudipu gudda

ಮಂಗಳೂರು :  ಮುಡಿಪು ಗುಡ್ಡೆಯಲ್ಲಿ ಮಜಾ ಮಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಹಿಡಿದು ಪೊಲೀಸರರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಡಬಿದಿರೆಯ ಜುನೈದ್ ಎಂಬಾತ ಕೈರಂಗಳ ವಿದ್ಯಾನಗರದ ಹಿಂದೂ ಯುವತಿಯೊಂದಿಗೆ ಮುಡಿಪು ಬೆಟ್ಟದಲ್ಲಿ ಒಟ್ಟಿಗೆ ಇದ್ದಾಗ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಸಿಕ್ಕಿಬಿದ್ದಿದ್ದು, ಇಬ್ಬರಿಗೂ ಥಳಿಸಿ ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವತಿಗೆ ಇನ್ಸ್ಟಾಗ್ರಾಂ ಮೂಲಕ ಈ ಯುವಕನ ಪರಿಚಯವಾಗಿತ್ತು ಎನ್ನಲಾಗಿದೆ. ಕಳೆದ ಒಂದು ವಾರದಲ್ಲಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹ ಮೂರು ಘಟನೆಗಳು ನಡೆದಿದ್ದು ಬೋಳಿಯಾರ್ ಬಳಿ ಯುವಕನಿಂದ […]

ಗುರುಪುರ ಬಳಿ ಗುಡ್ಡ ಕುಸಿದು ನಾಲ್ಕು ಮನೆಗಳು ನೆಲಸಮ, ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳು

Sunday, July 5th, 2020
gurupura landslid

ಮಂಗಳೂರು: ನಿರಂತರವಾಗಿ ಸುರಿದ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದ ಬಂಗ್ಲಗುಡ್ಡೆ ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ರವಿವಾರ ನಡೆದಿದೆ. ನಾಲ್ಕು ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಎಂಟು ಮನೆಗಳು ಅಪಾಯದಲ್ಲಿದೆ. ಗುಡ್ಡ ಇನ್ನೂ ಕುಸಿಯುತ್ತಿದೆ ಎನ್ನಲಾಗಿದೆ. ತೆಂಗಿನ ಮರ ಸೇರಿದಂತೆ ಕೆಲವು ಮರಗಳು ಮಣ್ಣಿನ ಜೊತೆಗೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದು, ಸಿಲುಕಿರುವವರ ಹೊರತೆಗೆಯಲು ಪ್ರಯತ್ನಿಸುತ್ತಿದ್ದಾರೆ. […]