ವೈಭವದ ಕರಾವಳಿ ಉತ್ಸವ: ವಸ್ತು ಪ್ರದರ್ಶನಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಚಾಲನೆ

Saturday, December 22nd, 2018
gurukiran

ಮಂಗಳೂರು: ದ‌.ಕ. ಜಿಲ್ಲಾಡಳಿತದ ವತಿಯಿಂದ ನಡೆಯುವ ವೈಭವದ ಕರಾವಳಿ ಉತ್ಸವದ ವಸ್ತು ಪ್ರದರ್ಶನಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕರಾವಳಿ ಅಂದರೆ ಎಲ್ಲರಿಗೂ ಎಲ್ಲರ ಪರಿಚಯ ಇರುತ್ತದೆ. ಎಲ್ಲರಿಂದಲೂ ಸಹಾಯ ಕೇಳುತ್ತಾರೆ. ಸಹಾಯ ಮಾಡುತ್ತಾರೆ. ಸಚಿವ ಯು.ಟಿ. ಖಾದರ್ ಮತ್ತು ನಾನು ಶಾಲೆಗೆ ಒಟ್ಟಿಗೆ ಹೋಗುತ್ತಿದ್ದೆವು. ಮೇಯರ್ ಭಾಸ್ಕರ ಕೆ. ನಮ್ಮ ಊರಿನವರು. ನಾವು ಯಾವಾಗಲೂ ಜೊತೆಗಿರುತ್ತಿದ್ದೆವು. ಮನೋಹರ ಪ್ರಸಾದ್ ಅವರು ನನ್ನ ಮೊದಲ ಸಿನಿಮಾ ಬದ್ಕೊಂಜಿ ಕಬಿತೆಗೆ ಅವರೇ ಮುಹೂರ್ತ […]

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಡಾ.ಶಿವಶರಣ್ ಶೆಟ್ಟಿ ನಾಮಪತ್ರ ಸಲ್ಲಿಕೆ

Wednesday, May 23rd, 2018
gurukiran

ಮಂಗಳೂರು: ಡಾ.ಶಿವಶರಣ್ ಶೆಟ್ಟಿ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ನಾಮ ಪತ್ರ ಸಲ್ಲಿಸಿದರು. ಜೂನ್ 8 ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಡಾ.ಶಿವಶರಣ್ ದಂತ ವ್ಯಧ್ಯರಾಗಿದ್ದು, ‘ನಮ್ಮಟಿವಿ’ ಟಿವಿ ವಾಹಿನಿಯ ಆಡಳಿತ ನಿರ್ದೇಶಕರಾಗಿದ್ದಾರೆ. ಪ್ರೇಮ ಕಾಂತಿ ಎಜುಕೇಶನ್ ಟ್ರಸ್ಟ್ ನಿರ್ದೇಶಕರಾಗಿಯೂ ಶಿಕ್ಣಣ ಕ್ಷೇತ್ರದಲ್ಲಿ ಅನುಭವ ಹೊಂದಿದ್ದಾರೆ. ಮೈಸೂರಿನಲ್ಲಿ ಚುನಾವಣಾ ಕಚೇರಿಯಲ್ಲಿ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಗುರುಕಿರಣ್, ಐಡಿಎ ಸಂಘದ ಪಧಾಧಿಕಾರಿಗಳು ಉಪಸ್ಥಿತರಿದ್ದರು.

ಸದಾಶಯ ‘ಬಿಸು ಸಂಚಿಕೆ’ ಬಿಡುಗಡೆ-ಕವಿಕೂಟ

Thursday, April 26th, 2018
bunts-welfare

ಮಂಗಳೂರು: ‘ಸಂಘ-ಸಂಸ್ಥೆಗಳು ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಳ್ಳುವುದು ಸಾಮಾನ್ಯ. ಆದರೆ ಪತ್ರಿಕೆ ಮತ್ತು ಸಾಹಿತ್ಯ ಕೃತಿಗಳ ಪ್ರಕಟನೆಯಿಂದ ಅವು ಶಾಶ್ವತ ನೆಲೆ ಕಂಡುಕೊಳ್ಳತ್ತವೆ’ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಹೇಳಿದ್ದಾರೆ. ಇಂಟರ್ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಗರದ ಕುಡ್ಲ ಪೆವಿಲಿನ್ ಸಭಾಂಗಣದಲ್ಲಿ ‘ಸದಾಶಯ’ ತ್ರೈಮಾಸಿಕದ ‘ಬಿಸು ಸಂಚಿಕೆ’ಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು. ‘ಸಮಾಜದಲ್ಲಿರುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸೂಕ್ತ ವೇದಿಕೆ ಒದಗಿಸುವುದರೊಂದಿಗೆ ವರ್ಷದಲ್ಲಿ ಒಂದೆರಡು ಮೌಲಿಕ ಗ್ರಂಥಗಳನ್ನು ಹೊರತರುವ ಮೂಲಕ […]

ಕುಡುಪು ಕ್ಷೇತ್ರಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಭೇಟಿ

Tuesday, February 20th, 2018
gurukiran

ಮಂಗಳೂರು : ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ನಿನ್ನೆ ಶ್ರೀ ಕ್ಷೇತ್ರದಲ್ಲಿ ನಡೆದ ಕಲಶಾಭಿಷೇಕ, ತಂಬಿಲ ಹಾಗೂ ವಿಶೇಷ ಮಹಾಪೂಜೆಯಲ್ಲಿ ಖ್ಯಾತ ಚಲನಚಿತ್ರ ನಟ, ಸಂಗೀತ ನಿರ್ದೇಶಕ ಗುರುಕಿರಣ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗುರುಕಿರಣ್ ಅವರಿಗೆ ಶ್ರೀ ಕ್ಷೇತ್ರದ ವತಿಯಿಂದ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಎ. ಸುತಗುಂಡಿ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಕ್ತೇಸರ ಭಾಸ್ಕರ ಕೆ. ಪ್ರಧಾನ ಕಾರ್ಯದರ್ಶಿ ಕೆ. ಸುಜನ್‌ದಾಸ್ ಕುಡುಪು, ಅನುವಂಶಿಕ […]

ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಕೆಂಪೇಗೌಡ ಪ್ರಶಸ್ತಿ

Wednesday, May 3rd, 2017
Guru Kiran

ಮಂಗಳೂರು  :  ಚಿತ್ರರಂಗಕ್ಕೆ ಹಲವಾರು ಖ್ಯಾತನಾಮರನ್ನು ಕೊಟ್ಟಿರುವ ತುಳುನಾಡಿನ ಓರ್ವ ಪ್ರಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಈ ಬಾರಿ ಅತ್ಯಂತ ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿ ಲಭಿಸುವ ಮೂಲಕ ಅವರ ಪ್ರತಿಭೆಗೆ ಹೊಸದೊಂದು ಮನ್ನಣೆ ಸಿಕ್ಕಂತಾಗಿದೆ. ಈಗಾಗಲೇ ಮೂರು ಬಾರಿ ಫಿಲಂಫೇರ್ ಪ್ರಶಸ್ತಿಗೆ ಭಾಜನರಾಗಿರುವ ಅವರು ರಾಜ್ಯ ಪ್ರಶಸ್ತಿಯನ್ನೂ ಗಳಿಸಿದ್ದಾರೆ. ಈಗ ಕೆಂಪೇಗೌಡ ಪ್ರಶಸ್ತಿ ಸಂದಿರುವುದು ಆ ಸಾಲಿಗೆ ಮತ್ತೊಂದು ಸೇರ್ಪಡೆ. ಅತ್ಯಂತ ಯಶಸ್ವಿ ಸಂಗೀತ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ಗುರುಕಿರಣ್ ಅವರು ಹಲವಾರು ಟೀವಿ ರಿಯಾಲಿಟಿ […]

ತುಳು ಸಿನಿಮಾ ತೆಲಿಕೆದ ಬೊಳ್ಳಿ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಸಮಾರಂಭ

Friday, November 9th, 2012
Telikeda Bolli

ಮಂಗಳೂರು :ತುಳು ರಂಗಭೂಮಿಯಲ್ಲಿ ಅತ್ಯಂತ ಪ್ರಸಿದ್ಧಿ ಪಡೆದು ತೆಲಿಕೆದ ಬೊಳ್ಳಿ ಎಂಬ ಬಿರುದು ಹೊಂದಿರುವ ಪ್ರಸಿದ್ಧ ನಟ ದೇವದಾಸ್ ಕಾಪಿಕಾಡ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ಬಹು ನಿರೀಕ್ಷೆಯ ತೆಲಿಕೆದ ಬೊಳ್ಳಿ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭವು ನಗರದ ಪ್ರತಿಷ್ಠಿತ ಹೊಟೇಲ್ ಓಶಿಯನ್‌ ಪರ್ಲ್‌ನಲ್ಲಿ ಜರಗಿತು. ಕನ್ನಡ ಚಿತ್ರರಂಗದ ಪ್ರಸಿದ್ಧ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್ ತೆಲಿಕೆದ ಬೊಳ್ಳಿ ಚಿತ್ರದ ಧ್ವನಿಸುರುಳಿಯನ್ನು ಬಿಡುಗಡೆಗೊಳಿಸಿದರು. ಚಿತ್ರವು ಅತ್ಯುತ್ತಮ ಹಾಡುಗಳನ್ನು ಹೊಂದಿದ್ದು, ದಕ್ಷಿಣ ಕನ್ನಡದಲ್ಲಿ ಉತ್ತಮ ಕಥಾಹಂದರಗಳುಳ್ಳ ಚಿತ್ರಗಳು ಬಿಡುಗಡೆಯಾಗುತ್ತಿರುವುದು ಸಂತಸದ […]

ಶಿವರಾಜ್ ಕುಮಾರ್ 101ನೇ ಚಿತ್ರ

Saturday, November 27th, 2010
Shivaraj Kumar Priya Mani

ಬೆಂಗಳೂರು : ಶಿವರಾಜ್ ಕುಮಾರ್ 101ನೇ ಚಿತ್ರ ಕ್ಕೆ ನಾಯಕಿಯಾಗಿ ಬಹುಭಾಷಾ ತಾರೆ ಪ್ರಿಯಾಮಣಿ ನಟಿಸಲಿದ್ದಾರೆ. ಪುನೀತ್ ರಾಜ್‌ಕುಮಾರ್ ‘ರಾಮ್’ ಚಿತ್ರದ ಮೂಲಕ ಕನ್ನಡಕ್ಕೆ ಬಂದು ಸುದೀಪ್,ಗೋಲ್ಡನ್ ಸ್ಟಾರ್ ಗಣೇಶ್   ಚಿತ್ರಗಳಲ್ಲಿ ಪ್ರೇಕ್ಷಕರ ಗಮನ ಸೆಳೆದು, ಶಿವರಾಜ್ ಕುಮಾರ್ ಜೊತೆ ನಟಿಸುತ್ತಿರುವ ನಾಲ್ಕನೇ ಚಿತ್ರ ಇದಾಗಿರುವುದು ವಿಶೇಷ. ಪ್ರೇಮ್ ನಿರ್ದೇಶನದ ‘ಜೋಗಯ್ಯ’ ಶಿವರಾಜ್ ಕುಮಾರ್ ಅವರ 100 ನೇ ಚಿತ್ರವಾಗಿತ್ತು,  ಈಗ 101ನೇ ಚಿತ್ರವೂ ಘೋಷಣೆಯಾಗಿದೆ. ಹೆಸರಿಡದ ಈ ಚಿತ್ರಕ್ಕೆ ಸೂಪರ್ ಹಿಟ್ ಸಂಗೀತ ನಿರ್ದೇಶಕ ಗುರುಕಿರಣ್ […]