ಮಗಳನ್ನು ತಂದೆಯೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ

Saturday, June 19th, 2021
gayatri

ಮೈಸೂರು: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ತನ್ನ ತಂದೆಗೆ ಊಟ ಕೊಂಡುಹೋಗಿದ್ದ ಮಗಳನ್ನು ತಂದೆಯೇ  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. ಗಾಯತ್ರಿ (19) ಕೊಲೆಯಾದ ಯುವತಿ. ತಂದೆ ಜಯರಾಂನಿಂದಲೇ ಮರ್ಯಾದೆ ಹತ್ಯೆಯಾಗಿದೆ. ಮಗಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದು, ಇದರಿಂದ ಸಮಾಜದಲ್ಲಿ ತಲೆತಗ್ಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆನ್ನಲಾಗಿದೆ. ಈ ವಿಷಯವಾಗಿ ಒಂದು ತಿಂಗಳಿನಿಂದ ಮನೆಯಲ್ಲಿ ಪೋಷಕರು ಮತ್ತು ಯುವತಿಯ ನಡುವೆ ಗಲಾಟೆ ನಡೆಯುತ್ತಿತ್ತು. ಈಕೆ ಪಟ್ಟಣದ ಉಪ್ಪಾರಗೇರಿ ಬಡಾವಣೆಯ ಯುವಕನನ್ನು […]