ಉಪಚುನಾವಣೆಯಲ್ಲಿ ಖಂಡಿತಾ ಗೆಲ್ಲುತ್ತೇವೆ : ಬಿ.ಜನಾರ್ದನ ಪೂಜಾರಿ

Monday, October 26th, 2020
janardhan poojary

ಮಂಗಳೂರು: ರಾಜ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ‌ ಕಾಂಗ್ರೆಸ್ ಅನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಖಂಡಿತಾ ಗೆಲ್ಲಿಸುತ್ತಾರೆ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ‘ಮಂಗಳೂರು ದಸರಾ’ ಕಾರ್ಯಕ್ರಮದ ವೇಳೆ ದೀಪ ಬೆಳಗಿಸಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ಪ್ರಯತ್ನ ಬಿಡುವುದಿಲ್ಲ. ಆದ್ದರಿಂದ ಯಾವ ಭಯವೂ ನಮಗಿಲ್ಲ. ಉಪಚುನಾವಣೆಯಲ್ಲಿ ಖಂಡಿತಾ ಗೆಲ್ಲುತ್ತೇವೆ ಎಂದು ಹೇಳಿದರು. ಡಿ.ಕೆ.ಶಿವ ಕುಮಾರ್ ಕೆಪಿಸಿಸಿ […]

ರಾಬರ್ಟ್ ವಾದ್ರಾ ಗುಣಮುಖರಾಗಲು ಜನಾರ್ದನ ಪೂಜಾರಿ ವಿಶೇಷ ಪೂಜೆ

Monday, July 8th, 2019
poojary

ಮಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಳಿಯ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕದ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಮಾಜಿ ಸಚಿವ ಜನಾರ್ದನ ಪೂಜಾರಿ ಭಾನುವಾರ  ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಅನಾರೋಗ್ಯದಿಂದ ಬಳಲುತ್ತಿರುವ ಪ್ರಿಯಾಂಕಾ ಗಾಂಧಿಯ ಪತಿ ರಾಬರ್ಟ್ ವಾದ್ರಾ ಆದಷ್ಟು ಬೇಗ ಗುಣಮುಖರಾಗಲೆಂದು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಪ್ರಮುಖ ದೇವರಾದ ಶಿವ ಹಾಗೂ ಪರಿವಾರ ದೇವರುಗಳಿಗೆ ಪೂಜೆ […]

ದಿ| ನಾರಾಯಣಸ್ವಾಮಿ ಅವರ ಹೆಸರು ಗೋಕರ್ಣನಾಥ ಕ್ಷೇತ್ರದಲ್ಲಿರುವ ಕೆರೆ ಹಾಗೂ ಹೂದೋಟಕ್ಕೆ ನಾಮಕರಣ

Monday, February 20th, 2017
Narayana Swamy

ಮಂಗಳೂರು:  ಬಿಲ್ಲವ ಸಮುದಾಯದ ಮುಖಂಡ, ಸಾಮಾಜಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡ ದಿ| ನಾರಾಯಣಸ್ವಾಮಿ ಅವರ ಹೆಸರನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿರುವ ಕೆರೆ ಹಾಗೂ ಹೂದೋಟಕ್ಕೆ ಇಡಲಾಗಿದೆ ಎಂದು  ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ. ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದ  ಕೇಂದ್ರದ ಮಾಜಿ ಸಚಿವ ಹಾಗೂ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಸಮಾಜದಲ್ಲಿ ಸೇವೆ ಮಾಡಿದವರನ್ನು ಗುರುತಿಸಿ ಅವರ ಸಾಧನೆಗಳನ್ನು ಅವರ ನಿಧನಾ ನಂತರ ಉಲ್ಲೇಖ ಮಾಡುವಂತಹುದು ಅಗತ್ಯವಾಗಿ ನಡೆಯಬೇಕು. ಸಮಾಜಕ್ಕಾಗಿ ಸೇವೆ ಮಾಡಿದವರನ್ನು ಸ್ಮರಿಸುವುದು ಭಾರತೀಯ ಸಂಸ್ಕೃತಿ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ

Wednesday, October 12th, 2016
mangalore-dasara

ಮಂಗಳೂರು: ಮಂಗಳೂರಿಗೆ ಮಂಗಳೂರೇ ವರ್ಣಮಯವಾಗಿ ಕಂಗೊಳಿಸಿ- ವಿಜೃಂಭಿಸಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ ಭಾರೀ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ, ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ಸಂಜೆ ಆರಂಭವಾಗಿ ಬುಧವಾರ ಮುಂಜಾನೆ ಸಂಪನ್ನಗೊಂಡಿತು. ಶ್ರೀ ಕ್ಷೇತ್ರದಿಂದ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ವಿಗ್ರಹಗಳ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ಕುದ್ರೋಳಿಯಿಂದ ಹೊರಟು ಕಂಬಾರ […]

ಕಾವೇರಿ ವಿವಾದ ಇತ್ಯರ್ಥಕ್ಕೆ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಾರಿ ಉರುಳು ಸೇವೆ

Monday, September 19th, 2016
janardana-poojary

ಮಂಗಳೂರು: ಕಾವೇರಿ ನದಿ ನೀರು ಹಂಚಿಕೆ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ನದಿ ವಿವಾದದ ಇತ್ಯರ್ಥಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಉರುಳು ಸೇವೆ ಮಾಡಿದರು. ಗೋಕರ್ಣನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಳ್ಳಿಯ ರಥದಲ್ಲಿ ದೇವರ ರಥೋತ್ಸವ ನಡೆಯಿತು. ರಥವನ್ನು ಎಳೆಯುತ್ತಿದ್ದಂತೆ ಮುಂಭಾಗದಲ್ಲಿ ಜನಾರ್ದನ ಪೂಜಾರಿ ಉರುಳು ಸೇವೆ ನಡೆಸಿದರು. 20 ನಿಮಿಷದಲ್ಲಿ ದೇವಸ್ಥಾನದ ಹೊರಾಂಗಣದಲ್ಲಿ ಒಂದು ಸುತ್ತು ಉರುಳು ಸೇವೆ ನಡೆಸಿದರು. ಶಾಸಕ ಜೆ.ಆರ್.ಲೋಬೋ, […]

ಬ್ರಹ್ಮಶ್ರೀ ನಾರಾಯಣ ಗುರುಗಳ 162ನೇ ಜಯಂತಿ ಆಚರಣೆ

Saturday, September 17th, 2016
Narayana-Guru

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮೊದಲ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ 162ನೇ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕ್ಷೇತ್ರದ ಕಲ್ಯಾಣ ಮಂಟಪದಲ್ಲಿ ನಡೆದ ಗುರು ಜಯಂತಿಯನ್ನು ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಓರ್ವ ದಾರ್ಶನಿಕನಾಗಿ ಸಾಮಾಜಿಕ ಸುಧಾರಣೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ನಿರ್ವಹಿಸಿದ ಪಾತ್ರ ಅತಿ ಪ್ರಮುಖವಾದುದು. ಎಲ್ಲರಿಗೂ ಸುಶಿಕ್ಷಿತ ಶಿಕ್ಷಣ ದೊರೆಯಬೇಕು. […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪರಿಶಿಷ್ಟ ವರ್ಗದ ವಿಧವೆಯರಿಂದ ಅರ್ಚನೆ

Tuesday, September 30th, 2014
Kudroli priest

ಮಂಗಳೂರು: ಪರಿಶಿಷ್ಟ ವರ್ಗದ ಇಬ್ಬರು ಮಹಿಳೆಯರು ಅರ್ಚಕಿ ಸ್ಥಾನ ಸ್ವೀಕರಿಸಿ ಕುದ್ರೋಳಿ ಶ್ರೀ ಗೋಕರ್ಣನಾಥ ಹಾಗೂ ಪರಿವಾರ ದೇವರುಗಳ ಗರ್ಭಗುಡಿ ಪ್ರವೇಶಿಸಿ ಪೂಜಾ ವಿಧಾನಗಳನ್ನು ನೆರವೇರಿಸಿದರು. ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ ಮಂಗಳೂರು ಉರ್ವ ಚಿಲಿಂಬಿಯ ದಿ| ಸದಾಶಿವ ಅವರ ಪತ್ನಿ ಲಕ್ಷ್ಮೀ (65) ಹಾಗೂ ಉಳ್ಳಾಲ ಕುತ್ತಾರು ರಾಣಿಪುರದ ದಿ| ಕೃಷ್ಣಪ್ಪ ಅವರ ಪತ್ನಿ ಚಂದ್ರಾವತಿ (46) ಅವರು ನವರಾತ್ರಿ ಹಾಗೂ ದಸರಾ ಸಂಭ್ರಮದ ಸಂದರ್ಭದಲ್ಲಿ […]

ವರ್ಣವಯ ಶೋಭಾಯಾತ್ರೆ ಯೊಂದಿಗೆ ‘ಮಂಗಳೂರು ದಸರಾ’ ಸಮಾಪನ

Friday, October 7th, 2011
Mangalore-dasara

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಗುರುವಾರ ಸಂಜೆ ಶಾರದೆ, ಆದಿಶಕ್ತಿ, ಮಹಾಗಣಪತಿ ಸಹಿತ ನವದುರ್ಗೆಯರ ಅತ್ಯಾಕರ್ಷಕ ಶೋಭಾಯಾತ್ರೆಯೊಂದಿಗೆ ಆರಭಂಗೊಂಡಿತು. ಶೋಭಾಯಾತ್ರೆ ನೇತೃತ್ವವನ್ನು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ವಹಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ ಸಂದೇಶ ಸಾರುವ ಟ್ಯಾಬ್ಲೋ ಸಹಿತ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಹಿನ್ನೆಲೆಯ ನೂರಾರು ಟ್ಯಾಬ್ಲೋಗಳು, ಪುಣ್ಯಕ್ಷೇತ್ರಗಳ ಸಹಕಾರದ ವರ್ಣಮಯ ಟ್ಯಾಬ್ಲೋಗಳು, ತ್ರಿಶೂರ್‌ನ ವರ್ಣರಂಜಿತ ಕೊಡೆಗಳು, ಕರಾವಳಿಯ ಹುಲಿವೇಷ, ಕೇರಳದ ಚೆಂಡೆವಾದ್ಯ, ಮಹಾರಾಷ್ಟ್ರದ ಡೋಲು ನೃತ್ಯ, […]

ಮಂಗಳೂರು ದಸರಾಕ್ಕೆ ಸಚಿವ ವಯಲಾರ್‌ ರವಿ ಅವರಿಂದ ವಿದ್ಯುಕ್ತ ಚಾಲನೆ

Monday, October 3rd, 2011
Vayalar Ravi

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಖ್ಯಾತ ಮಂಗಳೂರು ದಸರಾಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಹಾಗೂ ಸಾಗರೋತ್ತರ ಭಾರತೀಯರ ವ್ಯವಹಾರಗಳ ಸಚಿವ ವಯಲಾರ್‌ ರವಿ ಅವರು ರವಿವಾರ ಚಾಲನೆ ನೀಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳು ಸಾರಿ ಸಾರಿರುವ ಸಂದೇಶ ವಿಶ್ವಮಾನ್ಯವಾಗಿದೆ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬುದಾಗಿ ಏಕತೆಯ ಸಂದೇಶ ನಮ್ಮೆಲ್ಲರ ಶಕ್ತಿ. ನಾನು ಬಾಲ್ಯದಿಂದಲೂಅವರ ಸಂದೇಶ ನನ್ನ ಚಿಂತನೆಗಳನ್ನು ಕೇಳುತ್ತಿದ್ದೆ. ಚಿಕ್ಕಂದಿನಲ್ಲಿ ವರ್ಕಳ ಶಿವಗಿರಿ ಮಠಕ್ಕೆ ಹೋಗುತ್ತಿದ್ದ ಪ್ರವಚನಗಳು ಇಂದಿಗೂ ನನ್ನ ಮೇಲೆ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬೆಳ್ಳಿರಥ ಮಂದಿರ ಉದ್ಘಾಟನೆ

Saturday, October 1st, 2011
Kudroli-chriot

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ಬೆಳ್ಳಿರಥ ಮಂದಿರವನ್ನು ಶುಕ್ರವಾರ ಸಚಿವ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶತಮಾನದ ಹಿಂದೆ ಸ್ಥಾಪಿಸಿದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಯವರ ಆಶಯದಂತೆ ಕ್ಷೇತ್ರವು ಸಮಾಜದ ಸರ್ವರಿಗೂ ಆತ್ಮವಿಶ್ವಾಸ ನೀಡುವ ಶ್ರದ್ಧಾಕೇಂದ್ರವಾಗಿದೆ ಎಂದರು. ದೇಶವಿದೇಶಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಕ್ಷೇತ್ರವು ಧಾರ್ಮಿಕ ಆಚರಣೆಗಳ ಜತೆಗೆ ಸಮಾಜದ ಅಗತ್ಯಗಳಿಗೂ ಸ್ಪಂದಿಸುತ್ತಿದೆ. ಅದರ ಜೊತೆಗೆ ಸಾಮಾಜಿಕ ಬದಲಾವಣೆಗೆ ಕಾರಣವಾಗಿದೆ ಎಂದು ಪೂಜಾರಿ ವಿವರಿಸಿದರು. ಜಯ ಸಿ. ಸುವರ್ಣ, ಕೆ.ಪಿ. […]