ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

Tuesday, April 24th, 2018
gopal-pojary

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಕೆ. ಗೋಪಾಲ ಪೂಜಾರಿ ಇಂದು ಬೈಂದೂರು ಚುನಾವಣಾಧಿ ಕಾರಿ ಶ್ರೀನಿವಾಸ್ ಅವರಿಗೆ ನಾಮಪತ್ರ ಸಲ್ಲಿಸಿದರು. ಬೈಂದೂರು ಸೇಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಗೋಪಾಲ ಪೂಜಾರಿ, ಬಳಿಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ತಾಪಂ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಅವರು, ಐದು […]

ವಿಶೇಷ ಶಿಕ್ಷಣ ಸಂಸ್ಥೆ ನಡೆಸಲು ಸಹನೆ ಬೇಕು:ಪ್ರತಾಪ್ ಚಂದ್ರ ಶೆಟ್ಟಿ

Tuesday, January 30th, 2018
pratap-chandra-shetty

ಕುಂದಾಪುರ: ವಿಕಲಚೇತನರ ವಿಶೇಷ ತರಬೇತಿ ಕೇಂದ್ರ ನಡೆಸಲು ತಾಳ್ಮೆ, ಸಹನೆ ಮತ್ತು ಭಾವನಾತ್ಮಕ ಸಂಬಂಧ ಇರುವವರಿಂದ ಮಾತ್ರ ಇಂತಹ ಶಿಕ್ಷಣ ಸಂಸ್ಥೆ ನಡೆಸಿಕೊಂಡು ಹೋಗಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಕೆ.ಪ್ರತಾಪ್ ಚಂದ್ರ ಶೆಟ್ಟಿ ಹೇಳಿದರು. ಅವರು ಭಾನುವಾರ ತಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ (ರಿ)ನ ನಾರಾಯಣ ವಿಶೇಷ ಶಾಲೆಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಆಡಳಿತ ಟ್ರಸ್ಟಿ ಸುರೇಶ್ ತಲ್ಲೂರು […]

ಗೋಪಾಲ ಪೂಜಾರಿ ಕ್ರಿಯಾಶೀಲ, ಜನಪರ ಶಾಸಕ; ಸಿಎಂ ಬಹುಪರಾಕ್

Monday, January 8th, 2018
Gopal-poojary

ಬೈಂದೂರು: ಬಿಜೆಪಿಯವರು ಕೆಲಸ ಮಾಡೋದು ಕಡಿಮೆ, ಪ್ರಚಾರ ಮಾಡೋದು ಜಾಸ್ತಿ. ನಾವು(ಕಾಂಗ್ರೆಸ್) ಮಾಡಿರುವ ಅಭಿವೃದ್ಧಿ ಕೆಲಸವನ್ನು ತಾವು(ಬಿಜೆಪಿ) ಮಾಡಿದ್ದು ಎಂದು ಹೇಳಿಕೊಳ್ಳೋದು ಬಿಜೆಪಿಯವರ ಚಾಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಸೋಮವಾರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಯ ಒಟ್ಟು 490.97 ಕೋಟಿ ಮೊತ್ತದ ಕಾಮಗಾರಿಗೆ ಶಿಲಾನ್ಯಾಸ ಹಾಗೂ ರಾಜ್ಯ ಸರಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ನಾವು ಮಾಡಿರುವ ಕೆಲಸವನ್ನು ಅವರು ಮಾಡಿರುವುದಾಗಿ ಹೇಳಿಕೊಳ್ಳುತ್ತಾರೆಂದು ಶಾಸಕ ಗೋಪಾಲ ಪೂಜಾರಿ ಅವರು ನೊಂದುಕೊಳ್ಳಬೇಕಾಗಿಲ್ಲ. ಯಾಕೆಂದರೆ […]

ಮುಖ್ಯಮಂತ್ರಿ ಭೇಟಿಗೆ ಪೂರ್ವಭಾವಿ ಸಭೆ

Friday, December 22nd, 2017
chief-minister

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.8 ರಂದು ಉಡುಪಿ ಜಿಲ್ಲೆಗೆ ನೀಡುವ ಭೇಟಿ ಸಂಬಂಧ ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲೆಯ ಬೈಂದೂರು, ಬ್ರಹ್ಮಾವರ ಮತ್ತು ಕಾಪುವಿನಲ್ಲಿ ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳು ಉಂಟಾಗ ದಂತೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸು ವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಿ, […]

ಕರಾವಳಿಯಲ್ಲಿ ನಾವಿಕನಿಲ್ಲದ ಹಡಗಿನಂತಾದ ಕಾಂಗ್ರೆಸ್ !

Wednesday, February 13th, 2013

ಮಂಗಳೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಅಥವಾ ಕುಂದಾಪುರ ಕ್ಷೇತ್ರಗಳ ಪೈಕಿ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿ ಭಾರೀ ಲಾಭಿ ನಡೆಸುತ್ತಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಾಜಿ ಶಾಸಕ ಗೋಪಾಲ ಪೂಜಾರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀ ನಾಮೆ ನೀಡಿದ್ದು, ಪರಿಣಾಮವಾಗಿ ಪಕ್ಷ ಉಡುಪಿ ಜಿಲ್ಲೆಯಲ್ಲಿ ನಾವಿಕನಿಲ್ಲದ ಹಡಗಿನಂತಾಗಿದೆ ಎಂಬ ಅಭಿಪ್ರಾಯ ಪಕ್ಷದೊಳಗೆ ವ್ಯಾಪಕವಾಗಿದೆ. ಎಂ.ಎ.ಗಫೂರ್ ಕೆಪಿಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಳಿಕ ಅವರಿಂದ ತೆರವಾದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬೈಂದೂರಿನ ಮಾಜಿ ಶಾಸಕ, ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮಿ […]