ಕಾಸರಗೋಡು : ಅಡ್ಕತ್ತಬೈಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

Wednesday, October 16th, 2019
kasaragod

ಕಾಸರಗೋಡು : ರಾಷ್ಟೀಯ ಹೆದ್ದಾರಿಯ ಅಡ್ಕತ್ತಬೈಲ್ ನಲ್ಲಿ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಅ. 16 ರ ಬುಧವಾರ ಮುಂಜಾನೆ ನಡೆದಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪರಿಸರವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಸೋರಿಕೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಅಡ್ಕತ್ತಬೈಲ್ ಶಾಲೆಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಪಘಾತದ ಹಿನ್ನಲೆಯಲ್ಲಿ […]

ಗ್ಯಾಸ್ ಟ್ಯಾಂಕರ್ ಹಾಗು ಟೂರಿಸ್ಟ್ ಕಾರು ಭೀಕರ ಅಪಘಾತ ; ನಾಲ್ವರು ಮೃತ್ಯು

Friday, July 19th, 2019
accident

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಹಾಗು ಟೂರಿಸ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಸಮೀಪ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟವರು ಭಟ್ಕಳ ನಿವಾಸಿಗಳು ಎಂದು ತಿಳಿದು ಬಂದಿದ್ದು, ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಬ್ರಹ್ಮರಕೂಟ್ಲು ಮೇಲ್ಸೆತುವೆ ಸಮೀಪ ಢಿಕ್ಕಿಯಾಗಿದೆ. ಘಟನೆಯಿಂದ ನಾಲ್ವರು ಮೃತಪಟ್ಟಿದ್ದು, ಉಳಿದವರು ಗಂಭಭೀರವಾಗಿ ಗಾಯಗೊಂಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.  ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸ್ […]

ತಲಪಾಡಿ : ಗ್ಯಾಸ್ ಟ್ಯಾಂಕರ್ ನಲ್ಲಿ ಸೋರಿಕೆ ಸಂಚಾರ ಅಸ್ಥವ್ಯಸ್ಥ

Tuesday, March 12th, 2019
Gas-Tanker

ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಹಳೆ ಆರ್.ಟಿ.ಒ ಬಳಿ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಒಂದರಿಂದ ಗ್ಯಾಸ್ ಸೋರಿಕೆ  ಉಂಟಾದ ಘಟನೆ ಮಂಗಳವಾರ ಸಂಜೆ 6 ಘಂಟೆಯ ಸುಮಾರಿಗೆ  ನಡೆದಿದೆ. ಮಂಜೇಶ್ವರ ಪೊಲೀಸರಿಗೆ ಹಾಗೂ ಅಗ್ನಿ ಶಾಮಕ ದಳಕ್ಕೆ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಘಟನೆ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸುರಕ್ಷಾ ಕಾರ್ಯ ನಡೆಸಿದ್ದಾರೆ. ಗ್ಯಾಸ್ ಸೋರಿಕೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ಥವ್ಯಸ್ಥಗೊಂಡಿತ್ತು.

ಟ್ಯಾಂಕರ್ ಮತ್ತು ಸರಕಾರಿ ಬಸ್ ಢಿಕ್ಕಿ: ಇಬ್ಬರಿಗೆ ಗಾಯ

Tuesday, December 4th, 2018
Accident

ಮಂಗಳೂರು: ಕಣ್ಣೂರು ಸಮೀಪದ ಕೊಡಕ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಮತ್ತು ಸರಕಾರಿ ಬಸ್ ನಡುವೆ ಅಪಘಾತ ನಡೆದಿದೆ. ಅಪಘಾತದಿಂದ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿ.ಸಿ‌.ರೋಡ್ ನಿಂದ ಮಂಗಳೂರಿಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಹೆದ್ದಾರಿ ಪಕ್ಕ ನಿಂತಿದ್ದ ಶಾಲಾ ವಾಹನ ಹಠಾತ್ ತಿರುಗಿಸಿದ ವೇಳೆ ಟ್ಯಾಂಕರ್ ಚಾಲಕ ಬ್ರೇಕ್ ಹಾಕಿದ್ದು, ಈ ಸಂದರ್ಭ ಧರ್ಮಸ್ಥಳದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಹಿಂಬದಿಯಿಂದ ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ಗ್ಯಾಸ್ ಟ್ಯಾಂಕರ್‌ ಪಲ್ಟಿ

Tuesday, December 13th, 2016
Lpg-bullet-tanker

ಪುತ್ತೂರು: ಗ್ಯಾಸ್ ಟ್ಯಾಂಕರ್‌ವೊಂದು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಗ್ಯಾಸ್ ಟ್ಯಾಂಕರ್‌ ಪಲ್ಟಿಯಾದ ಪರಿಣಾಮ ಗ್ಯಾಸ್‌‌ ಸೋರಿಕೆಯಾಗುತ್ತಿದೆ. ಇದರಿಂದ ಕೆಲಹೊತ್ತು ಆತಂಕಕ್ಕೆ ಕಾರಣವಾಗಿತ್ತು. ಆದ್ರೆ, ಹೆಚ್.ಪಿ.ಸಿ.ಎಲ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಗ್ಯಾಸ್ ಶಿಫ್ಟ್ ಮಾಡುವ ಕಾರ್ಯ ಆರಂಭಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸಿದಂತೆ ಮುನ್ನೆಚ್ಚೆರಿಕ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ತೆರಳುವ ವಾಹನಗಳಿಗೆ ಪೊಲೀಸರು ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರು […]

ಗ್ಯಾಸ್ ಟ್ಯಾಂಕರ್ ಮತ್ತು ಟ್ರ್ಯಾಕ್ಸ್ ತೂಫಾನ್ ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ

Tuesday, June 3rd, 2014
Shiradi Accident

ಮಂಗಳೂರು : ಗ್ಯಾಸ್ ಟ್ಯಾಂಕರ್ ಮತ್ತು ಟ್ರ್ಯಾಕ್ಸ್ ತೂಫಾನ್ ನಡುವೆ ಶಿರಾಡಿಯ ಅಡ್ಡಹೊಳೆ ಸಮೀಪ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, 13 ಜನರು ಗಾಯಗೊಂಡಿದ್ದಾರೆ. ತೂಫಾನ್‌ ಚಾಲಕ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ದಾವಣಗೆರೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸುಬ್ರಮಣ್ಯ ದೇವರ ದರ್ಶನ ಪಡೆದು ರಾಷ್ಟ್ರೀಯ ಹೆದ್ದಾರಿ 75ರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದಾಗ, ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಸೋಮವಾರ ತೂಫಾನ್‌ ವಾಹನಕ್ಕೆ ಗ್ಯಾಸ್ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಮೃತಪಟ್ಟವರನ್ನು ತೂಫಾನ್ […]