ಗುಜರಿ ಗ್ಯಾಸ್ ಸಿಲಿಂಡರ್ ಸ್ಫೋಟ : ಇಬ್ಬರು ಸಜೀವ ದಹನ

Monday, March 21st, 2022
Gas Cylinder Blast

ಉಡುಪಿ : ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ಮಲ್ಲಾರು ಸಲಫಿ ಮಸೀದಿ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ನಡೆದಿದೆ. ಚಂದ್ರನಗರದ ರಜಬ್ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೋರ್ವ ಪಾಲುದಾರ ಹಸನಬ್ಬ, ಬೆಳಪು ಗ್ರಾಪಂ ಸದಸ್ಯ ಫಹೀಮ್ ಬೆಳಪು ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ, ಬೆಂಕಿ […]

ಗ್ಯಾಸ್​ ಸಿಲಿಂಡರ್​ ಸ್ಫೋಟ..ಸ್ಥಳದಲ್ಲೇ ಐದು ಮಂದಿ ಸಾವು..!

Tuesday, July 24th, 2018
blasted

ಆಗ್ರಾ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲೇ ಐದು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಗ್ರಾದ ಇರಾದತ್ ನಗರದಲ್ಲಿ ಸೋಮವಾರ ನಡೆದಿದೆ. ದುರ್ಘಟನೆಯಲ್ಲಿ ಐದು ಜನ ಸಜೀವ ದಹನವಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಶಾಸಕ ಮಹೇಶ್ ಗೋಯಲ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ […]

ಗ್ಯಾಸ್ ಸಿಲಿಂಡರ್ ನ ತೂಕಕ್ಕೆ ಕ್ರಮ: ಬಳಕೆದಾರರ ವೇದಿಕೆ ಸ್ವಾಗತ

Tuesday, July 15th, 2014
Gas

ಮಂಗಳೂರು: ಪ್ರತೀ ಗ್ರಾಹಕರ ಎದುರೇ ಗ್ಯಾಸ್ ಸಿಲಿಂಡರ್ ತೂಕ ಮಾಡಿ ಕೊಡುವ ಮೂಲಕ ಸುಪ್ರೀಮ್ ಕೋರ್ಟ್ ನ ಆದೇಶವನ್ನು ಪಾಲಿಸಬೇಕು ಎಂದಿರುವ ದ.ಕ.ಜಿಲ್ಲಾಧಿಕಾರಿಯವರ ಹೇಳಿಕೆಯನ್ನು ಗ್ಯಾಸ್ ಮತ್ತು ಬಳಕೆದಾರರ ವೇದಿಕೆ ಸ್ವಾಗತಿಸಿದೆ. ಇದರಿಂದ ಗ್ರಾಹಕರಿಗೆ ತಮಗೆ ಸರಿಯಾಗಿ ತೂಗಿ ಕೊಡಲಾಗುತ್ತಿದೆ ಎಂಬ ವಿಶ್ವಾಸ ಮೂಡುವುದಲ್ಲದೆ ಗ್ಯಾಸ್ ಕಡಿಮೆ ಮಾಡಿ ಕೊಡಲಾಗುತ್ತದೆ ಎಂಬ ದೂರುಗಳಿಗೆ ಕಡಿವಾಣ ಹಾಕಬಹುದಾಗಿದೆ. ಗ್ಯಾಸ್ ಮತ್ತು ಬಳಕೆದಾರರ ವೇದಿಕೆ ಈ ಬೇಡಿಕೆಯನ್ನು ಈ ಹಿಂದೆ ಹಲವು ಬಾರಿ ಅಧಿಕಾರಿಗಳ ಮುಂದೆ ಪ್ರಸ್ತಾಪಿಸಿದೆಯಾದರೂ ಅದರ ಜಾರಿಗೆ […]

ಅಕ್ರಮ ಗ್ಯಾಸ್ ತುಂಬಿಸುವ ಮನೆ ಪತ್ತೆ.17 ಗ್ಯಾಸ್ ಸಿಲಿಂಡರ್‌ ವಶ

Thursday, August 22nd, 2013
Gas house

ಮಂಗಳೂರು : ಮಂಗಳೂರು ತಹಶೀಲ್ದಾರ್ ಲಂಬಾಣಿ ನೇತೃತ್ವದಲ್ಲಿ ಕಂಕನಾಡಿ ಕುದ್ಕೋರಿಗುಡ್ಡೆಯ ಮನೆಯೊಂದಕ್ಕೆ ದಾಳಿ ನಡೆಸಿ ಅಕ್ರಮ ಗ್ಯಾಸ್ ಸಿಲಿಂಡರ್ ಸಂಗ್ರಹಿಸಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿ 17 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕುದ್ಕೋರಿಗುಡ್ಡೆಯ ರಾಧಾಕೃಷ್ಣ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ತಹಶೀಲ್ದಾರ್ ದಾಳಿ ನಡೆಸದಾಗ ಆತನ ಮನೆಯಲ್ಲಿ 3 ಗೃಹ ಬಳಕೆಯ ಸಿಲಿಂಡರ್, 4 ವಾಣಿಜ್ಯ ಬಳಕೆಯ ಸಿಲಿಂಡರ್ ಮತ್ತು 10 ಕಿಟ್‌ಗಳನ್ನು ಪತ್ತೆ ಪತ್ತೆಯಾಗಿದೆ. ಈತ ತನ್ನ ಮನೆಯಲ್ಲಿ ಅಕ್ರಮವಾಗಿ ಆಟೋ ಸಿಲಿಂಡರ್‌ಗಳಿಗೆ ಗ್ಯಾಸ್‌ನ್ನು […]

ಕಣ್ಣೂರಿನ ಗ್ಯಾರೇಜ್ ನಲ್ಲಿ ಗ್ಯಾಸ್ ಸಿಲಿಂಡರ್ ಗೆ ಬೆಂಕಿ, ತಪ್ಪಿದ ಅನಾಹುತ

Tuesday, July 9th, 2013
padil garege

ಮಂಗಳೂರು: ಕಣ್ಣೂರಿನ ಕೊಡಕ್ಕಲ್ ನ ಹಿಂದೂಸ್ತಾನ್ ಅಟೋ ವರ್ಕ್ಸ್ ನಲ್ಲಿ ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ಸಿಲಿಂಡರ್ ಗೆ ಬೆಂಕಿ ತಗುಲಿ ಬೆಂಕಿ ಹತ್ತಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಳ್ಳದಿದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಕಾರ್ಬೊಹೈಡ್ರೆಡ್ ಗ್ಯಾಸ್ ಇರುವ ಸಿಲಿಂಡರ್ ಗೆ ಬೆಂಕಿ ಹತ್ತಿಕೊಂಡ ಕೂಡಲೇ ಗ್ಯಾರೇಜ್ ಸಿಬ್ಬಂದಿಗಳೇ  ನೀರು ಹಾಕಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿ 40 ನಿಮಿಷ ಕಳೆದರೂ ಘಟನಾ ಸ್ಥಳಕ್ಕೆ ಬರಲಿಲ್ಲ ಎಂದು […]