ಕುಮಾರಧಾರಾ ನದಿಗೆ ಬಿದ್ದ ಟ್ಯಾಂಕರ್

Wednesday, August 10th, 2016
Gas-Tanker

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಣೆ ಮಾಡುತ್ತಿದ್ದ ಎಚ್‌ಪಿಸಿಎಲ್‌ ಕಂಪನಿಗೆ ಸೇರಿದ ಟ್ಯಾಂಕರ್ ಕುಮಾರಧಾರಾ ನದಿಗೆ ಬಿದ್ದಿದೆ. ಟ್ಯಾಂಕರ್‌ನಿಂದ ಭಾರೀ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿದ್ದು, ಆತಂಕ ಸೃಷ್ಟಿಯಾಗಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಉಪ್ಪಿನಂಗಡಿ ಬಳಿಯ ಉದನೆ ನರ್ಸರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ನದಿಗೆ ಉರುಳಿ ಬಿದ್ದಿದೆ. ಲಾರಿ ಸೇತುವೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬ್ರೇಕ್ ಹಾಕಿದಾಗ ಟ್ಯಾಂಕರ್ ನದಿಗೆ ಉರುಳಿದೆ. ಕುಮಾರಧಾರಾ ನದಿಗೆ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕೆಲವು ಹೊತ್ತು […]

ನಗರದ ಬೈಕಂಪಾಡಿ ,ಯೆಯ್ಯಾಡಿ ಮತ್ತು ಕೊಂಚಾಡಿ ಪರಿಸರದಲ್ಲಿ ಗ್ಯಾಸ್ ಸೋರಿಕೆ

Friday, September 20th, 2013
gas-leak

ಮಂಗಳೂರು : ನಗರದ ಬೈಕಂಪಾಡಿ ,ಯೆಯ್ಯಾಡಿ ಮತ್ತು ಕೊಂಚಾಡಿ ಪರಿಸರದಲ್ಲಿ  ಗ್ಯಾಸ್ ಸೋರಿಕೆಯ ದಟ್ಟ ವಾಸನೆ ಅನುಭವಕ್ಕೆ ಬರುತ್ತಿರುವುದರಿಂದ ಜನರು ಭಯ ಭೀತರಾಗಿದ್ದಾರೆ. ಕೆಲವು ಮೂಲಗಳ ಪ್ರಕಾರ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಗ್ಯಾಸ್ ಸೋರಿಕೆಯಾಗಿದೆ ಎಂದು ವರದಿಯಾಗಿತ್ತು ಇನ್ನೂ ಕೆಲವರು ಎಮ್‌ಆರ್‌ಪಿಎಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿದೆ ಎಂದು ವದಂತಿ ಹಬ್ಬಿಸಿದ್ದರು,ಆದರೆ ಇಲ್ಲಿಯವರೆಗೆ ಯಾವುದೇ ಗ್ಯಾಸ್ ಸೋರಿಕೆ ಕಂಡು ಬಂದಿಲ್ಲ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಅವರು ಜನರು ಭಯ ಪಡುವ ಅಗತ್ಯವಿಲ್ಲ. ಸಂಬಂಧಪಟ್ಟವರಿಗೆ ಈಗಾಗಲೇ ಗ್ಯಾಸ್ ವಾಸನೆ […]