ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಅಣ್ಣ

Sunday, July 25th, 2021
Rafeeq

ಕಾಸರಗೋಡು : ಸೀತಾಂಗೋಳಿಯ ಮುಗು ಎಂಬಲ್ಲಿ ತಮ್ಮನನ್ನು ಅಣ್ಣ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಕೊಲೆಗೀಡಾದವರನ್ನು ಮುಗು ಉರ್ಮಿಯ ಅಬ್ದುಲ್ಲ ಮುಸ್ಲಿಯಾರ್ ರವರ ಪುತ್ರ ನಿಸಾರ್ (29) ಎಂದು ಗುರುತಿಸಲಾಗಿದೆ. ಸಹೋದರ ರಫೀಕ್ (31)ನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಿಸಾರ್‌‌ನನ್ನು ಕೂಡಲೇ ಕುಂಬಳೆಯ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಬದಿಯಡ್ಕ ಠಾಣಾ ಪೊಲೀಸರು ಘಟನಾ ಸ್ಥಳಕ್ಕಾಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಚಾಕುವಿನಿಂದ ಇರಿದು ಹತ್ಯೆ

Wednesday, October 21st, 2020
Surendra Bantwal

ಮಂಗಳೂರು : ರೌಡಿಶೀಟರ್, ತುಳು ನಟ ಸುರೇಂದ್ರ ಬಂಟ್ವಾಳರನ್ನು ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್ನಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್ನಲ್ಲಿ ಸುರೇಂದ್ರರನ್ನು ಹತ್ಯೆಗೈಯ್ಯಲಾಗಿದೆ. ಸುರೇಂದ್ರ ಬಂಟ್ವಾಳ ಅವರು ಚಾಲಿಪೋಲಿಲು ತುಳು ಚಲನಚಿತ್ರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪಾತ್ರ ನಿರ್ವಹಿಸಿದ್ದರು. ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಅಂದಾಜಿಸಲಾಗಿದೆ. ಇಂದು ಮಧ್ಯಾಹ್ನದವರೆಗೆ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ‌. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, […]

ಟಿಕ್‌ ಟಾಕ್‌ ವಿಡಿಯೋ ಮಾಡಿದ್ದಕ್ಕೆ ಗಂಡ ಮಾಡಿದ್ದೇನು ಗೊತ್ತಾ ?

Friday, January 31st, 2020
shrinivas

ಮೈಸೂರು : ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಪತಿರಾಯನೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಶ್ರೀನಿವಾಸ್ ಎಂಬಾತನು ಕಳೆದ 10 ವರ್ಷಗಳ ಹಿಂದೆ ಸವಿತಾ ಎಂಬುವವರನ್ನು ಮದುವೆಯಾಗಿದ್ದ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಆಗಾಗ ಇವರ ಮಧ್ಯೆ ಜಗಳ ನಡೆಯುತ್ತಲೇ ಇತ್ತಂತೆ.ಇವರಿಬ್ಬರ ಮಧ್ಯೆ ಮತ್ತೆ ಜಗಳವಾಗಿದ್ದು, ಕೋಪಗೊಂಡ ಶ್ರೀನಿವಾಸ್ ತನ್ನ ಪತ್ನಿ ಸವಿತಾ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಪರಿಣಾಮ ಸವಿತಾ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.ಇನ್ನು ಶ್ರೀನಿವಾಸ್, ನನ್ನ ಹೆಂಡ್ತಿಯನ್ನು […]

ಬಟ್ಟೆ ಅಂಗಡಿ ನೌಕರ ಸಾಬಿತ್ ಕೊಲೆ ಪ್ರಕರಣ ಐವರು ಆರೋಪಿಗಳ ಸೆರೆ

Sunday, July 14th, 2013
Sabith Murder

ಕಾಸರಗೋಡು:  ಬೆನಜ್ಹೀರ್ ಬಟ್ಟೆ ಮಳಿಗೆಯ ನೌಕರ ಮೀಪುಗುರಿಯ ಟಿ.ಎ. ಸಾಬಿತ್ ನನ್ನು ಜುಲೈ 7 ರಂದು ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಹಿತ ಐವರನ್ನು ಸರ್ಕಲ್ ಇನ್ಸ್ ಪೆಕ್ಟರ್ ಸಿ.ಕೆ. ಸುನಿಲ್ ಕುಮಾರ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಪ್ರಮುಖ ಆರೋಪಿಗಳಾದ ಅಣಂಗೂರು ಜೆ.ಪಿ. ಕಾಲನಿಯ ಕೆ. ಅಕ್ಷಯ್(21), ಕಾಳ್ಯಂಗಾಡಿನ ಕೆ.ಎನ್. ವೈಶಾಖ್(19) ಹಾಗೂ ಜೆ.ಪಿ. ಕಾಲನಿಯ ಆರ್. ಬಿಜೇಶ್(20), ಕೆ. ಸಚಿನ್ ಕುಮಾರ್(19) ಮತ್ತು 17ರ ಹರೆಯದ ಜುವೆನೈಲ್ ಬಂಧನಕ್ಕೊಳಗಾಗಿದ್ದಾರೆ. ಅಕ್ಷಯ್ ಮತ್ತು ವೈಶಾಖ್ […]