ಜೈನಧರ್ಮವನ್ನು ಉಳಿಸುವುದಕ್ಕಿಂತ ಪಾಲಿಸುವ ಪ್ರಯತ್ನ ಮಾಡಬೇಕು : ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ

Saturday, February 24th, 2024
venuru

ವೇಣೂರು: ಜೈನಧರ್ಮವನ್ನು ಉಳಿಸುವುದಕ್ಕಿಂತ ಅದರ ತತ್ವ –ಸಿದ್ಧಾಂತಗಳನ್ನು ನಿತ್ಯವೂ ಮನ,ವಚನ ಮತ್ತು ಕಾಯದಿಂದ ತ್ರಿಕರಣಪೂರ್ವಕವಾಗಿ ಪಾಲಿಸುವ ಪ್ರಯತ್ನ ಮಾಡಬೇಕು ಎಂದು ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಶನಿವಾರ ವೇಣೂರಿನಲ್ಲಿ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಅಯೋಜಿಸಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ತೀರ್ಥಂಕರರು ಜೈನಧರ್ಮ ಪ್ರಚಾರಕರಲ್ಲ, ಧರ್ಮ ಪ್ರಭಾವಕರು ಎಂದು ಅವರು ಸ್ಪಷ್ಟಪಡಿಸಿದರು. ಅಂತರಂಗದಲ್ಲಿಯೂ, ಬಹಿರಂಗದಲ್ಲಿಯೂ ಅಹಿಂಸಾಧರ್ಮದ ಪಾಲನೆ ಮಾಡಬೆಕು. ಮಹಾವೀರ ತೀರ್ಥಂಕರರು ಉಪದೇಶ ಮಾಡಿದ ಸರ್ವೋದಯ ತೀರ್ಥವನ್ನು ಯಾರು ನಿತ್ಯವೂ ಪಾಲನೆ […]

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 74ನೆ ವರ್ಷದ ಜನ್ಮ ದಿನಾಚರಣೆ

Thursday, November 25th, 2021
Veerendra Hegde Birthday

ಉಜಿರೆ: ಧರ್ಮಸ್ಥಳದಲ್ಲಿ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 74ನೆ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ದೇವಳದ ನೌಕರರು, ಊರಿನ ನಾಗರಿಕರು, ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ,  ಆಪ್ತರು, ಅಭಿಮಾನಿಗಳು ಹಾಗೂ ಭಕ್ತರು ಶ್ರದ್ಧಾ-ಭಕ್ತಿಯಿಂದ ಹೆಗ್ಗಡೆಯವರಿಗೆ ಜನ್ಮ ದಿನದ ಶುಭಾಶಯ ಅರ್ಪಿಸಿದರು. ಮೂಡಬಿದ್ರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆ ದಂಪತಿಗಳಿಗೆ ವಿಶೇಷ ಪ್ರಸಾದ ನೀಡಿ ಶುಭ ಹಾರೈಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪಟ್ನಶೆಟ್ಟಿ ಸುಧೇಶ್ ಕುಮಾರ್ ಜೈನ್, ಬಸದಿಗಳ ಆಡಳಿತ ಮೊಕ್ತೇಸರ ಆನಡ್ಕ […]