ನಿಯಂತ್ರಣ ತಪ್ಪಿದ ಮೈನ್ಸ್ ಸಾಗಾಟದ ಲಾರಿ, ಪೊಲೀಸ್ ಕಾಸ್ಟೇಬಲ್ ಸಹಿತ ಹಲವರಿಗೆ ಗಾಯ

Thursday, December 7th, 2023
lorry

ಮಂಗಳೂರು: ಲಾರಿ ಚಾಲಕನೋರ್ವ ನಿಯಂತ್ರಣ ತಪ್ಪಿ ಚಾಲನೆ ಮಾಡಿ ರಸ್ತೆ ಬದಿಯಲ್ಲಿದ್ದ ವಾಹನ ಹಾಗೂ ಹಲವರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಮುಲ್ಕಿಯಲ್ಲಿ ನಡೆದಿದೆ. ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಜಂಕ್ಷನ್ ನಲ್ಲಿ ಉಡುಪಿ ಕಡೆಯಿಂದ ಬಂದ ಮೈನ್ಸ್ ಸಾಗಾಟದ ಖಾಲಿ ಲಾರಿ ಅತೀ ವೇಗದಿಂದ ಏಕಾಏಕಿ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಸ್ಕೂಟರ್, ಒಂದು ಆಟೋಗೆ ಡಿಕ್ಕಿ ಹೊಡೆದಿದ್ದು ಎರಡು ವಾಹನವೂ ಪಲ್ಟಿಯಾಗಿ ರಸ್ತೆಯಿಂದ ಎಸೆಯಲ್ಪಟ್ಟಿದೆ. ಜೊತೆಗೆ ಅಲ್ಲೇ ಇದ್ದ […]

ಬಸ್ ನಲ್ಲಿ ಕೋಳಿ ಮಾಂಸ ಹಿಡಿದುಕೊಂಡ ಪ್ರಯಾಣಿಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಚಾಲಕ

Monday, October 16th, 2023
ksrtc-chicken

ಬಂಟ್ವಾಳ : ಕೋಳಿ ಮಾಂಸ ಹಿಡಿದುಕೊಂಡು ಪ್ರಯಾಣಿಕನೋರ್ವ ಬಸ್ ಹತ್ತಿದ ಕಾರಣಕ್ಕಾಗಿ ನಿರ್ವಾಹಕ ಅವಾಚ್ಯ ಶಬ್ದದಿಂದ ಬೈದುದಲ್ಲದೆ, ಚಾಲಕ ಪ್ರಯಾಣಿಕರನ್ನು ಕೂರಿಸಿಕೊಂಡ ಬಸ್ಸನ್ನು ನೇರವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ತಂದ ಘಟನೆ ನಡೆದಿದೆ. ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ – ಪುತ್ತೂರು ನಡುವೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಸುರೇಶ್ ಎಂಬವರು ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಇದರ ಬಗ್ಗೆ ವಿಚಾರಿಸಿದ್ದಾರೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದಾಗ ಬಸ್ […]

ಚಾಲಕ, ಕೃಷಿಕ ಇರಾ ಆಚೇಬೈಲು ಪದ್ಮನಾಭ ನಿಧನ

Friday, August 6th, 2021
padmanabha

ಮಂಗಳೂರು : ಬಂಟ್ವಾಳ ತಾಲೂಕು ಇರಾ ಆಚೇಬೈಲು ಪದ್ಮನಾಭ ಬೆಳ್ಚಡ್ಡ (63) ನಿಧನರಾಗಿದ್ದಾರೆ. ಚಾಲಕರಾಗಿದ್ದ ಅವರು ಕೃಷಿಕರಾಗಿಯೂ ಇದ್ದರು. ಅಲ್ಪಕಾಲದ ಅಸೌಖ್ಯದ ಬಳಿಕ ಅವರು ಶುಕ್ರವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಇಬ್ಬರು ಪುತ್ರಿಯರು, ಒಬ್ಬ ಪುತ್ರನನ್ನ ಅಗಲಿದ್ದಾರೆ.

ಟ್ರ್ಯಾಕ್ಟರ್ ಹರಿದು ಬಾಲಕ ಸಾವು, ನೊಂದು ಚಾಲಕ ವಿಷ ಸೇವಿಸಿ ಆತ್ಮಹತ್ಯೆ

Friday, July 9th, 2021
tractor

ಚಾಮರಾಜನಗರ: ಸವಕನಪಾಳ್ಯದಲ್ಲಿ ಕ್ರಿಕೆಟ್ ಮೈದಾನ ನಿರ್ಮಾನಕ್ಕಾಗಿ ನೆಲವನ್ನು ಸಮತಟ್ಟು ಮಾಡುವಾಗ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ.  ಇದರಿಂದ  ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ. ಚಾಲಕ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡಿದ್ದು ಈತ ಚಲಾಯಿಸಿದ್ದ ಟ್ರ್ಯಾಕ್ಟರ್ ಅಡಿಯಲ್ಲಿ ಸಿಕ್ಕು ಹರ್ಷ (5) ಎಂಬ ಬಾಲಕ ಸಾವನ್ನಪ್ಪಿದ್ದನು. ಗಮನಾರ್ಹ ಸಂಗತಿ ಎಂದರೆ ಚಾಲಕ ಸುನಿಲ್ ಪಿಎಚ್ ಡಿ ವಿದ್ಯಾರ್ಥಿಯಾಗಿದ್ದ. ಘಟನೆ ಸಂಬಂಧ ಬೇಗೂರು […]

ಹೊತ್ತಿ ಉರಿದ ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ : ಚಾಲಕ ಸಜೀವ ದಹನ

Thursday, March 25th, 2021
lorry

ನೆಲ್ಯಾಡಿ : ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಢಿಕ್ಕಿಹೊಡೆದ ಪರಿಣಾಮ ಬೆಂಕಿ ಅವರಿಸಿಕೊಂಡು ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಮಾರ್ಚ್ 24 ರ ಬುಧವಾರ ತಡರಾತ್ರಿ ನಡೆದಿದೆ. ಘಟನೆಯ ಪರಿಣಾಮ ಬಸ್ ಸಂಪೂರ್ಣ ಭಸ್ಮಗೊಂಡಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಟ್ರಾವೆಲ್ಸ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪ ಮಣ್ಣಗುಡ್ಡ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. […]

ಟ್ಯಾಂಕರ್ ಪಲ್ಟಿ : ಬಾಟಲ್, ಕ್ಯಾನ್, ಬಕೆಟ್​ಗಳಲ್ಲಿ ಪುಕ್ಸಟ್ಟೆ ಡೀಸೆಲ್ ತುಂಬಿಸಿ ಕೊಂಡ ಜನ

Saturday, March 13th, 2021
Tanker

ಉಪ್ಪಿನಂಗಡಿ:  ಮಂಗಳೂರಿನಿಂದ ಕೋಲಾರ ಕಡೆಗೆ ಹೋಗುತ್ತಿದ್ದ  ಡೀಸೆಲ್ ತುಂಬಿದ್ದ ಟ್ಯಾಂಕರ್ ಮಗುಚಿ ಬಿದ್ದು ಡೀಸೆಲ್ ಸೋರಿಕೆಯಾದ ಘಟನೆ ಶನಿವಾರ  ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಡೀಸೆಲ್ ಟ್ಯಾಂಕರ್ ಚಾಲಕ ಮಹೇಶ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್ ಮಂಗಳೂರಿನಿಂದ ಕೋಲಾರ ಕಡೆಗೆ ಹೋಗುತ್ತಿತ್ತು, ಟ್ಯಾಂಕರ್ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದ್ದರಿಂದ ಸ್ವಲ್ಪ ಸಮಯ ಸಂಚಾರಕ್ಕೆ ಅಡ್ಡಿಯಾಗಿತ್ತು. ಟ್ಯಾಂಕರ್ ಮಗುಚಿ ಬಿದ್ದ ಸಮಯದಲ್ಲಿ ಸ್ಥಳೀಯರು ಹಾಗೂ ಇತರೆ ವಾಹನ ಚಾಲಕರು ಬಾಟಲ್, ಕ್ಯಾನ್, ಬಕೆಟ್ಗಳಲ್ಲಿ ಡೀಸೆಲ್ ತುಂಬಿಸಲು […]

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ : ಬಾಟಲ್ ಎಗರಿಸಿದ ಬಿಯರ್ ಪ್ರಿಯರು

Sunday, January 17th, 2021
beer

ಸುಳ್ಯ  : ಮೈಸೂರಿನಿಂದ ಮಂಗಳೂರಿಗೆ ಬಿಯರ್ ಸಾಗಿಸುತ್ತಿದ್ದ ಲಾರಿಯೊಂದು ಸುಳ್ಯ ತಾಲೂಕಿನ ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ಜರುಗಿದ್ದು, ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಲಾರಿ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಲಾರಿಯಲ್ಲಿ ಸುಮಾರು ರೂ. 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ. ಬಿಯರ್ ಲಾರಿ ಮಗುಚಿ ಬಿದ್ದಿರುವುದು ಸಾಮಾಜಿಕ ಜಾಲತಾಣಗಳ […]

ಪುಣಚಾ ಪಾಲಾಸತ್ತಡ್ಕ ದಲ್ಲಿ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಚಾಲಕ ದಾರುಣ ಸಾವು

Wednesday, November 4th, 2020
Tipper

ವಿಟ್ಲ: ಪುಣಚಾ ಗ್ರಾಮದ ಪಾಲಾಸತ್ತಡ್ಕ ಎಂಬಲ್ಲಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಚಾಲಕ ದಾರುಣವಾಗಿ ಸಾವನ್ನಪ್ಪಿ,  ಕ್ಲೀನರ್ ಗೆ  ಗಾಯಗಳಾಗಿದೆ. ಪುಣಚಾ-ಪುತ್ತೂರು ರಸ್ತೆಯ ಪಾಲಾಸತ್ತಡ್ಕ ದಲ್ಲಿ ಬ್ರೇಕ್ ವೈಫಲ್ಲಕ್ಕೀಡಾದ ಟಿಪ್ಪರ್ ಲಾರಿ ರಸ್ತೆ ಬದಿ ಡಿಕ್ಕಿಹೊಡೆದು ಪಲ್ಟಿಯಾಗಿದೆ. ಅಪಘಾತದ ಸಂದರ್ಭ ಚಾಲಕ ರಫೀಕ್ ಟಿಪ್ಪರ್ ಲಾರಿಯಡಿಯಲ್ಲಿ ಸಿಲುಕಿ ಗಂಟೆಗಳ ಕಾಲ ಒದ್ದಾಡುತ್ತಿದ್ದರೂ ಟಿಪ್ಪರ್ ಮೇಲಕ್ಕೆತ್ತಲು ಸಾಧ್ಯವಾಗಲಿಲ್ಲ. ಬಳಿಕ ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ದರೂ ಅಷ್ಟರಲ್ಲಾಗಲೇ ಚಾಲಕ ರಫೀಕ್ ಪ್ರಾಣ ಬಿಟ್ಟಿದ್ದಾರೆ. ಕ್ಲೀನರ್ ಗೆ ಸಣ್ಣ […]

ಆಟೊ ರಿಕ್ಷಾ ಡಿಕ್ಕಿ : ಚಾಲಕ ಸಾವು, ಮೂವರಿಗೆ ಗಂಭೀರ ಗಾಯ

Wednesday, October 7th, 2020
AutoRikshaw

ಮಂಗಳೂರು  : ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ. ರಿಕ್ಷಾ ಚಾಲಕ ವಳಚ್ಚಿಲ್ ಪದವು ನಿವಾಸಿ ಸಲೀಂ ಮೃತಪಟ್ಟವರು. ಘಟನೆಯಲ್ಲಿ ಶಿಹಾಬ್ ಮತ್ತು ನಿಝಾಮುದ್ದೀನ್ ಎಂಬವರು ಗಾಯಗೊಂಡಿದ್ದಾರೆ. ಈ ಪೈಕಿ ಶಿಹಾಬ್‌ಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮಲ್ಪೆಯಿಂದ ಆಟೊ ರಿಕ್ಷಾದಲ್ಲಿ ಮೀನು ಹೇರಿಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಿಕರ್ನಕಟ್ಟೆ ತಲುಪಿದಾಗ ಆಟೊ ರಿಕ್ಷಾ ಚಾಲಕನ […]

ಮಂಗಳೂರು ಲೋಕಾಯುಕ್ತ ಇಲಾಖೆಯ ಚಾಲಕ ವಿಟ್ಲದ ನಿವಾಸಿ ಲಾಡ್ಜ್‌ನಲ್ಲಿ ನಿಗೂಢ ಆತ್ಮಹತ್ಯೆ..!

Thursday, August 13th, 2020
lokesh

ವಿಟ್ಲ ; ಮಂಗಳೂರು ಲೋಕಾಯುಕ್ತ ಇಲಾಖೆಯಲ್ಲಿ ಚಾಲಕರಾಗಿದ್ದ ಕೊಳ್ನಾಡು ಗ್ರಾಮದ ನಿವಾಸಿ ಚೆನ್ನರಾಯಪಟ್ಟಣದ ಲಾಡ್ಜ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ನಿಗೂಢವಾಗಿದೆ. ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಸೀನ ಆಚಾರ್ಯರ ಪುತ್ರ ಲೋಕೇಶ್೩೫)ಮೃತಪಟ್ಟ ಚಾಲಕ. ಕಳೆದ ಕೆಲವರ್ಷಗಳಿಂದ ಮಂಗಳೂರು ಲೋಕಾಯುಕ್ತ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯದಲ್ಲಿದ್ದ ಲೋಕೇಶ್ ಮಂಗಳವಾರ ಸಂಜೆಯಿಂದ ಮೇಲಾಧಿಕಾರಿಗಳಲ್ಲಿ ಮಾಹಿತಿ ನೀಡದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ನಂದಗೋಕುಲ ಲಾಡ್ಜ್ ನಲ್ಲಿ ಮಂಗಳವಾರ ರಾತ್ರಿ ೧೦ಗಂಟೆಯ ಸುಮಾರಿಗೆ ಲೋಕೇಶ್ ರೂಮ್ ಪಡೆದಿದ್ದರೆನ್ನಲಾಗಿದೆ. ಬುಧವಾರ […]