ದೊಣ್ಣೆ, ಲಾಠಿ, ಪೈಪ್‌ನಿಂದ ವಕೀಲನ ಮೇಲೆ ಹಲ್ಲೆ, ಆರು ಪೊಲೀಸರ ಅಮಾನತು

Saturday, December 2nd, 2023
advocate-preetham

ಚಿಕ್ಕಮಗಳೂರು : ಯುವ ವಕೀಲನ ಮೇಲೆ ದೊಣ್ಣೆ, ಲಾಠಿ, ಪೈಪ್‌ನಿಂದ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಪಿಎಸ್‌ಐ ಮಹೇಶ್ ಪೂಜಾರಿ ಸೇರಿ ಆರು ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಹಲ್ಲೆಗೊಳಗಾದವರನ್ನು ಪ್ರೀತಂ ಎಂದು ಗುರುತಿಸಲಾಗಿದ್ದು, ಇವರು ಗುರುವಾರ ರಾತ್ರಿ ಹೆಲ್ಮೆಟ್‌ ಇಲ್ಲದೆ ಮಾರ್ಕೇಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ಅಡ್ಡಗಟ್ಟಿದ ಪೊಲೀಸರು, ಅವರ ಬೈಕ್‌ನಿಂದ ಕೀ ಕಸಿದುಕೊಂಡಿದ್ದಾರೆ. ಹೆಲ್ಮೆಟ್ ಹಾಕದಿರುವುದಕ್ಕೆ ದಂಡ ಕಟ್ಟುತ್ತೇನೆ, ಕೀ ಕಸಿದುಕೊಳ್ಳಲು ನಿಮಗೆ […]

ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ಓರ್ವನನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

Wednesday, February 24th, 2021
Buss

ಉಪ್ಪಿನಂಗಡಿ:  ವಿದ್ಯಾರ್ಥಿನಿಯೋರ್ವಳಿಗೆ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿರುಕುಳ ನೀಡಿದ ಆರೋಪದಲ್ಲಿ ಉಪ್ಪಿನಂಗಡಿ ಪೊಲೀಸರು ಓರ್ವನನ್ನು  ವಶಕ್ಕೆ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಿವಾಸಿ ಸೈಪುಲ್ಲಾ (32) ಬಂಧಿತ ಆರೋಪಿಯಾಗಿದ್ದಾನೆ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್‍ನಲ್ಲಿ ಈ ಘಟನೆ ನಡೆದಿದ್ದು, ಈತ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದನ್ನು ಆಕ್ಷೇಪಿಸಿದ ವಿದ್ಯಾರ್ಥಿನಿ ಈ ಬಗ್ಗೆ ಬಸ್ಸಿನ ನಿರ್ವಾಹಕರಿಗೆ ದೂರು ನೀಡಿದ್ದು, ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂದೆ […]

ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ – ಭಾರಿ ಪ್ರಮಾಣದ ಖೋಟಾ ನೋಟು ವಶ

Monday, November 2nd, 2020
Counterfeit note

ವಿಟ್ಲ: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ಬರುತ್ತಿದ್ದ ಪುತ್ತೂರು ನೋಂದಣಿಯ ಮಾರುತಿ ಕಾರನ್ನು ತಡೆದ ಪೊಲೀಸರ ತಂಡ ತನಿಖೆ ನಡೆಸಿದಾಗ ಬರೋಬ್ಬರಿ 5,5೦ಲಕ್ಷ (500ರ ನೋಟುಗಳು) ನಕಲಿ ನೋಟುಗಳು ಪತ್ತೆಯಾಗಿದೆ. ಕಾರಿನಲ್ಲಿದ್ದ ಬೆಳ್ತಂಗಡಿಯ ಸಂತೋಷ್ ಮತ್ತು ಸುರತ್ಕಲ್ ನ ನಝೀರ್ ಎಂಬಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಅಂತರ್ರಾಜ್ಯ ಖೋಟಾನೋಟು ಜಾಲ ಬೆಳಕಿಗೆ ಬಂದಿದೆ. ದೇಶದ್ರೋಹ ಪ್ರಕರಣದ ಕಿಂಗ್ ಪಿನ್ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕರಾಯಿ […]

ಡೀಲ್‌ ವೇಳೆ ಮಾತಿನ ಚಕಮಕಿ : ಇಬ್ಬರಿಗೆ ಗುಂಡೇಟು

Friday, May 29th, 2020
fire

ಚಿಕ್ಕಮಗಳೂರು : ರಿಯಲ್‌ ಎಸ್ಟೇಟ್‌ ವ್ಯವಹಾರದ ಮಾತುಕತೆ ಸಮಯದಲ್ಲಿ ಮಾತಿನ ಚಕಮಕಿಯಿಂದ ಇಬ್ಬರ ಮೇಲೆ ಗುಂಡು ಹಾರಿಸಿದ ಘಟನೆ ಮೇ 28 ರಂದು ಕಡೂರು ತಾಲೂಕಿನ ಬಾಣೂರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರಿನ ಬಿಜೆಪಿ ಮುಖಂಡರೊಬ್ಬರ ಸಂಬಂಧಿ ಕಲ್ಯಾಣ ಕುಮಾರ ಹಾಗೂ ಉಪನ್ಯಾಸಕ ಸುಮಂತ ಎಂಬುವವರೇ ಗುಂಡೇಟು ತಿಂದವರು. ಬೆಂಗಳೂರಿನಿಂದ ರಿಯಲ್‌ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಆಗಮಿಸಿದ್ದ ವ್ಯಕ್ತಿಗಳೇ ಗುಂಡೇಟು ಹಾಕಿದ್ದಾರೆ. ಈಗ ಅವರು ಪರಾರಿಯಾಗಿದ್ದಾರೆ. ಈ ಬಗ್ಗೆ ಸಖರಾಯಪಟ್ಟಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಬ್ಬರ ದೇಹದಲ್ಲೂ ಗುಂಡುಗಳು […]

ಚಿಕ್ಕಮಗಳೂರು : ಗರ್ಭಿಣಿ , ವೈದ್ಯಾಧಿಕಾರಿ ಸೇರಿ ಐವರಿಗೆ ಕೊರೋನಾ

Wednesday, May 20th, 2020
corona Chikamagaluru

ಚಿಕ್ಕಮಗಳೂರು :  ಕೊಪ್ಪದ ಕೇಂದ್ರದಲ್ಲಿ ಕ್ವಾರಂಟೈನಲ್ಲಿದ್ದ ಮೂವರಿಗೆ ಕೋವಿಡ್-19 ಪತ್ತೆಯಾಗಿದೆ, ಕಾಫಿನಾಡಿನಲ್ಲಿ ಒಂದೇ ದಿನ ಐವರಿಗೆ ಸೋಂಕು ದೃಢಪಟ್ಟಿದೆ. ಮುಂಬೈನಿಂದ ಮರಳಿದ್ದ ಎನ್.ಆರ್.ಪುರ ತಾಲ್ಲೂಕಿನ ಕೆರೆಗದ್ದೆಯ ಈ ಮೂವರು ಕ್ವಾರಂಟೈನಲ್ಲಿದ್ದರು. 7 ವರ್ಷ ಮತ್ತು 10 ವರ್ಷದ ಬಾಲಕ, 17 ವರ್ಷದ ಯುವತಿಗೆ ಕೋವಿಡ್ ದೃಢಪಟ್ಟಿದೆ. ತರೀಕೆರೆಯ ಗರ್ಭಿಣಿ (27) ಮತ್ತು ಮೂಡಿಗೆರೆಯ ವೈದ್ಯಾಧಿಕಾರಿಗೆ ಕೋವಿಡ್ ಪತ್ತೆಯಾಗಿದೆ.

ಹೆಣ್ಣು ಮಗುವಿಂದ ಕಂಟಕ ಇದೆ ಎಂದು ಕತ್ತು ಹಿಸುಕಿ ಕೊಂದ ತಂದೆ

Wednesday, June 19th, 2019
manjunatha

ಚಿಕ್ಕಮಗಳೂರು: ತಂದೆಯೊಬ್ಬ ತನ್ನ ಸ್ವಂತ ಮಗುವನ್ನೇ ಕತ್ತು ಹಿಸುಕಿ ಕೊಂದಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ ನಲ್ಲಿ ನಡೆದಿದೆ. ಮಂಜುನಾಥ್( 27) ಕೊಲೆ ಮಾಡಿದ ಪಾಪಿ ತಂದೆ. ಹೆಣ್ಣು ಮಗು ಎಂಬ ಕಾರಣಕ್ಕೆ, ತಾಯಿ ಇಲ್ಲದ ವೇಳೆ ಒಂದೂವರೆ ತಿಂಗಳ ಕಂದನನ್ನ ಕೊಂದಿದ್ದಾನೆ. ಈ ಹೆಣ್ಣು ಮಗುವಿನಿಂದ  ನಿನ್ನ ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿಯೊಬ್ಬ ಹೇಳಿದ್ದನಂತೆ. ಜ್ಯೊತಿಷಿ ಮಾತು ಕೇಳಿ ಮಂಜುನಾಥ್, ಕಂದನ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ […]

ಶಿವಕುಮಾರ ಶ್ರೀಗಳ‌ ಆರೋಗ್ಯ ಸ್ಥಿರವಾಗಿದೆ, ಆತಂಕ ಬೇಡ: ಹೆಚ್​.ಡಿ. ಕುಮಾರಸ್ವಾಮಿ

Friday, December 7th, 2018
kumarswamy

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಸಿಎಂ ಹೆಚ್ಡಿಕೆ, ಶ್ರೀಗಳ‌ ಆರೋಗ್ಯದ ಬಗ್ಗೆ ಜನರಿಗೆ‌ ಆತಂಕ ಬೇಡ. ಅವರ ಆರೋಗ್ಯದಲ್ಲಿ ಸಣ್ಣ ಮಟ್ಟದ ಏರುಪೇರುಗಳಿವೆ. ಅವರ‌ ಆರೋಗ್ಯ ಸಂಬಂಧ ಪಿನ್ ಟು ಪಿನ್ ಮಾಹಿತಿ ತರಿಸಿಕೊಳ್ತಿದ್ದೇನೆ ಎಂದಿದ್ದಾರೆ. ಸಚಿವ ಹೆಚ್.ಡಿ.ರೇವಣ್ಣ ಜೊತೆ ಶಾರದಾಂಬೆ ದರ್ಶನ ಪಡೆದ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಠದ ಕಿರಿಯ ಸ್ವಾಮೀಜಿ‌ ಜೊತೆ‌ ನಿರಂತರ‌‌ ಸಂಪರ್ಕದಲ್ಲಿದ್ದೇನೆ. ಹೆಚ್ಚಿನ ಚಿಕಿತ್ಸೆಗೆ ಚೆನ್ನೈ ಆಸ್ಪತ್ರೆ‌ಗೆ ಕರೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ. ನಾನು ನಿನ್ನೆಯೇ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ […]

ಮದುವೆ ಮಾಡಿಸುವ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ: ವ್ಯಕ್ತಿ ಅರೆಸ್ಟ್​​​

Friday, November 30th, 2018
mangaliuru

ಮಂಗಳೂರು: ಮದುವೆ ಮಾಡಿಸುವ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಜಿಲ್ಲೆಯ ಕಡೂರು ಪೋಲಿಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ರಾಮಕೃಷ್ಣ (52) ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಬಂಧಿಸಲು ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು. ಈ ಖತರ್ನಾಕ್ ಆಸಾಮಿ ಎರಡನೇ ಮದುವೆ ಮಾಡಿಸುವ ನೆಪದಲ್ಲಿ ಹತ್ತಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿತ್ತಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರ ಆಥಿತಿಯಾಗಿರುವ ರಾಮಕೃಷ್ಣನಿಗೆ ಹೆಚ್ಚು ಟಾರ್ಗೆಟ್ ಆಗಿರುವವರು ಸರ್ಕಾರಿ ನೌಕರಿಯ ಮಹಿಳೆಯರು. ಈತ ಚಿಕ್ಕಮಗಳೂರು ಮೂಲದ ಶಿಕ್ಷಕಿಗೆ ಮೋಸ […]

ದೇಶದ 121, ರಾಜ್ಯದ 8 ಜಿಲ್ಲೆಗಳ ಮನೆ ಮನೆಗೂ ಅನಿಲ ಸರಬರಾಜು

Friday, November 23rd, 2018
narendra-modi

ನವದೆಹಲಿ: ದೇಶದ 121 ಜಿಲ್ಲೆ ಹಾಗೂ ರಾಜ್ಯದ 8 ಜಿಲ್ಲೆಗಳಲ್ಲಿ ಕೊಳವೆಗಳ ಮೂಲಕ ನೈಸರ್ಗಿಕ ಅನಿಲವನ್ನು (ಸಿಎನ್‌ಜಿ) ಮನೆ ಮನೆಗೂ ತಲುಪಿಸುವ ಯೋಜನೆಯಾದ ಅನಿಲ ವಿತರಣಾ ವ್ಯವಸ್ಥೆ (ಸಿಜಿಡಿ) ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಬಡವರಿಗೆ ಕಡಿಮೆ ಬೆಲೆಯಲ್ಲಿ ಎಲ್‌ಪಿಜಿ ಸಂಪರ್ಕ ಒದಗಿಸುವ ಕ್ರಾಂತಿಕಾರಿ ಯೋಜನೆ ಇದಾಗಿದೆ. ಮುಂದಿನ 3-4 ವರ್ಷಗಳಲ್ಲಿ ಕೊಳವೆ ಮೂಲಕ ನೈಸರ್ಗಿಕ ಅನಿಲ (ಸಿಎನ್‌ಜಿ) ಮನೆ ಮನೆಗೆ ವಿತರಿಸುವ ಯೋಜನೆಯನ್ನು ಸುಮಾರು 400 ಜಿಲ್ಲೆಗಳಿಗೆ […]

ಸಾಲಬಾಧೆ ತಾಳಲಾರದೆ ಕೆರೆಗೆ ಹಾರಿದ ತಂದೆ..ರಕ್ಷಿಸಲು ಹೋದ ಮಗನೂ ಸಾವು!

Thursday, November 22nd, 2018
suicide

ಚಿಕ್ಕಮಗಳೂರು: ಸಾಲಬಾಧೆ ತಾಳಲಾರದೆ ತಂದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ರಕ್ಷಿಸಲು ಹೋದ ಮಗ ಕೂಡಾ ತಂದೆ ಜೊತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ತಂದೆ ತಿಮ್ಮಣ್ಣಗೌಡ (55) ಹಾಗೂ ಮಗ ಅಭಿಷೇಕ್ (24) ಸಾವನ್ನಪ್ಪಿದವರು ಎನ್ನಲಾಗಿದೆ. ಇವರಿಗೆ ಎನ್.ಆರ್.ಪುರದ ಹಂತುವಾನಿ ಗ್ರಾಮದಲ್ಲಿ 2 ಎಕರೆ ಜಾಗವಿದ್ದು, ಅಡಿಕೆ ಮತ್ತು ಭತ್ತ ಬೆಳೆಯುತ್ತಿದ್ದರು. ತಮ್ಮ ಜಮೀನಿನಲ್ಲಿ 10ಕ್ಕೂ ಹೆಚ್ಚು ಬೋರ್ವೆಲ್ ಕೊರೆಯಿಸಿದ್ದರು. ಆದರೆ ಬೋರ್ವೆಲ್ನಲ್ಲಿ ನೀರು ಬಂದಿರಲಿಲ್ಲ. ಅಲ್ಲದೇ ಬ್ಯಾಂಕ್ವೊಂದರಲ್ಲಿ ಮೂರು […]