ಪುತ್ತೂರಿನ ಜೋಸ್ ಆಲುಕ್ಕಾಸ್ ಮಳಿಗೆಯಿಂದ ಚಿನ್ನ ಕಳವು, ಮೂವರು ಮಹಿಳೆಯರ ಬಂಧನ

Tuesday, September 14th, 2021
jos Alukas

ಪುತ್ತೂರು :  ಪುತ್ತೂರಿನ ಜೋಸ್ ಆಲುಕ್ಕಾಸ್ ಮಳಿಗೆಗೆ ಸೆ.1ರಂದು ಬಂದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸೋಮವಾರ ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಬಂಧಿತ ಆರೋಪಿಗಳು. ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಇವರು ಸೆ.1ರಂದು ಜೋಸ್ ಆಲುಕ್ಕಾಸ್‌ಗೆ ಬಂದು ಚಿನ್ನವನ್ನು ಖರೀದಿಸಿದ್ದರು. ಇದೇ ಸಂದರ್ಭದಲ್ಲಿ 2,60,400 ರೂ. ಮೌಲ್ಯದ ಕಿವಿಯ ಚಿನ್ನಾಭರಣವನ್ನು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು. ಅಲ್ಲದೆ […]

ಫ್ಲ್ಯಾಟ್ ನಲ್ಲಿದ್ದ ಒಂಟಿ ಮಹಿಳೆಯನ್ನು ಕೊಂದು ಚಿನ್ನಾಭರಣ ದೋಚಿದ ಕಳ್ಳರು

Tuesday, July 13th, 2021
vishala ganiga

ಬ್ರಹ್ಮಾವರ: ಫ್ಲ್ಯಾಟ್ ನಲ್ಲಿ ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ  ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ವಿಶಾಲ ಗಾಣಿಗ(35) ಎಂದು ಗುರುತಿಸಲಾಗಿದೆ. ವಿಶಾಲ ಗಾಣಿಗ ಅವರ ಪತಿ ವಿದೇಶದಲ್ಲಿದ್ದು, ಗಂಗೊಳ್ಳಿ ಮೂಲದ ವಿಶಾಲ ಅವರು ಇತ್ತೀಚಿಗಷ್ಟೇ ಊರಿಗೆ ಮರಳಿದ್ದರು. ಬ್ರಹ್ಮಾವರದಲ್ಲಿ ಸ್ವಲ್ಪ ಕೆಲಸವಿದೆ ಮುಗಿಸಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿಬಂದಿದ್ದ ವಿಶಾಲ ಅವರು ಮನೆಗೆ ವಾಪಾಸಾಗಿರಲಿಲ್ಲ ಎಂದು ಹೇಳಲಾಗಿದೆ. ವಿಶಾಲ  ಭಾನುವಾರ ರಾತ್ರಿಯಿಂದ ಮನೆಯಲ್ಲಿ ಒಬ್ಬರೆ ಇದ್ದರೆನ್ನಲಾಗಿದೆ. ಈ ಅವಧಿಯಲ್ಲಿ ದುಷ್ಕಮಿಗಳು ಫ್ಲ್ಯಾಟ್ […]

ಕೊಣಾಜೆ : ಇಬ್ರಾಹಿಂ ಕೋಡಿಜಾಲ್ ಮಗನ ಮನೆಗೆ ನುಗ್ಗಿದ ಕಳ್ಳರು, ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿ

Thursday, March 25th, 2021
Gold Theft

ಕೊಣಾಜೆ  : ಮಂಗಳೂರು ವಿವಿ ಕ್ಯಾಂಪಸ್ ಸಮೀಪದಲ್ಲಿರುವ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಅಪಾರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹಾಜಿ ಇಬ್ರಾಹಿಂ ಕೋಡಿಜಾಲ್ ಅವರ ಪುತ್ರ ಹಬೀಬ್ ಅವರ ಮನೆಯಲ್ಲಿ ಈ ಕಳ್ಳತನ ಕೃತ್ಯ ನಡೆದಿದೆ. ಹಬೀಬ್, ಅವರ ಕುಟುಂಬದ ನಾಲ್ಕು ಮಂದಿ ಮನೆಯೊಳಗೆ ಇದ್ದಾಗಲೇ ರಾತ್ರಿ ವೇಳೆಯಲ್ಲಿ ಕಳ್ಳತನ ನಡೆಸಿದ್ದಾರೆ. ಮನೆಯ ಮಹಡಿಯ ಬಾಗಿಲು ಮುರಿದು ಒಳಗೆ ಪ್ರವೇಶಿಸಿರುವ ದುಷ್ಕರ್ಮಿಗಳು‌ ಕೋಣೆಯ ಕಪಾಟಿನಲ್ಲಿದ್ದ ಸುಮಾರು 100 […]

ಬಾಡಿಗೆ ಮನೆ ಕೇಳುವ ನೆಪದಲ್ಲಿ ಚಿನ್ನಾಭರಣ ಲೂಟಿ : ಆರೋಪಿಯ ಬಂಧನ

Tuesday, March 23rd, 2021
Mujeeb

ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಮ ಮತ್ತು ನಿತ್ಯಾನಂದ ನಗರದ ಮನೆಗಳಿಗೆ ನುಗ್ಗಿ 1.40 ಲಕ್ಷ ರೂ. ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು ಸೊತ್ತು ಸಹಿತ ಪೊಲೀಸರು ಕಾಸರಗೋಡು ಜಿಲ್ಲೆಯ ನರಿಂಗಾನ ಗ್ರಾಮದ ನೆತ್ತಿಲಪದವು ಎಂಬಲ್ಲಿ ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ, ಮಂಗಲ್ಪಾಡಿ ನಿವಾಸಿ ಮುಜೀಬ್ ರೆಹಮಾನ್ ಎಂ.ಎ. ಬಂಧಿತ ಆರೋಪಿ. ಬಾಡಿಗೆ ಮನೆ ಕೇಳಿಕೊಂಡು ಬೆಳ್ಮ ಮತ್ತು ನಿತ್ಯಾನಂದ ನಗರದ ಅಶ್ವಿನಿ ಎಂಬವರ ಮನೆಗೆ ಹೋಗಿದ್ದನು. ಆರೋಪಿ ಮುಜೀಬ್ ಬಳಿಕ […]

ಉರ್ವ ಶಿರಡಿ ಸಾಯಿ ಬಾಬಾ ಮಂದಿರದಬಳಿ ನಿಲ್ಲಿಸಿದ್ದ ಕಾರಿನ ಗಾಜು ಹೊಡೆದು ಚಿನ್ನಾಭರಣ, ನಗದು ದರೋಡೆ

Friday, March 12th, 2021
Robbery

ಮಂಗಳೂರು : ಉರ್ವ ಶಿರಡಿ ಸಾಯಿ ಬಾಬಾ ಮಂದಿರದ ದ್ವಾರದ ಮುಂಭಾಗ ದಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಹೊಡೆದು ಅದರೊಳಗಿದ್ದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುರುವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ. ಭಕ್ತರೋರ್ವರು ಇಲ್ಲಿನ ಶಿರಡಿ ಸಾಯಿ ಬಾಬಾ ಮಂದಿರದ ದ್ವಾರದ ಮುಂಭಾಗ ಕಾರು ನಿಲ್ಲಿಸಿ ಮಂದಿರಕ್ಕೆ ತೆರಲಿದ್ದ ವೇಳೆ ದುಷ್ಕರ್ಮಿಗಳ ತಂಡ ಕಾರಿನ‌ ಕಿಟಕಿಯ ಗಾಜು ಹೊಡೆದು ಕಾರಿನಲ್ಲಿದ್ದ ಪಾಸ್ ಪೋರ್ಟ್, ಅಧಾರ್ ಕಾರ್ಡ್ ಎಟಿಎಮ್ ಕಾರ್ಡ್ಹಾಗೂ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಚಿನ್ನವನ್ನು ಕಳವು […]

ಹಂಡೇಲು ಚಿನ್ನಾಭರಣ ದರೋಡೆ – ನಾಲ್ವರ ಬಂಧನ

Friday, November 27th, 2020
Handelu

ಮೂಡುಬಿದಿರೆ  : ಮನೆಯೊಂದಕ್ಕೆ ನುಗ್ಗಿ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ ಪೊಲೀಸರು, 22.860 ಗ್ರಾಂ ಚಿನ್ನಾಭರಣ ಹಾಗೂ ₹11 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಕೇರಳದ ಕಾಸರಗೋಡಿನ ಇಬ್ರಾಹಿಂ ಕಲಂದರ್ (38), ಮೊಹಮ್ಮದ್ ಹನೀಫ್ (48), ಶಿವಮೊಗ್ಗದ ಮೊಹಮ್ಮದ್ ಮುದಸ್ಸಿರ್ (20), ಮೂಡುಬಿದಿರೆಯ ಶಾಹೀಂ ಸಿದ್ದೀಕ್ (26) ಬಂಧಿತರು. ಮೂಡುಬಿದಿರೆ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಹಂಡೇಲು ಹತ್ತಿರದ ಸಾರಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ನವೆಂಬರ್  11ರಂದು ಹಿಂಬದಿ ಬಾಗಿಲು ಮುರಿದು ಆರೋಪಿಗಳು ಚಿನ್ನಾಭರಣ ದೋಚಿದ್ದರು. ಈ ಕುರಿತು […]

ಮುಂದೆ ಗಲಾಟೆ ನಡೆಯುತ್ತಿದೆ ಎಂದು ಚಿನ್ನಾಭರಣ ದರೋಡೆ ಮಾಡುತ್ತಿದ್ದ ನಾಲ್ವರ ಬಂಧನ

Thursday, October 22nd, 2020
chain snatchers

ಉಡುಪಿ : ಉಡುಪಿ ಡಿಸಿಐಬಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜಪ್ಪ ಡಿ.ಆರ್. ನೇತೃತ್ವದಲ್ಲಿ  ನಾಲ್ವರು ಅಂತರ್ ‌ರಾಜ್ಯ ಸರ ಕಳವು ಆರೋಪಿಗಳನ್ನು ಪೊಲೀಸರು ಉಡುಪಿ ಶ್ರೀಕೃಷ್ಣ ಮಠ ಪಾರ್ಕಿಂಗ್ ಸ್ಥಳದ ಬಳಿ ಬಂಧಿಸಿದ್ದಾರೆ. ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಆರೋಪಿಗಳು ಕಳವು ಮಾಡುತಿದ್ದರು. ಬಂಧಿತರನ್ನು ಇರಾನಿ ಗ್ಯಾಂಗ್‌ಗೆ ಸೇರಿದ ಅಂತಾರಾಜ್ಯ ವಂಚಕರಾದ ಮಹಾರಾಷ್ಟ್ರ ರಾಜ್ಯದ ಅಹ್ಮದ್‌ನಗರ ಜಿಲ್ಲೆ ಶ್ರೀರಾಮಪುರದ ಝಾಕಿರ್ ಹುಸೈನ್ (26), ಕಂಬರ್ ರಹೀಮ್ […]

ಸಹಾಯ ಮಾಡುವ ನೆಪದಲ್ಲಿ ವೃದ್ಧೆಯೊಬ್ಬರ 4.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ರಿಕ್ಷಾ ಚಾಲಕ

Wednesday, August 19th, 2020
gold ornament

ಮಂಗಳೂರು : ರಿಕ್ಷಾ ಚಾಲಕನೋರ್ವ ವೃದ್ಧೆಯೊಬ್ಬರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಲಪಟಾಯಿಸಿ ಬುಧವಾರ ಪೋಲೀಸರ ಬಲೆಗೆ ಬಿದ್ದಿದ್ದಾನೆ. ಶಕ್ತಿನಗರ ನಿವಾಸಿ ಪ್ರವೀಣ್ ರಾಮನಾಯ್ಕಿ (40) ಬಂಧಿತ ಆರೋಪಿ. ಚಿಲಿಂಬಿಯ ಸಮೀಪ ವೃದ್ಧೆಯೊಬ್ಬರಿಗೆ ಸಹಾಯ ಮಾಡುವ ನೆಪದಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಆರೋಪದಲ್ಲಿ  ಉರ್ವ ಪೊಲೀಸರು ಬುಧವಾರ ಆತನನ್ನು ಬಂಧಿಸಿದ್ದಾರೆ. ಜೂ.7ರಂದು ಚಿಲಿಂಬಿಯ ದೇವಸ್ಥಾನವೊಂದರ ಬಳಿ 72 ವರ್ಷದ ವೃದ್ಧೆಗೆ ಸಹಾಯ ಮಾಡುವ ನೆಪದಲ್ಲಿ ಈತ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಎಂದು ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣವನ್ನು ಭೇದಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿ […]

ಅಂಗನವಾಡಿ ಕಾರ್ಯಕರ್ತೆಯನ್ನು ನಂಬಿಸಿ 50 ಲಕ್ಷ ನಗದು ಮತ್ತು 22.75 ಲಕ್ಷ ಮೌಲ್ಯದ ಚಿನ್ನಾಭರಣ ಎಗರಿಸಿದ ಪಕ್ಕದ ಮನೆ ಗ್ಯಾಂಗ್

Thursday, August 13th, 2020
benedict

ಮಂಗಳೂರು : ಅಂಗನವಾಡಿ ಟೀಚರನ್ನು ನಂಬಿಸಿ ಪಕ್ಕದ ಮನೆಯವರೇ ಹಂತ ಹಂತವಾಗಿ 50 ಲಕ್ಷ ನಗದು ಮತ್ತು 22.75 ಲಕ್ಷ ಮೌಲ್ಯ ದ ಚಿನ್ನಾಭರಣ ವನ್ನು ಲೂಟಿ ಮಾಡಿದ ಘಟನೆ ಮುತ್ತೂರು ಗ್ರಾಮದ ಕುಪ್ಪೆಪದವು ಎಂಬಲ್ಲಿ ನಡೆದಿದೆ. ಪಾಂಡೆಮಿಕ್’ ಕಿರು ಚಿತ್ರ ಆಗಸ್ಟ್ 15 ರಂದು ಮೆಗಾ ಮೀಡಿಯಾ ನ್ಯೂಸ್ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ -ಇಲ್ಲಿ ವೀಕ್ಷಿಸಿ ಬೆನಡಿಕ್ಟ ಲೋಬೊ, ಕುಪ್ಪೆಪದವು ಮುರ ಎಂಬಲ್ಲಿ ವಾಸವಾಗಿದ್ದರು ಅಂಗನವಾಡಿ ಕಾರ್ಯಕರ್ತೆಯಾಗಿದ್ದ ಆಕೆಯ ಪಕ್ಕದ ಮನೆಯಲ್ಲಿ ಫರಿದಾ ಬೇಗಮ್, ಜೋಹರ, ಲತೀಫ್ […]

ಮಂಜೇಶ್ವರ ನಿವಾಸಿಗಳಿಂದ ಕಣ್ಣೂರು ವಿಮಾನ ನಿಲ್ದಾಣದಲ್ಲಿ 45 ಲಕ್ಷ ರೂ. ವೌಲ್ಯದ ಚಿನ್ನಾಭರಣ ವಶ

Thursday, August 13th, 2020
gold

ಕಾಸರಗೋಡು :  ಕಣ್ಣೂರು ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಚಿನ್ನಾಭರಣ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿಗಳಾದ ಸತ್ತಾರ್ ಮತ್ತು ಸಮೀರ್ ಬಂಧಿತ ಆರೋಪಿಗಳು. ಬಂಧಿತರಿಂದ 45 ಲಕ್ಷ ರೂ. ವೌಲ್ಯದ ಚಿನ್ನಾಭರಣ ವಶಪಡಿಸಿ ಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇವರು ಶಾರ್ಜಾ ಮತ್ತು ದುಬೈಯಿಂದ ಆಗಮಿಸಿದವರೆನ್ನಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ದಿನಗಳಿಂದ ಅಕ್ರಮ ಚಿನ್ನಾಭರಣ ಸಾಗಾಟ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಸ್ಟಮ್ಸ್ ತಪಾಸಣೆ ತೀವ್ರಗೊಳಿಸಲಾಗಿದೆ.