ಜಿಲ್ಲೆಯಲ್ಲಿ ಧಾರಕಾರ ಮಳೆ..ಸಿಎಂ ದೇಗುಲ ದರ್ಶನಕ್ಕೆ ಮಳೆರಾಯ ಅಡ್ಡಿ!

Tuesday, August 14th, 2018
kukke-subramanya

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇಗುಲ ದರ್ಶನ ಮಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿದ್ದು ಸಿಎಂ ದೇಗುಲ ದರ್ಶನಕ್ಕೆ ಮಳೆರಾಯ ಅಡ್ಡಿಯಾಗಿದ್ದಾನೆ. ನಿನ್ನೆ ಮತ್ತು ಇಂದು‌ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ವಿಶೇಷ ಪೂಜೆಗೆ ತೆರಳಿದ ಮುಖ್ಯಮಂತ್ರಿ ಕುಟುಂಬಕ್ಕೆ ಭಾರಿ ಮಳೆ ಸಾಕಷ್ಟು ಅಡ್ಡಿಗಳನ್ನು ತಂದಿದೆ. ಮಾಜಿ ಪ್ರಧಾನಿ ದೇವೆಗೌಡ, ತಾಯಿ ಚೆನ್ನಮ್ಮ, ಪತ್ನಿ ಅನಿತಾ‌ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ದೇಗುಲಗಳಿಗೆ ಭೇಟಿ […]

ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ ಕುಟುಂಬ..!

Tuesday, August 14th, 2018
kumarswamy

ಮಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮುಂಚೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಧರ್ಮಸ್ಥಳ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ್ದರು. ಇಂದು ಕುಟುಂಬ ಸಮೇತರಾಗಿ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ದರ್ಶನ ಪಡೆದರು. ಹಾಸನದಿಂದ ರಸ್ತೆ ‌ಮಾರ್ಗವಾಗಿ ಧರ್ಮಸ್ಥಳಕ್ಕೆ ಬಂದ ಸಿಎಂ ಕುಮಾರಸ್ವಾಮಿ, ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿಯವರ ಕುಟುಂಬ ಆಗಮನದ ವೇಳೆ ದೇವಾಲಯದ ವತಿಯಿಂದ ಸ್ವಾಗತಿಸಲಾಯಿತು. ಮಾಜಿ ಪ್ರಧಾನಿ ದೇವೆಗೌಡ, ತಾಯಿ ಚೆನ್ನಮ್ಮ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿಯವರೊಂದಿಗೆ ದೇವರ ದರ್ಶನ ಪಡೆದು […]

ತಿರುಪತಿಯಲ್ಲಿ ಗೌಡರ ಕುಟುಂಬ..ತಿಮ್ಮಪ್ಪನ ದರ್ಶನ ಪಡೆದ ಸಿಎಂ!

Friday, July 27th, 2018
kumarswamy

ವಿಜಯವಾಡ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸಮೇತರಾಗಿ ದೇವೇಗೌಡರು ತಮ್ಮ ಕುಟುಂಬಸ್ಥರೊಂದಿಗೆ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ದೇವರ ಸನ್ನಿಧಿಗೆ ಬಂದು, ವೆಂಕಟೇಶ್ವರನ ದರ್ಶನ ಪಡೆದರು. ದೇವೇಗೌಡರ ಪತ್ನಿ ಚೆನ್ನಮ್ಮ, ಹಾಗೂ ರೇವಣ್ಣ, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೇರಿದಂತೆ ಗೌಡರ ಇತರ ಕುಟುಂಬ ಸದಸ್ಯರು ದೇವರ ಕೃಪೆಗೆ ಪಾತ್ರರಾದರು. ತಿಮ್ಮಪ್ಪನ ದರ್ಶನದ ಬಳಿಕ ಗೌಡರ ಕುಟುಂಬಸ್ಥರಿಗೆ ಅರ್ಚರು ಪ್ರಸಾದ, ತೀರ್ಥ ವಿತರಿಸಿದರು. ಇದಕ್ಕೂ ಮುನ್ನ […]