ಚೊಚ್ಚಲ ಆಯವ್ಯಯ ಮಂಡಿಸುವ ಮುನ್ನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮಾಯಿ

Friday, March 4th, 2022
cm-temple

  ಬೆಂಗಳೂರು: ತಮ್ಮ ಚೊಚ್ಚಲ ಆಯವ್ಯಯ ಮಂಡಿಸುವ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದ ಸಮೀಪದ ಶ್ರೀಕಂಠೇಶ್ವರ ದೇವಾಲಯ ದಲ್ಲಿ ಪೂಜೆ ಸಲ್ಲಿಸಿದರು. ದೇವಾಲಯದ ಹೊರಗೆ ಮುಖ್ಯಮಂತ್ರಿ ಯವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದ್ದ ಪೌರ ಕಾರ್ಮಿಕ ಮಹಿಳೆಯರ ಬೇಡಿಕೆಯನ್ನು ಮನ್ನಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡರು. ನಂತರ ಅವರ ಕಷ್ಟ ಸುಖ ಆಲಿಸಿದರು. ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಜೊತೆಗಿದ್ದರು.