ಹಿಂದೂಗಳನ್ನು ಮತಾಂತರ ಮಾಡುವ ಧಂದೆಗೆ ಈ ಕಾನೂನಿಂದ ದೊಡ್ಡ ಅಘಾತ ಆಗಿದೆ : ಜಗದೀಶ್ ಶೇಣವ

Wednesday, December 22nd, 2021
Jagadisha Senava

ಮಂಗಳೂರು : ಅನೇಕ ಮತಾಂತರದ ಮಿಷನರಿಗಳು ಅತೀ ಬಡವ ಹಿಂದುಗಳನ್ನು ಬಲವಂತ, ಆಮಿಷ ಆಸೆಯೊಡ್ಡಿ ಮತಾಂತರ ಮಾಡಿದೆ  ಅಂತಹವರಿಗೆ ಈ ಕಾನೂನಿಂದ ದೊಡ್ಡ ಅಘಾತ ಆಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್ ಶೇಣವ ಹೇಳಿದ್ದಾರೆ. ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು,  ಬಿಜೆಪಿ ಕಾರ್ಯಕರ್ತರ ಬಹುನಿರೀಕ್ಷಿತ ಮತಾಂತರ ಮಸೂದೆ ಮಂಡಿಸಿದ್ದು, ಈ ಕಾಯ್ದೆ ಮಂಡಿಸಿದ ಬೊಮ್ಮಾಯಿ ಸರ್ಕಾರಕ್ಕೆ ದ‌ಕ ಜಿಲ್ಲಾ ಬಿಜೆಪಿ ಅಭಿನಂದನೆ ಸಲ್ಲಿಸುತ್ತದೆ ಎಂದು ಶೇಣವ ಹೇಳಿದರು. ಕೇವಲ ಒಂದು ಸಾವಿರ ಎರಡು ಸಾವಿರ ರೂಪಾಯಿ, ಐನೂರು ರೂಪಾಯಿ ಮಾತ್ರೆ ನೀಡಿ. ಅದರಿಂದ ಕಾಯಿಲೆ […]

ಶಬರಿಮಲೆ ದೇವಸ್ಥಾನಕ್ಕೆ ಹೋಗುವವರು ಒಂದು ರೂಪಾಯಿ ಕಾಣಿಕೆಯನ್ನು ಹಾಕದಿರಿ: ವೈ.ಭರತ್ ಶೆಟ್ಟಿ

Wednesday, November 21st, 2018
shabarimala

ಮಂಗಳೂರು: ಶಬರಿಮಲೆ ದೇವಸ್ಥಾನಕ್ಕೆ ಹೋಗುವವರು ಒಂದು ರೂಪಾಯಿ ಕಾಣಿಕೆಯನ್ನು ಹಾಕದಿರಿ. ಯಾಕೆಂದರೆ ನಾವು ಹಾಕಿದ ಆ ಕಾಣಿಕೆ ಹಣವನ್ನು ಯಾವುದೇ ಕಾರಣಕ್ಕೂ ಅಲ್ಲಿನ ಸರ್ಕಾರ ಶಬರಿಮಲೆ ದೇವಸ್ಥಾನಕ್ಕೆ ಬಳಸುವುದಿಲ್ಲ ಎಂದು ಶಾಸಕ ವೈ.ಭರತ್ ಶೆಟ್ಟಿ ಹೇಳಿದರು. ಶಬರಿಮಲೆ ಸಂರಕ್ಷಣಾ ಕ್ರಿಯಾ ಸಮಿತಿಯಿಂದ ನಡೆದ ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ನಡೆಯುತ್ತಿದೆ ಎನ್ನಲಾದ ದೌರ್ಜನ್ಯದ ವಿರುದ್ಧ ಇಂದು ಬೆಳಗ್ಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಹಿಂದೆ ಶಬರಿಮಲೆಯಲ್ಲಿ ಪೊಲೀಸರನ್ನು ಸೆಕ್ಯುರಿಟಿಗಾಗಿ ಇಡಲಾಗುತ್ತಿತ್ತು. […]

ನಾವು ಸಂಗೀತಕ್ಕೆ ವಿರೋಧಿಗಳಲ್ಲ..ಅದರ ಹೆಸರಿನಲ್ಲಿ ಡ್ಯಾನ್ಸ್ ಮತ್ತಿತ್ಯಾದಿಗಳಿಗೆ ವಿರೋಧವಿದೆ: ಆಶಾ ಜಗದೀಶ್

Tuesday, June 19th, 2018
bajarangdal

ಮಂಗಳೂರು: ನಗರದ ಹಲವು ಕಡೆ ಲೈವ್‌ಬ್ಯಾಂಡ್, ಲೇಡಿಸ್ ಬಾರ್, ಪಬ್, ಮಸಾಜ್ ಸೆಂಟರ್‌ಗಳಿಗೆ ಕಡಿವಾಣ ಹಾಕದಿದ್ದರೆ ಈ ಹಿಂದೆ ಪಬ್ ಮೇಲೆ ನಡೆದ ದಾಳಿ ಪ್ರಕ್ರಿಯೆಗಳು ಮರುಕಳಿಸಬಹುದು ಎಂದು ವಿಎಚ್‌ಪಿ ಮಹಿಳಾ ಪ್ರಮುಖ್ ಆಶಾ ಜಗದೀಶ್ ತಿಳಿಸಿದ್ದಾರೆ. ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾವು ಸಂಗೀತಕ್ಕೆ ವಿರೋಧಿಗಳಲ್ಲ. ಆದರೆ, ಅದರ ಹೆಸರಿನಲ್ಲಿ ಡ್ಯಾನ್ಸ್ ಮತ್ತಿತ್ಯಾದಿಗಳಿಗೆ ವಿರೋಧವಿದೆ. ನಗರದ ಹಲವು ಕಡೆಗಳಲ್ಲಿ ಲೈವ್‌ಬ್ಯಾಂಡ್, ಲೇಡಿಸ್ ಬಾರ್ ಮತ್ತಿತ್ಯಾದಿ ತಲೆ ಎತ್ತುತ್ತಿವೆ. ಅದಕ್ಕೆ ಕಡಿವಾಣ ಹಾಕಬೇಕು ಎಂದರು. […]

ಅಮಾಯಕರ ಕೊಲೆಗೆ ಸಿಎಂ ಸಹಜ ಸಾವು ಪ್ರಮಾಣಪತ್ರ: ಸೂಲಿಬೆಲೆ

Monday, January 29th, 2018
chakravarthi

ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕ ಯುವಕರ ಕೊಲೆಗಳಿಗೆ ಸಹಜ ಸಾವು ಎಂಬ ಪ್ರಮಾಣ ಪತ್ರ ನೀಡಿ ಅವುಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ರಾಜ್ಯದಲ್ಲಿ ಎಷ್ಟು ಕೆಟ್ಟ ಆಡಳಿತವನ್ನು ನೀಡಬಹುದೋ ಅದನ್ನು ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕಾಂಗ್ರೆಸ್‌ ಸರಕಾರ ತೋರಿಸಿ ಕೊಟ್ಟಿದೆ ಎಂದು ಯುವ ಬ್ರಿಗೇಡ್‌ನ‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದಾರೆ. ರವಿವಾರ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಸಹ ಮತ ಬಳಗ ಹೊರತಂದಿರುವ “ಹಡೆದವ್ವನ ಶಾಪ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. […]

ನಕಲಿ ಗೋರಕ್ಷಕರು ಎಂಬ ಹೇಳಿಕೆ ಸುಳ್ಳು :ಜಗದೀಶ್ ಶೇಣವ

Wednesday, October 18th, 2017
vishva hindu parishath

ಮಂಗಳೂರು: ಗೋವುಗಳ ರಕ್ಷಣೆಗೆ ಮುಂದಾಗುವವರೆಲ್ಲ ಪ್ರಧಾನಿ ನರೇಂದ್ರ ಮೋದಿಯವರ ನಕಲಿ ಗೋರಕ್ಷಕರು ಎಂಬ ಹೇಳಿಕೆಯನ್ನು ವಿರೋಧಿಸುವುದಾಗಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ನಮ್ಮ ಅನಿಸಿಕೆ ಪ್ರಕಾರ ದೇಶದಲ್ಲಿ ಯಾರೂ ನಕಲಿ ಗೋರಕ್ಷಕರಿಲ್ಲ. ಇರುವವರೆಲ್ಲ ಗೋವುಗಳನ್ನು ಪ್ರೀತಿಸುವವರು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಕಲಿ ಗೋ ರಕ್ಷಕರು ಎಂಬ ಹೇಳಿಕೆಯನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಅಕ್ರಮ ಕಸಾಯಿಖಾನೆ ಕುರಿತು ಮಾಹಿತಿ ನೀಡಿದ ಸಾಫ್ಟ್‌‌ವೇರ್ […]

ಹಿಂದೂ ಸಂಸ್ಕೃತಿ ನಿಧಾನವಾಗಿ ನಾಶವಾಗುತ್ತಿದೆ ಎಚ್ಚರ-ಜಗದೀಶ್ ಶೇಣವ

Monday, April 15th, 2013
Thoudugoli Vishu

ಮಂಗಳೂರು : ಶಾಲಾ ಕಾಲೇಜುಗಳಲ್ಲಿ ಅನ್ಯ ಧರ್ಮೀಯರು ಹಿಂದೂ ಧರ್ಮದ ಸಂಸ್ಕೃತಿಯ ಮೇಲೆ ಸವಾರಿ ಮಾಡುತ್ತಿದ್ದು ಆ ಮೂಲಕ ಹಿಂದೂ ಸಂಸ್ಕೃತಿಯನ್ನು ಸಂಪೂರ್ಣ ನಾಶಪಡಿಸುವ ಹುನ್ನಾರ ನಡೆಸುತ್ತಿದ್ದು ಪೋಷಕರೇ ಎಚ್ಚರ ಎಂದು ವಿಶ್ವಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯಾಧ್ಯಕ್ಷ  ಜಗದೀಶ್ ಶೇಣವ ಅಭಿಪ್ರಾಯಪಟ್ಟರು. ಅವರು ಭಾನುವಾರ ವರ್ಕಾಡಿ ತೌಡುಗೋಳಿಯ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ವಿಷು ಪೂಜೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ವಿಶೇಷ ಉಪನ್ಯಾಸ ನೀಡಿದರು. ಸಂಸ್ಕೃತಿ ಗೌರವಿಸದ ಸಂಸ್ಕಾರ ನಮ್ಮದಾಗದಂತೆ ಪೋಷಕರು ಎಚ್ಚೆತ್ತುಕೊಳ್ಳಬೇಕು. ಹಿಂದೂ ಹಬ್ಬ […]