ವಿವಾದಾತ್ಮಕ ಹೇಳಿಕೆ ಆರೋಪ: ವಿಶ್ವ ಹಿಂದ್ ಪ್ರಮುಖ್ ಜಗದೀಶ ಶೇಣವ ವಿರುದ್ಧ ಪ್ರಕರಣ ದಾಖಲು

Wednesday, October 31st, 2018
shanava

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಇತ್ತೀಚಿಗೆ ನಡೆದ ಪ್ರತಿಭಟನೆಯೊಂದರಲ್ಲಿ ವಿಶ್ವ ಹಿಂದ್ ಪ್ರಮುಖ್ ಜಗದೀಶ ಶೇಣವ ಅವರು ನೀಡಿರುವ ವಿವಾದಾತ್ಮಕ ಹೇಳಿಕೆಯೊಂದರ ವಿರುದ್ಧ ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇದೇ ಸಂದರ್ಭದಲ್ಲಿ ಶೇಣವ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುದ್ರೋಳಿಯ ಕಸಾಯಿಖಾನೆ ಮುಚ್ಚುವಂತೆ ಹಾಗೂ ವಿವಿಧ ಭೇಡಿಕೆಗಳಿಗೆ ಆಗ್ರಹಿಸಿ ವಿಎಚ್‌ಪಿ ಹಾಗೂ ಬಜರಂಗದಳದ ವತಿಯಿಂದ ಇತ್ತೀಚೆಗೆ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯೊಂದರಲ್ಲಿ ವಿಶ್ವ ಹಿಂದ್ ಪ್ರಮುಖ್ […]

ಎಲ್ಲಾ ಹಿಂದೂ ಕಾರ್ಯಕರ್ತರ ಕೊಲೆಯಲ್ಲಿ ಪಿ.ಎಫ್.ಐ ಸಂಘಟನೆಯ ಕೈವಾಡವಿದೆ : ಜಗದೀಶ ಶೇಣವ

Wednesday, August 16th, 2017
Jagadesh Shenava

ಮಂಗಳೂರು : ಶರತ್ ಮಡಿವಾಳ ಹತ್ಯೆಯಲ್ಲಿ  ದ. ಕ. ಜಿಲ್ಲೆಯ ಎಸ್‌ಡಿಪಿಐ ಮತ್ತು ಪಿ.ಎಫ್.ಐ. ನಾಯಕರ ಕೈವಾಡವಿದ್ದು, ಅವರನ್ನು ಬಂಧಿಸಬೇಕು ಮತ್ತು ಈ ಕೊಲೆಗೆ ಸಹಕಾರ ನೀಡಿದ ಎಲ್ಲ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ದ. ಕ. ಜಿಲ್ಲಾಧ್ಯಕ್ಷ ಜಗದೀಶ ಶೇಣವ ಹೇಳಿದ್ದಾರೆ. ಪಿಎಫ್ಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಯಲ್ಲಿ ಸೇರಿಸಿ ಕ್ರಮ ತೆಗೆದುಕೊಳ್ಳಬೇಕು, ಕಳೆದ ಎರಡು ವರ್ಷಗಳಿಂದ ನಡೆದ ಹಿಂದು ಕಾರ್ಯಕರ್ತರ ಕೊಲೆಯಲ್ಲಿ ಪಿ.ಎಫ್.ಐ ಸಂಘಟನೆಯ ಕೈವಾಡವಿದ್ದು, ಮೂಡುಬಿದಿರೆಯ ಪ್ರಶಾಂತ್ ಪೂಜಾರಿ, ಬೆಂಗಳೂರಿನ ರುದ್ರೇಶ್, […]