ಕೊರೊನಾ ವೈರಸ್ನ ಬಗ್ಗೆ ಶಕ್ತಿನಗರದಲ್ಲಿ ಜನಜಾಗೃತಿ
Saturday, March 21st, 2020ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ.ಪೂ. ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿ ವರ್ಗದಿಂದ ಕೊರೊನಾ ವೈರಸ್ನ ಬಗ್ಗೆ ಶಕ್ತಿನಗರದ ಹಲವು ಪ್ರದೇಶದಲ್ಲಿ ಮನೆ ಮನೆಗೆ ತೆರಲಿ ಜನ ಜಾಗೃತಿಯನ್ನು ನಡೆಸಲಾಯಿತು. ಕೊರೊನಾ ವೈರಸ್ (ಕೋವಿದ್-19)ರ ಕುರಿತಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಮನೆ ಮನೆಗೆ ತೆರಲಿ ಕನ್ನಡ ಹಾಗೂ ಆಂಗ್ಲಭಾಷಾ ಕರಪತ್ರವನ್ನು ವಿತರಿಸಿ ವಿವರಿಸಲಾಯಿತು. ಸರ್ಕಾರ, ಜಿಲ್ಲಾಡಳಿತ ತೆಗೆದುಕೊಳ್ಳುವ ನಿರ್ಣಯವನ್ನು ಸ್ವಾಗತಿಸುವಂತೆ ತಿಳಿಸಲಾಯಿತು. ನಾಳೆ ಪ್ರಧಾನಿಯವರು ಕರೆಕೊಟ್ಟಿರುವ ಜನತಾ ಕರ್ಪ್ಯೂವನ್ನು […]