ಜೆಡಿಎಸ್ ಪಕ್ಷದ ತತ್ವ ಸಿದ್ದಾಂತವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಅನುಸರಿಸುತ್ತಾ ಬಂದಿದೆ : ಲೀಲಾವತಿ ಆರ್ ಪ್ರಸಾದ್

Sunday, March 21st, 2021
JDS

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾದಳ ಮಹಿಳಾ ಘಟಕದ ವತಿಯಿಂದ ಮಹಿಳಾ ಸಮಾವೇಶ ಮಹಿಳಾ ದಿನಾಚರಣೆ ಮತ್ತು ಸಾಮರಸ್ಯ ಸಂಗಮ ಕಾರ್ಯಕ್ರಮ ಮಂಗಳೂರಿನ ಕದ್ರಿಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾ ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಮಾಜಿ ಸಚಿವೆ, ಜೆಡಿಎಸ್ ಮಹಿಳಾ ಘಟಕದ ರಾಜ್ಯಧ್ಯಕ್ಷೆ ಲೀಲಾವತಿ ಆರ್ ಪ್ರಸಾದ್ ದೀಪಬೆಳಗಿ ಚಾಲನೆ ನೀಡಿದರು. ಬಳಿಕ ಗ್ರಾಮಾಪಂಚಯತ್ ಚುನಾವಣೆಯಲ್ಲಿ ಗೆದ್ದ ಜೆಡಿಎಸ್ ಅಭ್ಯರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ನಾಲ್ಕು ಮಹಿಳಾ ಸಾಧಕಿಯರಿಗೆ ಸನ್ಮಾನ […]

ದ.ಕ. ಜಿಲ್ಲಾ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ವಿಶೇಷ ಸನ್ಮಾನ

Saturday, January 16th, 2021
jds GP

ಮಂಗಳೂರು  : ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಮಾನ್ಯ ವಿಧಾನ ಪರಿಷತ್ ಶಾಸಕರಾದ ಶ್ರೀ ಬಿ.ಎಮ್. ಫಾರೂಕ್ ರವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನತಾದಳ ವತಿಯಿಂದ ದ.ಕ. ಜಿಲ್ಲಾ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆಯ ಕುಪ್ಪೆಪದವು ಮತ್ತು  ಬೆಳ್ತಂಗಡಿ ತಾಲೂಕಿನ  ಹೊಸ0ಗಡಿ ಗ್ರಾಮದಿಂದ ಸ್ಪರ್ಧಿಸಿ ವಿಜಯಪತಾಕೆ ಹಾರಿಸಿದ ಸದಸ್ಯರುಗಳು ಹಾಗೂ ಕುಪ್ಪೆ ಪದವು ಗ್ರಾಮದ ಜೇಡಿಎಸ್ ಪಕ್ಷದ ಗೆಲುವಿನ ನಾಯಕತ್ವ ವಹಿಸಿದ ಡಿ.ಪಿ. ಹಮ್ಮಬ್ಬರಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪಕ್ಷದ […]

ಜನತಾದಳದ ಹಿರಿಯ ಮುಖಂಡ ಎಂ.ಸಂಜೀವ ಇನ್ನಿಲ್ಲ

Monday, June 17th, 2019
M Sanjeeva

ಮಂಗಳೂರು : ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನತಾದಳದ ಹಿರಿಯ ಮುಖಂಡ ಎಂ.ಸಂಜೀವ ಅವರು ಕದ್ರಿ ಸ್ಟೂಡೆಂಟ್ ಲೇನ್ ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಅವರಿಗೆ 86 ವರ್ಷ ವಯಸ್ಸಾಗಿತ್ತು. ಎಂ.ಸಂಜೀವ  ಅವರು  ಜನತಾ ಪರಿವಾರದ ರಾಷ್ಟ್ರೀಯ ಮುಖಂಡರ ನಿಕಟವರ್ತಿಯಾಗಿದ್ದರು. ಶಾಲಾ ದಿನಗಳಲ್ಲಿ ತ್ವಾತಂತ್ರ್ಯ ಹೋರಾಟದಿಂದ ಸಾಮಾಜಿಕ ಜೀವನ ಪ್ರವೇಶಿಸಿದ ಸಂಜೀವರು ತುರ್ತು ಪರಿಸ್ಥಿತಿಯಲ್ಲಿ ಸಕ್ರಿಯರಾಗಿದ್ದು ಅವರನ್ನು ಹಲವು ಬಾರಿ ಮೀಸಾ ಕಾಯಿದೆಯಡಿ ಬಂಧಿಸಲಾಗಿತ್ತು. ಅನಂತರ, ಭೂಸುಧಾರಣೆ ಕಾಲದಲ್ಲಿ ಬಡವರಿಗೆ ಭೂಮಿ ದೊರಕಿಸಲು, ಬಾಡಿಗಾರರ ವಿರುದ್ಧ ನಡೆಯುತ್ತಿದ್ದ […]