ಮಹದಾಯಿ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ಮಹತ್ವದ ಸರ್ವಪಕ್ಷ ಸಭೆ ಆಗಸ್ಟ್‌ 7ರಂದು ನಿಗದಿ

Thursday, August 4th, 2016
Mahadayi

ಬೆಂಗಳೂರು: ಮಹದಾಯಿ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಮುಂದಿನ ನಡೆಗಳನ್ನು ನಿರ್ಧರಿಸಲು ಮಹತ್ವದ ಸರ್ವಪಕ್ಷ ಸಭೆ ಆಗಸ್ಟ್‌ 7ರಂದು ನಿಗದಿಯಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕಾನೂನು ತಜ್ಞರ ಜತೆ ಚರ್ಚಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು. ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರು, ರಾಜ್ಯದ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು, ಉತ್ತರ ಕರ್ನಾಟಕ ಭಾಗದ ಶಾಸಕರು, ವಿಧಾನ ಪರಿಷತ್‌ ಸದಸ್ಯರನ್ನು ಸಭೆಗೆ ಆಹ್ವಾನಿಸಲಾಗುವುದು. ಸರ್ವಪಕ್ಷ ಸಭೆಯಲ್ಲಿ ನ್ಯಾಯಾಧಿಕರಣದ ಮುಂದೆ […]

ಕಾಸರಗೋಡಿನಲ್ಲಿ ಬೃಹತ್ ಉದ್ಯೋಗ ಮೇಳ

Monday, February 29th, 2016
Udyogamela

ಕಾಸರಗೋಡು: ರಾಷ್ಟ್ರದ ಸಮಗ್ರ ಅಭಿವೃದ್ದಿಗೆ ಯುವ ಸಮೂಹದ ಕೊಡುಗೆಯನ್ನು ಲಕ್ಷ್ಯದಲ್ಲಿರಿಸಿ ಕೇಂದ್ರ ಸರಕಾರ ವಿವಿಧ ಆಯಾಮಗಳಲ್ಲಿ ಯೋಜನೆಗಳಿಗೆ ರೂಪು ನೀಡುತ್ತಿರುವುದು ಸ್ತುತ್ಯರ್ಹವೆಂದು ಕಾಸರಗೋಡು ಚಿನ್ಮಯಾ ಮಿಷನ್ ಅಧ್ಯಕ್ಷ ಸ್ವಾಮಿ ವಿವಿಕ್ತಾನಂದ ಅಭಿಪ್ರಾಯ ವ್ಯಕ್ತಪಡಿಸಿದರು. ಕೇಂದ್ರ ಕಾರ್ಮಿಕ ಉದ್ಯೋಗ ಸಚಿವಾಲಯದ ನೇತೃತ್ವದಲ್ಲಿ ಕಾಸರಗೋಡಿನ ವಿವೇಕಾನಂದ ಎಜ್ಯುಕೇಶನಲ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಯುವ ಕಿರಣ್ ಸಂಘಟನೆಗಳ ಸಹಕಾರದೊಂದಿಗೆ ಭಾನುವಾರ ವಿದ್ಯಾನಗರದ ಚಿನ್ಮಯಾ ಮಿಷನ್ ಪರಿಸರದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ದೀಪ ಬೆಳಗಿಸಿ ಅವರು ಮಾತನಾಡುತ್ತಿದ್ದರು. ಉದ್ಯೋಗ ಇಂದು […]