ಅಣ್ಣಾ ಬೇಡಿಕೆ : ಕೊನೆಗೂ ಧ್ವನಿಮತದಿಂದ ಸಮ್ಮತಿಸಿದ ಸರಕಾರ
Saturday, August 27th, 2011ನವ ದೆಹಲಿ: ಲೋಕಸಭೆಯಲ್ಲಿ ಲೋಕಪಾಲ ಮಸೂದೆಯ ಚರ್ಚೆಯ ನಂತರ ಸಂಸತ್ತಿನಲ್ಲಿ ಧ್ವನಿಮತದ ಪ್ರಸ್ತಾವನೆಗೆ ಕೊನೆಗೂ ಕೇಂದ್ರ ಸರಕಾರ ಒಪ್ಪಿಕೊಂಡಿದೆ. ಲೋಕಪಾಲ ಚರ್ಚೆಯ ನಂತರ ಧ್ವನಿಮತಕ್ಕೆ ಹಾಕುವ ಕೇಂದ್ರ ಸರಕಾರದ ನಿರ್ಧಾರದಿಂದ ಸಂತೋಷವಾಗಿದೆ ಎಂದು ಅಣ್ಣಾ ತಂಡದ ಸದಸ್ಯರಾದ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಸಂಸತ್ತಿನಲ್ಲಿ ನಿರ್ಣಯ ಅಂಗೀಕಾರವಾದ ನಂತರ ಪ್ರಧಾನಿಮಂತ್ರಿ ಮನಮೋಹನ್ ಸಿಂಗ್ ಅವರ ಪತ್ರದೊಂದಿಗೆ ಕೇಂದ್ರ ಸಚಿವ ವಿಲಾಸರಾವ್ ದೇಶಮುಖ್, ಅಣ್ಣಾ ಹಜಾರೆಯವರ ಭೇಟಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಣ್ಣಾ ಹಜಾರೆ, ಜನಲೋಕಪಾಲ ಮಸೂದೆ ಜಾರಿಗೊಳಿಸುವಂತೆ […]