ಬೈಕಾಡಿ ಜನಾರ್ದನ ಆಚಾರ್ ನಿಧನ

Sunday, September 13th, 2020
Baikady Janardhana-Achar

ಮಂಗಳೂರು : ಆದರ್ಶ ಶಿಕ್ಷಕ, ಶಿಕ್ಷಣ ತಜ್ಞ ಬೈಕಾಡಿ ಜನಾರ್ದನ ಆಚಾರ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ನಿಧನರಾದರು. ಅವರು ಕೆನರಾ ಹೈ ಸ್ಕೂಲ್‌ನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಚೆನ್ನರಾಯಣ ಪಟ್ಟಣದ ಮಲನಾಡು ಪಿಯು ಕಾಲೇಜು ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ, ವಿಶ್ವ ಹಿಂದೂ ಪರಿಷತ್‌ನಲ್ಲೂ ಗುರುತಿಸಿಕೊಂಡಿದ್ದರು. ಎಸ್‌ಕೆಜಿಐ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಕ್ತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿದ್ದ ಅವರು ಆಗಸ್ಟ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದರು. ಶಾಲಾ ದಿನಗಳಿಂದಲೇ ಅನೇಕರಿಗೆ […]

ಶಕ್ತಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವತಿಯಿಂದ 72ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ..!

Wednesday, August 15th, 2018
shakti-school

ಮಂಗಳೂರು: ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವತಿಯಿಂದ 72ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಶಕ್ತಿ ಶಾಲೆಯ ಮೈದಾನದಲ್ಲಿ ಧ್ವಜಾರೋಹಣದೊಂದಿಗೆ ಆಯೋಜಿಸಲಾಯಿತು. ಧ್ವಜಾರೋಹಣವನ್ನು ಕ್ಯಾ. ಮುಲ್ಕಿ ಗಣೇಶ ರಾವ್ ನೆರೆವೇರಿಸಿ ಧ್ವಜ ವಂದನೆಯನ್ನು ಸಲ್ಲಿಸಿದರು. ಶಕ್ತಿ ಶಾಲೆಯ ವತಿಯಿಂದ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾಕ್ ವಹಿಸಿದರು. ಈ ಸಂದರ್ಭದಲ್ಲಿ ಕ್ಯಾ. ಮುಲ್ಕಿ ಗಣೇಶ ರಾವ್ ಇವರು […]