ಜೈಲು ಶಿಕ್ಷೆಗೆ ಸೀಮಿತವಾದುದಲ್ಲ ಅದು ಸತ್‌ಪರಿವರ್ತನೆಯ ದಾರಿ : ರವೀಶ ತಂತ್ರಿ

Thursday, December 17th, 2015
Kasaragod subjail

ಮುಳ್ಳೇರಿಯ : ಜೈಲು ಶಿಕ್ಷೆ ಎಂಬುದು ಕೇವಲ ಶಿಕ್ಷೆಗೆ ಮಾತ್ರ ಸೀಮಿತವಾದ ಜಾಗವಲ್ಲ ಅದೊಂದು ಆತ್ಮಚಿಂತನೆಯೊಡಗೂಡಿ ಸತ್‌ಪರಿವರ್ತನೆಯ ದಾರಿಯಲ್ಲಿ ಮುನ್ನಡೆಯುವ ಸದವಕಾಶವಾಗಿರುತ್ತದೆ. ಹಾಗಾಗಿ ಜೈಲಿನಲ್ಲಿರುವ ಎಲ್ಲಾ ಕೈದಿಗಳು ಬಿಡುಗಡೆಯಾಗಿ ಬರುವಾಗ ಸನ್ನಡತೆಯಿಂದ ಸಮಾಜದಲ್ಲಿ ಗುರುತಿಸಿಕೊಂಡು ಉನ್ನತಿಗೇರಲು ಭಗವತ್‌ಶಕ್ತಿಗಳು ಆನುಗ್ರಹಿಸಿ ಜನ್ಮಸಾರ್ಥಕ್ಯಗೊಳಿಸಿಕೊಳ್ಳಲಿ ಎಂದು ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಸ್ಪೆಶಲ್ ಸಬ್ ಜೈಲಿನಲ್ಲಿ ಜೈಲಿನ ವಾಚನಾಲಯಕ್ಕೆ ಸುಮಾರು 250 ರಷ್ಟು ಕನ್ನಡ ಪುಸ್ತಕಗಳು ಹಾಗೂ ಕನ್ನಡ ದಿನಪತ್ರಿಕೆಯನ್ನು ಕುಂಟಾರಿನ ಪರಿವರ್ತನಾ ಯುವಕ ಸಂಘದ […]