ಕುತ್ತಾರಿನಲ್ಲಿ ಯಡಿಯೂರಪ್ಪಅವರ 75 ನೇ ಜನ್ಮದಿನಾಚರಣೆ

Friday, March 2nd, 2018
Raveendra shetty

ಕುತ್ತಾರು : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪಅವರ 75 ನೇ  ಜನ್ಮದಿನಾಚರಣೆಯ ಪ್ರಯುಕ್ತ ಕುತ್ತಾರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ, ಆರೋಗ್ಯ ಚೀಟಿ ವಿತರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಧಾರ್ಮಿಕ ಪರಿಷತ್ ಜಿಲ್ಲಾ ಮಾಜಿ ಸದಸ್ಯ ಕೆ.ಟಿ ಸುವರ್ಣ ಮಾತನಾಡಿ ಯಡಿಯೂರಪ್ಪನವರಿಗೆ ಸಾಕಷ್ಟೂ ಅಭಿಮಾನಿಗಳಿದ್ದಾರೆ. ಅವರ ಜನ್ಮದಿನವನ್ನು ಮನಃಪೂರ್ವಕ […]

ಸ್ವಾಮಿ ವಿವೇಕಾನಂದರ 150ನೇ ವರ್ಷದಿನಾಚರಣೆಯ ಅಂಗವಾಗಿ ನೆಹರೂ ಮೈದಾನದಿಂದ ರಾಮಕೃಷ್ಣ ಮಠದವರೆಗೆ ನಡೆದ ಬೃಹತ್ ಮೆರವಣಿಗೆ

Monday, January 14th, 2013
ಸ್ವಾಮಿ ವಿವೇಕಾನಂದರ 150ನೇ ವರ್ಷದಿನಾಚರಣೆಯ ಅಂಗವಾಗಿ ನೆಹರೂ ಮೈದಾನದಿಂದ ರಾಮಕೃಷ್ಣ ಮಠದವರೆಗೆ  ನಡೆದ ಬೃಹತ್ ಮೆರವಣಿಗೆ

ಮಂಗಳೂರು : ಸ್ವಾಮಿ ವಿವೇಕಾನಂದರ 150ನೇ ವರ್ಷದಿನಾಚರಣೆಯ ಅಂಗವಾಗಿ ಶನಿವಾರ ನಗರದ ನೆಹರೂ ಮೈದಾನದಿಂದ ರಾಮಕೃಷ್ಣ ಮಠದವರೆಗೆ ಮೆರವಣಿಗೆಯನ್ನು ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ದ.ಕ.ಜಿಲ್ಲಾಧಿಕಾರಿ ಎನ್.ಪ್ರಕಾಶ್ ಮೆರವಣಿಗೆ ಚಾಲನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ರಾಮಕೃಷ್ಣ ಮಠ ಮಂಗಳೂರು, ದ.ಕ.ಜಿಲ್ಲಾ ಪಂಚಾಯತ್ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನೆಹರೂ ಮೈದಾನದ ಮೂಲಕ ನಡೆದ ಮೆರವಣಿಗೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು […]