ಬಂಗಾರಪಲ್ಕೆ ಗುಡ್ಡ ಕುಸಿತದಿಂದ ಮಣ್ಣಿನಡಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Tuesday, February 16th, 2021
sanath

ಬೆಳ್ತಂಗಡಿ :  ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ  ಮೃತದೇಹ ಮಂಗಳವಾರ ಪತ್ತೆಯಾಗಿದೆ. ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ (20) ಅವರ ಮೃತದೇಹ ಮೂರು ವಾರಗಳ ನಂತರ ಪತ್ತೆಯಾಗಿದೆ. ಬಂಗಾರಪಲ್ಕೆ ಜಲಪಾತದಲ್ಲಿ ಕಾರ್ಯಾಚರಣೆ ನಡೆಸಲು ಬೇಕಾದ ಯಂತ್ರಗಳನ್ನು ಬಳಸಲು ಸರಿಯಾದ ವಾತಾವರಣವಿಲ್ಲದ ಕಾರಣ ಹಲವು ಸಮಯದವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಕಲ್ಲು ಬಂಡೆಯಡಿ ಮೃತದೇಹ ಲಭ್ಯವಾಗಿದೆ.  

ಜಲಪಾತದ ವೀಕ್ಷಣೆಗೆ ಹೋಗಿದ್ದ ಯುವಕ ಮಣ್ಣಿನಡಿ ಸಿಲುಕಿ ನಾಪತ್ತೆ

Tuesday, January 26th, 2021
Bangar Palke

ಬೆಳ್ತಂಗಡಿ:  ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಅರಣ್ಯ ಪ್ರದೇಶದಲ್ಲಿರುವ ಜಲಪಾತಕ್ಕೆ ತೆರಳಿದ್ದ ಉಜಿರೆ ಮೂಲದ ಯುವಕ ಮಣ್ಣಿನಡಿ ಸಿಲುಕಿ  ನಾಪತ್ತೆಯಾಗಿರುವ  ಘಟನೆ ನಡೆದಿದೆ. ಜಲಪಾತದ  ವೀಕ್ಷಣೆಗೆ ಹೋಗಿದ್ದ ನಾಲ್ವರು ಯುವಕರ ಮೇಲೆ ದಿಢೀರನೆ ಕುಸಿದಿದೆ. ಘಟನೆಯಲ್ಲಿ ಮೂವರು ಯುವಕರು ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ. ನಾಪತ್ತೆಯಾದ ಯುವಕನ್ನು ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಸಮೀಪದ ನಿವಾಸಿ ಎಂದು ಹೇಳಲಾಗಿದೆ. ಅರಣ್ಯದಂಚಿನಲ್ಲಿ ಇರುವ ಈ ಜಲಪಾತ ಜನವಸತಿಯಿಂದ ದೂರವಿದೆ. ಇತ್ತೀಚೆಗಷ್ಟೆ ಜಲಪಾತಕ್ಕೆ ನಿಷೇಧ ಹೇರುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಒತ್ತಡ […]