ಹಿರಿಯ ಕಾಂಗ್ರೆಸ್ಸಿಗ, ಸಚಿವ ರೈ ಸಂಬಂಧಿ ಸಂಕಪ್ಪ ರೈ ನಿಧನ

Thursday, February 8th, 2018
sankappa-rai

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಜಿಲ್ಲಾ ಪರಿಷತ್ ಅಧ್ಯಕ್ಷರಾಗಿ ಅವಿಭಜಿತ ಜಿಲ್ಲೆಯಾದ್ಯಂತ ಹೆಸರು ಗಳಿಸಿದ್ದ, ಪುತ್ತೂರು ತಾಲೂಕಿನ ಪ್ರತಿಷ್ಠಿತ ಬೆಳ್ಳಿಪ್ಪಾಡಿ ಮನೆತನದವರಾದ ಬಿ. ಸಂಕಪ್ಪ ರೈ(85) ವಯೋಸಹಜ ಅನಾರೋಗ್ಯದಿಂದಾಗಿ ಇಂದು ಪುತ್ತೂರಿನಲ್ಲಿ ನಿಧನರಾದರು. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿಯವರಾದ ಬಿ.ಸಂಕಪ್ಪ ರೈ ಅವರು ಅವಿವಾಹಿತರಾಗಿದ್ದು, ಪುತ್ತೂರು ನಗರದ ಕೊಂಬೆಟ್ಟುವಿನಲ್ಲಿ ತನ್ನ ಮೊಮ್ಮಗನಾದ ಪುತ್ತೂರು ಪೂಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅವರೊಂದಿಗೆ ವಾಸವಾಗಿದ್ದರು. ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. […]