ಕುಮಾರಸ್ವಾಮಿಗೆ ಮುಖ್ಯಮಂತ್ರಿ ಪಟ್ಟ-ಜೆಡಿಎಸ್-ಕೈ ಕಾರ್ಯಕರ್ತರಿಂದ ಮಂಗಳೂರಿನಲ್ಲಿ ಸಂಭ್ರಮಾಚರಣೆ

Saturday, May 19th, 2018
jds

ಮಂಗಳೂರು: ರಾಜ್ಯಪಾಲ ವಜುಭಾಯಿ ವಾಲ ಅವರು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟ ಕ್ಕೆ ಅಹ್ವಾನ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜೆ‌ಡಿಎಸ್ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮಂಗಳೂರಿನ ಬೆಂದೂರ್‌‌ವೆಲ್‌‌ನಲ್ಲಿರುವ ಜೆಡಿಎಸ್ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ, ‌ಕುಮಾರಸ್ವಾಮಿಗೆ ಜೈಕಾರ ಹಾಕುತ್ತ ಸಿಹಿ ವಿತರಿಸಿ ಸಂಭ್ರಮಿಸಿದರು. ಇನ್ನು ನಗರದ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌‌ಗೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ, ಸಿಹಿ […]