ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪು ಹಾಗೂ ಹೂವುಗಳನ್ನು ಬಳಸಿ ವಿಶೇಷ ಆಲಂಕಾರ

Thursday, September 9th, 2021
JpNagara Ganapathi

  ಬೆಂಗಳೂರು : ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪುಗಳು ಹಾಗೂ ಹೂವುಗಳನ್ನು ಬಳಸಿಕೊಂಡು ವಿಶೇಷ ಆಲಂಕಾರವನ್ನು ಮಾಡಲಾಗಿದೆ ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌ನ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದ್ದಾರೆ. ಪ್ರತಿ ಬಾರಿಯೂ ವಿಶೇಷ ಆಲಂಕಾರ ಹಾಗೂ ವಿಶೇಷ ಸಾಮಗ್ರಿಗಳನ್ನು ಬಳಸಿಕೊಂಡು ಗಣೇಶ ಮೂರ್ತಿಯನ್ನು ತಯಾರಿಸುವ ಮೂಲಕ ದೇಶದ ಗಮನವನ್ನ ಈ ದೇವಸ್ಥಾನ ಸೆಳೆಯುತ್ತಿತ್ತು. ಕರೋನಾ ಸಾಂಕ್ರಾಮಿಕ ಕಾರಣ ಕಳೆದ ವರ್ಷವೂ […]

ಗಿಡ ನೆಟ್ಟು ಪರಿಸರ ದಿನ ಆಚರಿಸಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ

Tuesday, June 5th, 2018
kumarswamy-3

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಪಿ ನಗರದ ತಮ್ಮ ನಿವಾಸದ ಎದುರಿನ ನಗರ ಪಾಲಿಕೆ ಉದ್ಯಾನವನದಲ್ಲಿ ಇಂದು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ವಿಶ್ವ ಪರಿಸರ ದಿನದಂದು ಪ್ರತಿಯೊಬ್ಬರು ಪರಿಸರ ಉಳಿಸುವ ಪ್ರತಿಜ್ಞೆ ಮಾಡಬೇಕು . ಪರಿಸರ ಕಾಪಾಡಲು ನಮ್ಮ ಸರ್ಕಾರ ಪೂರ್ಣ ಪ್ರಮಾಣದ ಆದ್ಯತೆ ನೀಡುತ್ತದೆ ಎಂದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯ ನಿವಾಸಿಗಳು, ವಾಯುವಿಹಾರಿಗಳು ಹಾಜರಿದ್ದರು.