ಮಹಾನಗರಪಾಲಿಕೆ ಕಾಮಗಾರಿ-ಗುತ್ತಿಗೆದಾರರಿಗೆ ಕಾಲಮಿತಿಯಲ್ಲಿ ಬಿಲ್ ಪಾವತಿಸಿ-ಶ್ರೀ ಜೆ.ಕೃಷ್ಣ ಪಾಲೇಮಾರ್
Saturday, April 23rd, 2011ಮಂಗಳೂರು : ಮಂಗಳೂರು ನಗರದಲ್ಲಿ ಮೂಲಭೂತ ಸೌಲಭ್ಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮಾನ್ಯ ಮುಖ್ಯ ಮಂತ್ರಿಗಳು ನೀಡಿರುವ ವಿಶೇಷ ಅನುದಾನದಡಿಯಲ್ಲಿ ವಿವಿಧ ಕಾಮಗಾರಿಗಳ ಗುತ್ತಿಗೆ ಪಡೆದಿರುವ ಗುತ್ತಿಗೆದಾರರಿಗೆ ಕಾಮಗಾರಿ ಪೂರ್ಣಗೊಂಡ 20 ದಿನಗಳೊಳಗೆ ಬಿಲ್ಲಿನ ಹಣ ಪಾವತಿ ಮಾಡುವಂತೆ ಮಹಾನಗರಪಾಲಿಕೆಯ ಅಧಿಕಾರಿಗಳಿಗೆ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ,ಮೀನುಗಾರಿಕೆ,ಪರಿಸರ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೃಷ್ಣ ಜೆ.ಪಾಲೇಮಾರ್ರವರು ಸೂಚಿಸಿದ್ದಾರೆ. ಅವರು ನಿನ್ನೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಈ ವಿಷಯ ತಿಳಿಸಿದರು. […]