ಬಿಲ್ಲವರ ಎಸೋಸಿಯೇಷನ್ ಮುಂಬಯಿ ವತಿಯಿಂದ ಜೋಗೇಶ್ವರಿ ಕಚೇರಿಯಲ್ಲಿ ಕಿಟ್ ವಿತರಣೆ

Sunday, July 4th, 2021
Billavara Association

ಮುಂಬಯಿ : ಬಿಲ್ಲವರ ಅಶೋಸಿಯೇಶನ್ ಮುಂಬಯಿ ಅಧ್ಯಕ್ಷರಾದ ಹರೀಶ್ ಜಿ. ಅಮೀನ್ ಅವರ ನೇತೃತ್ವದಲ್ಲಿ ಸಮಾಜದ ದಾನಿಗಳ ಸಹಾಯದಿಂದ ಎಸೋಸಿಯೇಷನ್ 23 ಸ್ಥಳೀಯ ಕಚೇರಿಯಲ್ಲಿ ಸಮಾಜದ ಅಸಾಯಕ ಕುಟುಂಬಗಳಿಗೆ ಅಹಾರ ಕಿಟ್ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜುಲೈ 4 ರಂದು ಬಿಲ್ಲವರ ಎಸೋಸಿಯೇಷನ್ ಜೋಗೇಶ್ವರಿ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಸಮಾಜದ ಬಂಧುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಮಾಜದ ಅರ್ಹ ಕುಟುಂಬಗಳಿಗೆ ಕಿಟ್ ವಿತರಿಸುತ್ತಾ ಎಸೋಸಿಯೇಷನ್ ಉಪಾಧ್ಯಕ್ಷ ಶಂಕರ್ ಡಿ. ಪೂಜಾರಿಯವರು ಮಾತನಾಡುತ್ತಾ ಹಿಂದಿನಿಂದ ಪ್ರತಿ ಸ್ಥಳೀಯ […]

ತೀಯಾ ಸಮಾಜ, ಪಶ್ಚಿಮ ವಲಯ ದಿಂದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Monday, January 18th, 2021
Tiya Mumbai

ಮುಂಬಯಿ : ಕೊರೋನಾ ಸಂದರ್ಭದಲ್ಲಿ ಸರಕಾರದ ನಿಯಮಾವಳಿಯನ್ನು ಪಾಲಿಸಿ ತೀಯಾ ಸಮಾಜ, ಮುಂಬಯಿಯ ಪಶ್ಚಿಮ ವಲಯ ಸ್ಥಳೀಯ ಸಮಿತಿಯು ಇಂದು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ನೆರವೇರಿಸಿದ್ದು, ಈ ಸಂದಿಗ್ಧ ಪರಿಸ್ಥಿತಿಯಲ್ಲೂ ಸ್ಥಳೀಯ ಸಮಿತಿಯು ಧಾರ್ಮಿಕ ಕಾರ್ಯವನ್ನು ನಡೆಸಿ ಇಂದಿನ ಯುವಜನಾಂಗದಲ್ಲಿ ಧಾರ್ಮಿಕ ಪ್ರಜ್ನೆಯನ್ನು ಮೂಡಿಸುವಂತೆ ಮಾಡುತ್ತಿದ್ದು ನಿಜಕ್ಕೂ ಅಭಿನಂದನೀಯ ಎಂದು ತೀಯಾ ಸಮಾಜ ಮುಂಬಯಿಯ ಉಪಾಧ್ಯಕ್ಷ, ಉದ್ಯಮಿ ರೂಪೇಶ್ ವೈ ರಾವ್ ಅಭಿಪ್ರಾಯ ಪಟ್ಟಿರುವರು. ಜ. 17 ರಂದು ಜೋಗೇಶ್ವರಿ ಪಶ್ಚಿಮದ ಬಾಂದ್ರೇಕರ್ ವಾಡಿಯ ಶ್ರೀ […]

ಡಾ| ರಂಗನಾಥ್ ಎಸ್. ಶೆಟ್ಟಿ ಜೋಗೇಶ್ವರಿ ನಿಧನ

Tuesday, April 1st, 2014
Dr.Ranganath Shetty

ಮುಂಬಯಿ :  ಉಪನಗರ ಜೋಗೇಶ್ವರಿ ಪೂರ್ವದ ಪ್ರಸಿದ್ಧ ವೈದ್ಯಾಧಿಕಾರಿ, ಡಾ| ರಂಗನಾಥ್ ಎಸ್.ಶೆಟ್ಟಿ (68.) ಅವರು ಇಂದಿಲ್ಲಿ ಸೋಮವಾರ (31.03.2014) ಮುಂಜಾನೆ ತನ್ನ ಸ್ವನಿವಾಸ ಗೋರೆಗಾಂವ್ ಪೂರ್ವದ ಪೇರುಭಾಗ್ ಅಲ್ಲಿನ ಧನವಂತಿ ಅಪಾರ್ಟ್ ಮೆಂಟ್ ನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಮೂಲತಃ ಮಂಗಳೂರು ಬಳ್ಕುಂಜೆ ಸನಿಹದ ಮುಂಡ್ಕೂರು ಉಳೆಪಾಡಿ ಕಲೆಂಬಿ ನಿವಾಸದವರಾಗಿದ್ದ ರಘುನಾಥ್ ಶೆಟ್ಟಿ ಹಲವಾರು ವರ್ಷಗಳಿಂದ ಜೋಗೇಶ್ವರಿ ಪೂರ್ವದಲ್ಲಿ ಪಾರಸ್ ನಗರದಲ್ಲಿ ಕ್ಲಿನಿಕ್ ಮೂಲಕ ವೈದ್ಯಕೀಯ ಸೇವಾ ನಿರತರಾಗಿದ್ದರು. ಮೃತರು ಪತ್ನಿ ಶ್ರೀಮತಿ ಸುಕನ್ಯಾ ಆರ್.ಶೆಟ್ಟಿ, ಏಕೈಕ ಸುಪುತ್ರಿ ಡಾ| […]