ಬಿಜೆಪಿ ಕಾರ್ಯಕರ್ತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Tuesday, February 15th, 2022
jyotish

ಕಾಸರಗೋಡು : ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಾಸರಗೋಡಿನಲ್ಲಿ ಪತ್ತೆಯಾಗಿದೆ. ಅಣ೦ಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಮೃತ ಯುವಕ. ಮನೆ ಸಮೀಪದ ಮರ ವೊಂದರ ರೆಂಬೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಮೃತದೇಹ  ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆ ಯಾಗಿದ್ದು, ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ. ಬಿಜೆಪಿ ಕಾರ್ಯಕರ್ತನಾಗಿದ್ದ ಜ್ಯೋತಿಷ್ ಬಂಗ್ರಗುಡ್ಡೆ ಯ ಸಿನಾನ್, ಸೂರ್ಲು ವಿನ ರಿಷಾದ್ ಹಾಗೂ ಕೊಲೆ ಪ್ರಕರಣದ […]