ಆಶಾ ಕಾರ್ಯಕರ್ತೆಯರಿಗೆ 2000 ಟೊಪಿ ಹಸ್ತಾಂತರ 

Saturday, May 2nd, 2020
toppi-vitharane

ಮಂಗಳೂರು :  ಆಶಾ ಕಾರ್ಯಕರ್ತೆಯರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ ವತಿಯಿಂದ ಉಚಿತವಾಗಿ 2,000 ಟೊಪ್ಪಿಗಳನ್ನು (ಕ್ಯಾಪ್ ) ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ ಮತ್ತು ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೆಷನ್ ಅಧ್ಯಕ್ಷ ಶ್ರೀಧರ್ ಕಾಮತ್, ಕಾರ್ಯದರ್ಶಿ ಗಣೇಶ್ ಕಾಮತ್, ಸಂತೋಷ ಕಾಮತ್, ಸಂಜಯ್ ಕಾಮತ್ ಉಪಸ್ಥಿತರಿದ್ದರು.