ಕಾಂಗ್ರೆಸ್ಸಿನಿಂದ ಪ್ರಭಲ ಸ್ಪರ್ಧಿ ಕಣಕ್ಕೆ , ವಿಧಾನ ಪರಿಷತ್ ಚುನಾವಣಾ ಸ್ಪರ್ಧಾಕಣದಿಂದ ಹಿಂದೆ ಸರಿದ ಡಾ ಎಂ. ಎನ್. ರಾಜೇಂದ್ರ ಕುಮಾರ್

Saturday, November 20th, 2021
mn Rajendra-Kumar

ಮಂಗಳೂರು  : ಅದ್ದೂರಿಯಾಗಿ ಚುನಾವಣಾ ಕಚೇರಿಯನ್ನು ತೆರೆದು ವಿಧಾನ ಪರಿಷತ್ ಚುನಾವಣೆ ಸ್ಪರ್ಧೆಗೆ ಇಳಿದಿದ್ದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಕೊನೆಯ ಕ್ಷಣದಲ್ಲಿ ಸ್ಪರ್ಧಾಕಣದಿಂದ ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35 ವರ್ಷಗಳಿಂದ ಸಹಕಾರ ರಂಗದಲ್ಲಿದ್ದೇನೆ. ರಾಜಕೀಯ ಬೇಡ, ಸಹಕಾರಿ ಕ್ಷೇತ್ರಕ್ಕೂ ರಾಜಕೀಯ ತರುವುದಿಲ್ಲ […]

ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣಾ ಕಾರ್ಯಾಲಯದ ಉದ್ಘಾಟನೆ

Tuesday, November 16th, 2021
MN Rajendrakumar

ಮಂಗಳೂರು : ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮವು ಮಂಗಳವಾರ ನಗರದ “ಇನ್‌ಲ್ಯಾಂಡ್ ಓರ್ನೆಟ್” ನಲ್ಲಿ ನಡೆಯಿತು. ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ‌ ಹರೀಶ್ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ  ಅವರು ಸಹಕಾರಿ ಧುರೀಣ  ಅತ್ಯಂತ ಪ್ರಾಮಾಣಿಕರಾದ, ಜನಸಾಮಾನ್ಯರ ಸೇವಕರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪಕ್ಷಾತೀತ ವ್ಯಕ್ತಿ. ಸಮಾಜ ಸೇವಕರಿಗೆ ಯಾವುದೇ ಪಕ್ಷದ ಅಗತ್ಯವಿಲ್ಲ, ಜನಸಾಮಾನ್ಯರ ಸಹಕಾರವೇ ಶಕ್ತಿಯಾಗಿದೆ. ಈ ಶಕ್ತಿಯಿಂದಲೇ […]

ಕ್ರೀಡೆಯಿಂದ ದೈಹಿಕ ಕ್ಷಮತೆ ಕಾಪಾಡಿಕೊಳ್ಳಬಹುದು : ಡಾ.ಎಂ.ಎನ್.ರಾಜೇಂದ್ರ ಕುಮಾರ್

Monday, December 2nd, 2019
v4

ಮಂಗಳೂರು : ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಕ್ಷಮತೆ ಕಾಪಾಡಿಕೊಳ್ಳಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತಕ ಸಂಘದ ವತಿಯಿಂದ ಭಾನುವಾರ ನಗರ ನೆಹರೂ ಮೈದಾನದ ಬಳಿಯ ಫುಟ್‌ಬಾಲ್ ಮೈದಾನದಲ್ಲಿ ನಡೆದ ಪತ್ರಕರ್ತರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ದಿನನಿತ್ಯ ಸುದ್ದಿಯ ಬೆನ್ನತ್ತಿ ಹೋಗುವ ಪತ್ರಕರ್ತರು ಕ್ರೀಡಾಕೂಟ ಆಯೋಜಿಸುತ್ತಿರುವುದು ಒಳ್ಳೆಯ ವಿಷಯ. ಮಾನಸಿಕ ನೆಮ್ಮದಿಗೂ ಕ್ರೀಡೆ […]

ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ಸಭಾಭವನ ಸೌಹಾರ್ಧ ಉದ್ಘಾಟಿಸಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್

Saturday, November 16th, 2019
Rajendra-Prasad

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು, ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ಸಭಾಭವನ ಸೌಹಾರ್ಧ ಇದರ ಉದ್ಘಾಟನಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರು ನೆರವೇರಿಸಿದರು. ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರ ಶಕ್ತಿ ತುಂಬಿದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ. ಅವರು ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸಭಾಭವನ ಸೌಹಾರ್ಧ ಇದರ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ […]

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಮಾಜದ ಶಕ್ತಿ : ಡಾ. ಪಿ.ಸುಬ್ರಹ್ಮಣ್ಯ ಎಡಪಡಿತ್ತಾಯ

Tuesday, August 27th, 2019
Rajendra-prasad

ಮಂಗಳೂರು : ರಾಷ್ಟ್ರದಲ್ಲಿಯೇ ಪ್ರಥಮ ಬಾರಿಗೆ ಕೃಷಿ ಮತ್ತು ಪತ್ತಿನ ಸಹಕಾರಿ ಸಂಘಗಳ 26 ಮಂದಿ ಪದಾಧಿಕಾರಿಗಳಿಗೆ ಇಸ್ರೆಲ್‌ಗೆ ಕೃಷಿ-ಹೈನುಗಾರಿಕೆ ಕುರಿತ ಅಧ್ಯಯನ ಪ್ರವಾಸಕೈಗೊಳ್ಳಲು ಅವಕಾಶ ಮಾಡಿಕೊಟ್ಟ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ಗೆ ಮಂಗಳವಾರ ಬ್ಯಾಂಕ್‌ನ ಸಭಾಂಗಣದಲ್ಲಿ ಅಭಿವಂದನೆ ಕಾರ್ಯಕ್ರಮ ನಡೆಯಿತು. ಡಾ.ಎಂ.ಎನ್.ರಾಜೇಂದ್ರ ಕುಮಾರ್ ‘ಸಹಕಾರ ರತ್ನ-ರೈತ ಬಂಧು’ ಮಾತ್ರವಲ್ಲ ಸಮಾಜದ ಶಕ್ತಿಯೂ ಆಗಿದ್ದಾರೆ ಎಂದು ಮಂಗಳೂರು ವಿವಿ ಕುಲಪತಿ ಡಾ. ಪಿ.ಸುಬ್ರಹ್ಮಣ್ಯ ಎಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ […]

ಆ. 27ರಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಅಭಿವಂದನಾ ಕಾರ್ಯಕ್ರಮ

Friday, August 23rd, 2019
MNR abhivandane

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ವತಿಯಿಂದ ಇತ್ತೀಚೆಗೆ ಇಸ್ರೇಲ್ ಗೆ ಅಧ್ಯಯನ ಪ್ರವಾಸ ಕೈಗೊಂಡ ಕೃಷಿ ಮತ್ತು ಪತ್ತಿನ ಸಹಕಾರಿ ಸಂಘಗಳ ಪದಾಧಿಕಾರಿಗಳೊಂದಿಗೆ ಆ. 27ರಂದು ಸಂವಾದ ಕಾರ್ಯಕ್ರಮ ಮತ್ತು ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಅಭಿವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಕೃಷಿ ಮತ್ತು ಪತ್ತಿನ ಸಹಕಾರಿ ಸಂಘಗಳ ಪದಾಧಿಕಾರಿಗಳ ವಿದೇಶ ಅಧ್ಯಯನ ಪ್ರವಾಸ ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಹಕಾರಿ ರಂಗದ […]

ನವೆಂಬರ್ 14 ರಿಂದ 20 ರವರೆಗೆ ಮಂಗಳೂರಿನಲ್ಲಿ ಸಹಕಾರಿ ಸಪ್ತಾಹ

Friday, November 10th, 2017
sahakari sapthaha

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿ, ಬೆಂಗಳೂರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ, ಮಂಗಳೂರು ಇದರ ವತಿಯಿಂದ ಮಂಗಳೂರಿನ 64 ನೇ ಅಖಿಲ ಭಾರತ ಸಹಕಾರ ಸಪ್ತಾಹ -2017 ನೆಹರು ಮೈದಾನ ಫುಟ್‌ಬಾಲ್ ಗ್ರೌಂಡ್ ನಲ್ಲಿ ನಡೆಯಲಿದೆ. ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಡಾ.ಎಂ ಎನ್. ರಾಜೇಂದ್ರ ಕುಮಾರ್ ರವರು ಪ್ರತಿ ವರ್ಷ ನವೆಂಬರ್ 14 ರಿಂದ 20 ರವರೆಗೆ ರಾಷ್ಟ್ರಾದಾದ್ಯಂತ “ಅಖಿಲ ಭಾರತ ಸಹಕಾರ ಸಪ್ತಾಹ ” ನಡೆಯುತ್ತದೆ. ಪಂಡಿತ್ ನೆಹರೂರವರ ಜನ್ಮ ದಿನವಾದ […]

ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸ್ಥಾನಕ್ಕೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವಿರೋಧ ಆಯ್ಕೆ

Tuesday, October 10th, 2017
rajendra kumar

ಮಂಗಳೂರು: ಜಾತಿ, ಧರ್ಮ, ಭಾಷೆಯನ್ನು ಮೀರಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಪೈಪೋಟಿ ಇದ್ದರೂ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಹಕಾರ ಮಾರಾಟ ಮಹಾಮಂಡಳದ ಅವರೇ ಆ ಸ್ಥಾನಕ್ಕೆ ಸಮರ್ಥರು ಎಂಬುದು ಸಾಬೀತಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ನೆರವೇರಿಸಿ ಅವರು ಮಾತನಾಡಿದರು. ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಕೇಂದ್ರ […]