ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎನ್.ಪ್ರಕಾಶ್ ಅಧಿಕಾರ ಸ್ವೀಕಾರ

Monday, December 3rd, 2012
N. Prakash Mangalore New DC

ಮಂಗಳೂರು :ಮಂಗಳೂರು ಮಾಜಿ ಜಿಲ್ಲಾದಿಕಾರಿ ಡಾ.ಎನ್.ಎಸ್.ಚನ್ನಪ್ಪಗೌಡ ರವರು ನೂತನ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರವರಿಗೆ ಇಂದು ತಮ್ಮ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ದ.ಕ.ಜಿಲ್ಲೆಯ 123ನೇ ಜಿಲ್ಲಾಧಿಕಾರಿಯಾಗಿ ಎನ್.ಪ್ರಕಾಶ್ ರವರು ಅಧಿಕಾರ ವಹಿಸಿಕೊಂಡರು. ಈ ಮೊದಲು ಇವರು ಬೆಂಗಳೂರಿನಲ್ಲಿ ಕೆ.ಎಸ್.ಆರ್.ಟಿ.ಸಿ. ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ 1955 ರಲ್ಲಿ ಜನಿಸಿದ ಇವರು ನಂಜನಗೂಡಿನಲ್ಲಿ ತನ್ನ ಪದವಿವರೆಗಿನ ಶಿಕ್ಷಣವನ್ನು ಪೂರೈಸಿ ನಂತರ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಇತಿಹಾಸ ವಿಭಾಗದಲ್ಲಿ 2ನೇ ರ್‍ಯಾಂಕ್ ನೊಂದಿಗೆ ಉತ್ತೀರ್ಣರಾಗಿ ನಂತರ ರೇಣುಕಾಚಾರ್ಯ […]

ಕಡ್ಡಾಯ ಶಿಕ್ಷಣ ಕಾಯಿದೆಯಿಂದ ಎಲ್ಲ ಮಕ್ಕಳಿಗೂ ಶಿಕ್ಷಣ: ಜಿಲ್ಲಾಧಿಕಾರಿ

Tuesday, July 5th, 2011
Kaddaya Shikshana Kayide

ಮಂಗಳೂರು: ಸರ್ಕಾರ ರೂಪಿಸಿರುವ ಕಡ್ಡಾಯ ಶಿಕ್ಷಣ ಕಾಯಿದೆಯಿಂದಾಗಿ ಎಲ್ಲ ಮಕ್ಕಳಿಗೂ ಶಿಕ್ಷಣ ಲಭ್ಯ. ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗಬಾರದೆಂಬ ಸದುದ್ದೇಶದಿಂದ ಕಾಯಿದೆ ರೂಪುಗೊಂಡಿದ್ದು ಸೌಲಭ್ಯದ ಸದ್ಬಳಕೆಯಾಗಬೇಕೆಂದು ಜಿಲ್ಲಾಧಿಕಾರಿ ಡಾ ಎನ್ ಎಸ್ ಚನ್ನಪ್ಪಗೌಡ ಅವರು ಹೇಳಿದರು. ಅವರಿಂದು ನಗರದ ಮಣ್ಣಗುಡ್ಡೆಯ ಗಾಂಧೀನಗರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲೆಗಾಗಿ ನಾವು ನೀವು ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಗುಣಾತ್ಮಕ ಶಿಕ್ಷಣಕ್ಕಾಗಿ ಕ್ರಿಯಾಶೀಲ ಆಡಳಿತ ಎಂಬ ಘೋಷವಾಕ್ಯದಡಿ ಶ್ವೇತಪತ್ರ ಹಾಗೂ ಕೈಪಿಡಿ ಬಿಡುಗಡೆ ಮಾಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಮಾತೃಭಾಷೆಯಲ್ಲಿ ಕಲಿಕೆಯಿಂದ […]