ಸಿದ್ದರಾಮಯ್ಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಡಾ. ಜಿ ಪರಮೇಶ್ವರ್

Friday, September 27th, 2019
G.-Parameshwar

ತುಮಕೂರು : ಸಿದ್ದರಾಮಯ್ಯ ಅವರಿಗಾಗಿ ಪಕ್ಷವಿಲ್ಲ, ಪಕ್ಷಕ್ಕಾಗಿ ನಾವಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ನಡುವಿದ್ದ ಭಿನ್ನಾಭಿಪ್ರಾಯ ಈಗ ಹೊರಬೀಳುತ್ತಿದೆ. ಸಿದ್ದರಾಮಯ್ಯರಗೋಸ್ಕರ ನಾವೇನಿಲ್ಲ, ಸಿದ್ದರಾಮಯ್ಯರಗೋಸ್ಕರ ಕಾಂಗ್ರೆಸ್ ಪಕ್ಷವೂ ಇಲ್ಲ ಅಥವಾ ನನಗೋಸ್ಕರ ಕಾಂಗ್ರೆಸ್ ಪಕ್ಷ ಇಲ್ಲ, ಕಾಂಗ್ರೆಸ್ ಪಕ್ಷಕ್ಕಾಗಿ ನಾವಿದ್ದೇವೆ ಎಂದರು. ಉಪಚುನಾವಣೆ ಸಂಬಂಧ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಗೆ ಪರಮೇಶ್ವರ್ ಯಾಕೆ ಗೈರಾಗಿದ್ದರು ಎನ್ನುವುದಕ್ಕೆ ಸ್ಪಷ್ಟನೆ ನೀಡಿರುವ ಅವರುಸಭೆಯನ್ನು ಮೊದಲು 11:30ಕ್ಕೆ ನಿಗದಿ […]

ಪ್ಯಾರಾ ಒಲಂಪಿಕ್‌ಗಾಗಿಯೇ ಪ್ರತ್ಯೇಕ ಸ್ಟೇಡಿಯಂ‌ ನಿರ್ಮಾಣಕ್ಕೆ ಯೋಜನೆ: ಡಾ. ಜಿ.ಪರಮೇಶ್ವರ್

Tuesday, November 20th, 2018
parameshwar

ಬೆಂಗಳೂರು: ಅಕ್ಟೋಬರ್‌ನಲ್ಲಿ ಇಂಡೋನೇಷ್ಯಾದಲ್ಲಿ ನಡೆದ ಪ್ಯಾರಾ ಏಷಿಯನ್‌ ಗೇಮ್ಸ್ನಲ್ಲಿ 9 ಪದಕ ಪಡೆದ ಏಳು ವಿಕಲಚೇತನ ಕ್ರೀಡಾಪಟುಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ. ಜಿ.ಪರಮೇಶ್ವರ್ ಅವರು ಗೃಹ ಕಚೇರಿಯಲ್ಲಿ ಇಂದು ಸನ್ಮಾನಿಸಿದರು. ಪ್ಯಾರಾ ಒಲಂಪಿಕ್‌ನಲ್ಲಿ‌ ಚಿನ್ನ ಗಳಿಸಿದ ರಕ್ಷಿತಾ ಆರ್., ಬೆಳ್ಳಿ ಹಾಗೂ ಕಂಚು ಪದಕ ವಿಜೇತೆ ವಿ.ರಾಧ, ಜಾವಲಿನ್ ಥ್ರೋ ವಿಭಾಗದಲ್ಲಿ ಕಂಚು ಪಡೆದ ಎನ್‌.ಎಸ್‌. ರಮ್ಯಾ, ಪ್ಯಾರ ಬ್ಯಾಡ್ಮಿಂಟನ್‌ನಲ್ಲಿ ಕಂಚು ವಿಜೇತ ಆನಂದ ಕುಮಾರ್, ಚೆಸ್‌ನಲ್ಲಿ ಚಿನ್ನದ ಪದಕ […]

ಬೆಂಗಳೂರಲ್ಲಿ ಮಳೆ ಅನಾಹುತ ತಡೆಯಲು ಮುನ್ನೆಚ್ಚರಿಕೆ ಕ್ರಮ: ಡಾ. ಜಿ.ಪರಮೇಶ್ವರ್

Tuesday, September 25th, 2018
parameshwar

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ‌ನಿರೀಕ್ಷೆಗೂ‌ ಮೀರಿ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ.‌ ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲು ವಲಯವಾರು ತಂಡಗಳು‌ ಕೆಲಸ‌ ಮಾಡುತ್ತಿವೆ ಎಂದು ಹೇಳಿದರು. ರಸ್ತೆ ಗುಂಡಿ ಮುಚ್ಚಲು ಹೈಕೋರ್ಟ್ ಆದೇಶ‌ ನೀಡಿದ್ದು, ಈ […]

ಗೊಂದಲವಿದ್ದರೂ ಸರಕಾರ ಬೀಳುವ ಮಟ್ಟಕ್ಕೆ ಯಾವುದೇ ಸಮಸ್ಯೆ ಇಲ್ಲ: ಡಾ.ಜಿ. ಪರಮೇಶ್ವರ್ 

Friday, September 14th, 2018
parameshwar

ಬೆಂಗಳೂರು: ಆಂತರಿಕವಾಗಿ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ, ಕೆಲ ಗೊಂದಲವಿದ್ದರೂ ಸರಕಾರ ಬೀಳುವ ಮಟ್ಟಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಸಚಿವ ಡಿ.ಕೆ.‌ಶಿವಕುಮಾರ್ ನಿವಾಸಕ್ಕೆ ತೆರಳಿ ಅವರೊಂದಿಗೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ಅವರು, ಆಂತರಿಕವಾಗಿ ಪಕ್ಷದಲ್ಲಿ ಅಸಮಾಧಾನ ಇಲ್ಲ, ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವರು ಹೇಳಿದ್ದಾರೆ. ಹೊಗೆ ಆಡಿದ ತಕ್ಷಣವೇ ದೊಡ್ಡ ಅನಾಹುತ ಅಂದರೆ ಹೇಗೆ. ತಾವೆಲ್ಲಾ ತಿಳಿದಿರುವಷ್ಟು ವಿಷಯ ಗಂಭೀರವಾಗಿಲ್ಲ, ‌ ಸರ್ಕಾರ ಸುಭದ್ರವಾಗಿದೆ ಎಂದು […]

ಒಲಂಪಿಕ್​ನಲ್ಲಿ ಚಿನ್ನದ ಪದಕ ಗೆದ್ದರೆ 3 ಕೋಟಿ ಬಹುಮಾನ: ಡಾ.ಜಿ ಪರಮೇಶ್ವರ್

Thursday, July 26th, 2018
Deputy-CM

ಬೆಂಗಳೂರು: ಒಲಂಪಿಕ್ನಲ್ಲಿ ಚಿನ್ನ ಗೆದ್ದರೆ 3 ಕೋಟಿ, ಬೆಳ್ಳಿಗೆ 3 ಕೋಟಿ ಹಾಗೂ ಕಂಚು ಗೆದ್ದರೆ 2 ಕೋಟಿ‌ ರೂಪಾಯಿ ನೀಡುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಘೋಷಿಸಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಬ್ಯಾಡ್ಮಿಂಟನ್ ತಾರೆ ಕನ್ನಡತಿ ಅಶ್ವಿನಿ ಪೊನ್ನಪ್ಪಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ಇದೇ ವೇಳೆ ಡಿಸಿಎಂ ಪರಮೇಶ್ವರ್ ಅವರು ಅಶ್ವಿನಿ ಪೊನ್ನಪ್ಪಗೆ ಶಾಲು, ಪೇಟ ತೊಡಿಸಿ ಸನ್ಮಾನಿಸಿದರು. ಅಲ್ಲದೆ ಸರ್ಕಾರದ ವತಿಯಿಂದ 33 […]

ಕರ್ನಾಟಕ ಒಂದೇ, ಅದರಲ್ಲಿ ಮೊದಲ ಕರ್ನಾಟಕ ಎರಡನೇ ಕರ್ನಾಟಕ ಅನ್ನೋದೇನಿಲ್ಲ: ಡಾ.ಜಿ ಪರಮೇಶ್ವರ್

Thursday, July 26th, 2018
g.parameshwar

ಬೆಂಗಳೂರು: ಕರ್ನಾಟಕ ಒಂದೇ, ಅದರಲ್ಲಿ ಮೊದಲ ಕರ್ನಾಟಕ ಎರಡನೇ ಕರ್ನಾಟಕ ಅನ್ನೋದೇನಿಲ್ಲ. ನಮ್ಮದು ಅಖಂಡ ಕರ್ನಾಟಕ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ 114 ತಾಲೂಕುಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದ್ದೇವೆ. ರಾಜ್ಯ ಸರ್ಕಾರದ ಹೋರಾಟದ ಫಲವಾಗಿಯೇ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಸಿಕ್ಕಿದೆ. ಇದನ್ನೆಲ್ಲ ಗಮನಿಸಬೇಕು. ಯಾವುದೇ ಕಾರಣಕ್ಕೂ ರಾಜ್ಯ ವಿಭಜನೆಯ ಮಾತುಗಳನ್ನು ಆಡಬಾರದು ಎಂದು ಮನವಿ ಮಾಡಿದರು. ನಮಗೆ ಉತ್ತರ ಕರ್ನಾಟಕ ಅಭಿವೃದ್ಧಿ ಬೇಡ […]

ಶಿರೂರು ಶ್ರೀಗಳ ಸಾವು ಅಸಹಜ..ದೃಢಪಟ್ಟಲ್ಲಿ ಸೂಕ್ತ ತನಿಖೆ: ಡಾ. ಜಿ.ಪರಮೇಶ್ವರ್‍

Thursday, July 19th, 2018
parameshwar

ಬೆಂಗಳೂರು: ಉಡುಪಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‍ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದಿನ ಪರ್ಯಾಯ ಅವಧಿಯಲ್ಲಿ ಶ್ರೀಗಳು ಸಾಕಷ್ಟು ಉತ್ತಮ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ಹಲವು ಕಾರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ವಿಚಾರ ಮಾಡಲಾಗುವುದು. ಅವರ ಸಾವು ಅಸಹಜ ಎಂದು ದೃಢಪಟ್ಟಲ್ಲಿ ಸೂಕ್ತ ತನಿಖೆ ನಡೆಸಲಾಗುವುದು ಎಂದರು. ಶ್ರೀಗಳ ಅಗಲಿಕೆ ಧಾರ್ಮಿಕ ಕ್ಷೇತ್ರದಲ್ಲಿ ತುಂಬಲಾಗದ ನಷ್ಟವಾಗಿದೆ. ಕೇವಲ 55 ವರ್ಷಕ್ಕೆ ಅವರು ನಿಧನರಾಗಿದ್ದಾರೆ. ಆಸ್ಪತ್ರೆಯ ಮೂಲಗಳಿಂದ […]

ಸಹೋದರನ ಅನಾರೋಗ್ಯದ ಕಾರಣದಿಂದಾಗಿ‌ ದೆಹಲಿಗೆ ತೆರಳಲಿಲ್ಲ: ಡಾ.ಜಿ. ಪರಮೇಶ್ವರ್

Wednesday, July 18th, 2018
g-parameshwar

ಬೆಂಗಳೂರು: ಸಹೋದರನ ಅನಾರೋಗ್ಯದ ಕಾರಣದಿಂದಾಗಿ‌ ದೆಹಲಿಗೆ ತೆರಳಲಿಲ್ಲ. ಇದರ ಹೊರತು ಬೇರೆ ಯಾವುದೇ ಕಾರಣ ಇಲ್ಲ, ಸರಿಯಾಗಿ ಆಹ್ವಾನ ಬಂದಿರಲಿಲ್ಲ ಎನ್ನುವುದೆಲ್ಲಾ ಸತ್ಯಕ್ಕೆ ದೂರವಾದ ಮಾತುಗಳು ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಸ್ಪಷ್ಟೀಕರಣ ನೀಡಿದ್ದಾರೆ. ವಿಧಾನಸೌಧದಲ್ಲಿ‌ ಸುದ್ದಿಗಾರರ ಜೊತೆ ಮಾತನಾಡಿದ ಅವರು , ನಮ್ಮ ಅಣ್ಣನ ಆರೋಗ್ಯ ಗಂಭೀರವಾಗಿದೆ. ಹೀಗಾಗಿ ನಾನು ದೆಹಲಿಗೆ ಹೋಗಲಿಲ್ಲ. ಕಾವೇರಿ ವಿಚಾರ ಸಭೆ ಸಂಬಂಧ ಸಂಸದರಿಗೆ ಮಾಹಿತಿ ನೀಡಿಲ್ಲ ಅನ್ನೋದು ತಪ್ಪು. ಎಲ್ಲರಿಗೂ ಸರ್ಕಾರದ ವತಿಯಿಂದ ಮಾಹಿತಿ ಹೋಗಿದೆ ಅನ್ನಿಸುತ್ತದೆ ಎಂದರು. […]

ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ: ಡಾ.ಜಿ. ಪರಮೇಶ್ವರ್

Tuesday, July 10th, 2018
g-parameshwar

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕ ಸುಬ್ರಮಣಿ ಸಾವು ಬೇಸರ ತರಿಸಿದೆ. ಈ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಪರಿಹಾರದ ಭರವಸೆ ನೀಡಿದ್ದಾರೆ. ಪೌರಕಾರ್ಮಿಕರ ಸಂಬಳದ ಸಮಸ್ಯೆ ಬಗ್ಗೆ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಪ್ರತಿಭಟನಾ ನಿರತ ಕಾರ್ಮಿಕರು ಸಹಕರಿಸಬೇಕು ಎಂದಿದ್ದಾರೆ. ಸುಬ್ರಮಣಿ ಆರೋಗ್ಯದಲ್ಲಿ ಸಮಸ್ಯೆ ಇದ್ದ ಕಾರಣಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು […]

ಸೋತ ಶಾಸಕರಿಗೆ ಧೈರ್ಯ ತುಂಬಿದ ರಾಜ್ಯ ‘ಕೈ’ ನಾಯಕರು

Monday, July 9th, 2018
dinesh-gundu-rao

ಬೆಂಗಳೂರು: ಶಾಸಕರ ಭವನದಲ್ಲಿ ಆಯೋಜಿಸಿದ್ದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. 2008ರಲ್ಲಿ 88 ಸ್ಥಾನ ಗೆದ್ದು ಪ್ರತಿಪಕ್ಷದಲ್ಲಿ ಕುಳಿತಿದ್ದ ಕಾಂಗ್ರೆಸ್‍ 2013ರಲ್ಲಿ 122 ಸ್ಥಾನ ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸಿದ್ದರು. 2013-2018ರ ನಡುವೆ ಹಲವು ಭಾಗ್ಯಗಳನ್ನು ದಯಪಾಲಿಸಿದ್ದ ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಂಡಿದ್ದರು. ಪಕ್ಷ […]