ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಡಾ.ಎಚ್.ಎಲ್.ನಾಗರಾಜ್

Wednesday, November 10th, 2021
HLNagaraj

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಕ‌ ಮಾಡಿ‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಗರಾಜ್ ಅವರು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಅಪರ‌ ಜಿಲ್ಲಾಧಿಕಾರಿಯಾಗಿರುವ ಡಾ. ಪ್ರಜ್ಞಾ ಅಮ್ಮೆಂಬಳ ಅವರ‌ ಸ್ಥಾನವನ್ನು ನಾಗರಾಜ್ ವಹಿಸಲಿದ್ದಾರೆ. ಪ್ರಜ್ಞಾ ಅವರಿಗೆ ಇನ್ನಷ್ಟೇ ಹುದ್ದೆ ನಿಯೋಜನೆಯಾಗಬೇಕಿದೆ.

ದಕ್ಷಿಣ ಕನ್ನಡ ಜಿಲ್ಲಾಅಪರ ಜಿಲ್ಲಾಧಿಕಾರಿ ರೂಪ ಎಂ.ಜೆ. ವರ್ಗಾವಣೆ

Tuesday, May 11th, 2021
Roopa MJ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ  ಅಪರ ಜಿಲ್ಲಾಧಿಕಾರಿಯಾಗಿದ್ದ ರೂಪ ಎಂ.ಜೆ.  ವರ್ಗಾವಣೆ ಗೊಂಡಿದ್ದು ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಪ್ರಜ್ಞಾ ಅಮ್ಮೆಂಬಳ(ಕೆಎ.ಎಸ್) ಅವರನ್ನು ನೇಮಕ ಮಾಡಿ ಸರಕಾರ  ಆದೇಶ  ಹೊರಡಿಸಿದೆ. ಡಾ. ಪ್ರಜ್ಞಾ ಅವರು ಕೆಎ ಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿದ್ದು, ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮದ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು. ರೂಪ ಎಂ.ಜೆ.  ಅವರಿಂದ  ತೆರವಾದ ಸ್ಥಾನಕ್ಕೆ ಇದೀಗ ಡಾ. ಪ್ರಜ್ಞಾ ಅವರನ್ನು ನೇಮಕಗೊಳಿಸಲಾಗಿದೆ.