ಮಾಸ್ಕ್ ಧರಿಸಲು ನಿರಾಕರಿಸಿದ ವೈದ್ಯ, ಸಾಂಕ್ರಾಮಿಕ ಕಾಯ್ದೆಯಡಿ ಪ್ರಕರಣ ದಾಖಲು

Wednesday, May 19th, 2021
Srinivasa kakkilaya

ಮಂಗಳೂರು : ಕದ್ರಿಯ ಜಿಮ್ಮಿಸ್ ಸೂಪರ್ ಮಾರ್ಕೆಟ್‌ನಲ್ಲಿ ಕೊರೊನಾ ನಿಯಮವನ್ನು ಉಲ್ಲಂಘಿಸಿ ಮಾಸ್ಕ್ ಧರಿಸಲು ನಿರಾಕರಿಸಿದಕ್ಕೆ ಕದ್ರಿ ಪೊಲೀಸ್ ಠಾಣೆಯಲ್ಲಿ ಸಾಂಕ್ರಾಮಿಕ ಕಾಯ್ದೆಯಡಿ ಡಾ.ಶ್ರೀನಿವಾಸ ಕಕ್ಕಿಲಾಯ ವಿರುದ್ಧ ಪ್ರಕರಣ ದಾಖಲಾಗಿದೆ. ಬುಧವಾರ ಬೆಳಿಗ್ಗೆ 8.45 ರ ಸುಮಾರಿಗೆ ಸೂಪರ್‌ ಮಾರ್ಕೆಟ್‌ಗೆ ಡಾ.ಶ್ರೀನಿವಾಸ್ ಕಕ್ಕಿಲಾಯ ಮಾಸ್ಕ್ ಧರಿಸದೇ ಬಂದಿದ್ದರು, ಸೂಪರ್ ಮಾರ್ಕೆಟ್‌ನಲ್ಲಿರುವಾಗ ಮಾಸ್ಕ್ ಧರಿಸದಿದ್ದಾಗ ದಯವಿಟ್ಟು ಮಾಸ್ಕ್ ಧರಿಸಿ, ಇಲ್ಲಿ ಎಲ್ಲರಿಗೂ ಒಂದೇ ನಿಯಮ ಎಂದು ಸಿಬ್ಬಂದಿಯೊಂಬರು ಹೇಳಿದಕ್ಕೆ ವಾಗ್ವಾದಕ್ಕೆ ಇಳಿದ ವೈದ್ಯ ಮಾಸ್ಕ್ ಧರಿಸಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. […]