ಚಿನ್ನದ ನಾಡಲ್ಲಿ ಮೋದಿ… ಕಾಂಗ್ರೆಸ್ ವಿರುದ್ಧ ಪ್ರಧಾನಿ ನೇರ ವಾಗ್ದಾಳಿ
Wednesday, May 9th, 2018ಕೋಲಾರ: ಪ್ರಧಾನಿ ನರೇಂದ್ರ ಮೋದಿ ಚಿನ್ನದ ನಾಡು ಕೋಲಾರಕ್ಕೆ ಆಗಮಿಸಿದ್ದು, ಅಪಾರ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದು, ಕನ್ನಡದಲ್ಲಿ ಭಾಷಣ ಆರಂಭಿಸಿದ್ದಾರೆ. ಎಂದಿನಂತೆ ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಚಿನ್ನದ ನಾಡಿನ ಮಹಾಜನತೆಗೆ ನನ್ನ ನಮಸ್ಕಾರಗಳು ಎಂದರು. ಶಕ್ತಿ ದೇವತೆ ಕೋಲಾರಮ್ಮ, ಮುಳುಬಾಗಿಲು ಆಂಜನೇಯ, ಕಾಲಜ್ಞಾನಿ ಕೈವಾರ ತಾತಯ್ಯ, ಸಾಹಿತಿಗಳಾದ ಡಿವಿಜಿ, ಮಾಸ್ತಿ ವೆಂಕಟೇಶ್ ಅಯ್ಯಂಗಾರ ಅವರನ್ನ ನೆನೆದರು. ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ, ಯಾವ ಪಕ್ಷ ಸೋಲುತ್ತೆ ಎಂಬುದು ಮಹತ್ವದಲ್ಲ. ಬದಲಿಗೆ ಯಾರು ಅಭಿವೃದ್ಧಿ ಮಾಡುತ್ತಾರೆ […]