ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳ ಸೆರೆ

Saturday, August 22nd, 2020
ganja

ಉಡುಪಿ : ಕಂಟೈನರ್ ಲಾರಿಯಲ್ಲಿ ಉತ್ತರಪ್ರದೇಶದಿಂದ ಮಂಗಳೂರಿಗೆ ಬಿದಿರು ತುಂಬಿಸಿಕೊಂಡು ಅದರೊಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬ್ರಹ್ಮಾವರ ತಾಲೂಕು ಹೇರೂರು ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿ ಸುಮಾರು 49 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರು ತಮಿಳುನಾಡಿನ ತಿರುವನ್ ವೆಲ್ಲಿ ಜಿಲ್ಲೆಯ ಕರುತಪಾಂಡಿ (40) ಮತ್ತು ಪಶ್ಚಿಮ ಬಂಗಾಳದ ವಾನು ಹಲ್ ದಾರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು  ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಅಕ್ರಮವಾಗಿ […]

ಮಂಗಳೂರು ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕಾರಿನಿಂದ 2 ಲಕ್ಷ ಕದ್ದವ ಅದೇ ದಿನ ಉಡುಪಿಯಲ್ಲಿ ಸಿಕ್ಕಿ ಬಿದ್ದ

Thursday, July 30th, 2020
guruprasad

ಉಡುಪಿ : ಮಂಗಳೂರಿನಲ್ಲಿ ಬೆಳಗಿನ ಜಾವ ಕಾರಿನಲ್ಲಿದ್ದ ನಗದು ಕಳವು ಮಾಡಿದ ಆರೋಪಿಯೊಬ್ಬನನ್ನು ಮಧ್ಯಾಹ್ನ ವೇಳೆ ಉಡುಪಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡಬಿದ್ರೆಯ ಕಾಪಿಕಾಡು ಬಾಡೊಟ್ಟು ನಿವಾಸಿ ಗುರುಪ್ರಸಾದ್(32) ಬಂಧಿತ ಆರೋಪಿ. ಮಂಗಳೂರು ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕ್ರೇಟಾ ಕಾರಿನಿಂದ ಜು.29ರಂದು ಹಣವನ್ನು ಕಳವು ಮಾಡಿ ಉಡುಪಿಗೆ ಪರಾರಿಯಾಗಿದ್ದ ಗುರುಪ್ರಸಾದ್‌ನನ್ನು ಉಡುಪಿ ಡಿಸಿಐಬಿ ಪೊಲೀಸರು ಖಚಿತ ಮಾಹಿತಿಯಂತೆ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಈತನಿಂದ ಕಾರಿನಿಂದ ಕಳವು ಮಾಡಿರುವ 2,03,700ರೂ. ನಗದು ಹಾಗೂ […]