ಡೆಂಗ್ಯೂ ಜ್ವರ ಭೀತಿ : ಚಿಕಿತ್ಸೆಗೆ ಸ್ಪಂದಿಸದೆ ಮಹಿಳೆ ಮೃತ

Thursday, June 27th, 2019
veena

ಮಂಗಳೂರು: ಡೆಂಗ್ಯೂ ಜ್ವರ ಜ್ವರದಿಂದ ಬಳಲುತ್ತಿದ್ದ ಮಹಿಳೆವೋರ್ವರು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ. ಕೋಡಿಂಬಾಳ ಗ್ರಾಮದ ಕುಕ್ಕರೆಬೆಟ್ಟು ನಿವಾಸಿ ಆನಂದ ನಾಯ್ಕ್ ಎಂಬುವರ ಪತ್ನಿ ವೀಣಾ (43) ಮೃತರು. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ವೀಣಾ ಅವರಿಗೆ ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಅವರ ದೇಹದಲ್ಲಿ ಬಿಳಿ ರಕ್ತಕಣ ಕಡಿಮೆಯಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ  ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ದ.ಕ. […]

ಲಾರಿ ಡಿಕ್ಕಿಹೊಡೆದು ಮಹಿಳೆಗೆ ಗಂಭೀರ ಗಾಯ

Saturday, December 19th, 2015
Badiyadka

ಬದಿಯಡ್ಕ: ನೀರ್ಚಾಲು ಕೆಳಗಿನ ಪೇಟೆಯಲ್ಲಿ ಶನಿವಾರ ಬೆಳಿಗ್ಗೆ ಲಾರಿಯೊಂದು ಡಿಕ್ಕಿಹೊಡೆದು ಮಹಿಳೆಯೋರ್ವೆ ಗಾಯಗೊಂಡ ಘಟನೆ ನಡೆದಿದೆ. ಏತಡ್ಕ ನಿವಾಸಿ ಅಕ್ಕಮ್ಮ(50)ಗಾಯಗೊಂಡ ಮಹಿಳೆ.ಕುಂಬಳೆ ಸಹಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಶಿಕಿತ್ಸೆ ನೀಡಿದ ಬಳಿಕ ಕಾಸರಗೋಡು ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಶನಿವಾರ ಬೆಳಿಗ್ಗೆ ಏತಡ್ಕದಿಂದ ಆಗಮಿಸಿದ ಅಕ್ಕಮ್ಮ ನೀರ್ಚಾಲು ಪೇಟೆಯಲ್ಲಿ ನಡೆದು ಹೋಗುತ್ತಿದ್ದಾಗ ಬದಿಯಡ್ಕ ಭಾಗದಿಂದ ಆಗಮಿಸಿದ ಲಾರಿ ಎದು ಭಾಗದಿಂದ ಆಗಮಿಸುತ್ತಿದ್ದ ಕಾರೊಂದಕ್ಕೆ ಸೈಡ್ ನೀಡುತ್ತಿದ್ದಾಗ ನಿಯಂತ್ರಣ ತಪ್ಪಿ ಅಕ್ಕಮ್ಮರಿಗೆ ಡಿಕ್ಕಿಹೊಡೆದು ಬಳಿಕ ರಸ್ತೆ ಬದಿಯ ಮೋರಿಯನ್ನು ಕೆಡವಿ […]