‘ಆ್ಯಂಟನಿ ವೇಸ್ಟ್’ ಕಂಪೆನಿಯ ಮಂಗಳೂರು ಮೆನೇಜರ್ ಡೆಂಗ್ ಜ್ವರದಲ್ಲಿ ಮೃತ್ಯು
Sunday, July 21st, 2019ಮಂಗಳೂರು : ಡೆಂಗ್ಯೂ ಸಾಂಕ್ರಾಮಿಕ ದಿನದಿಂದ ದಿನಕ್ಕೆ ನಗರದಲ್ಲಿ ಆವರಿಸುತ್ತಿದ್ದು ‘ಆ್ಯಂಟನಿ ವೇಸ್ಟ್’ ಕಂಪೆನಿಯ ಮಂಗಳೂರು ಮೇಲ್ವಿಚಾರಕ ನವೀನ್ ಚಂದ್ರ ಕದ್ರಿ (56) ಶನಿವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ್ಯಂಟನಿ ವೇಸ್ಟ್ ಕಂಪೆನಿಯು ಮಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ನಿರ್ವಹಣೆ ಗುತ್ತಿಗೆ ಸಂಸ್ಥೆಯಲ್ಲಿ ಮೇಲ್ವಿಚಾರಕರಾಗಿದ್ದರು. ನವೀನ್ ಚಂದ್ರ ಅವರು ತೀವ್ರ ಜ್ವರದ ಹಿನ್ನೆಲೆಯಲ್ಲಿ ವಾರದ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಡೆಂಗ್ ಬಾಧಿಸಿರುವುದು ಪತ್ತೆಯಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.