ಡ್ರೈನೇಜ್ ಗುಂಡಿಗೆ ಕಾರ್ಮಿಕರನ್ನು ಇಳಿಸಿ ಅಮಾನವೀಯ ಕೃತ್ಯ; ಮನಪಾ ಕ್ರಮವನ್ನು ಖಂಡಿಸಿ ಪ್ರತಿಭಟನಾ ಪ್ರದರ್ಶನ
Saturday, October 21st, 2017ಮಂಗಳೂರು: ಮನಪಾ ವ್ಯಾಪ್ತಿಯಲ್ಲಿ ವ್ಯಾಪಕಗೊಂಡಿರುವ ಡ್ರೈನೇಜ್ ಅವ್ಯವಸ್ಥೆಯನ್ನು ಸರಿಪಡಿಸುವ ನೆಪದಲ್ಲಿ ಡ್ರೈನೇಜ್ನ ಮ್ಯಾನ್ಹೋಲ್ಗೆ ಕಾರ್ಮಿಕರನ್ನು ಇಳಿಸಿ ಅಮಾನವೀಯ ಕೃತ್ಯ ಎಸಗಿದ ಮಂಗಳೂರು ಮಹಾನಗರ ಪಾಲಿಕೆಯ ದುಷ್ಕೃತ್ಯಗಳ ವಿರುದ್ಧ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ಇಂದು ಸಿಪಿಐ(ಎಂ) ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಮಂಗಳೂರಿನ ಮಾನ ಹರಾಜು ಹಾಕಿದ ಮನಪಾಕ್ಕೆ ಧಿಕ್ಕಾರ, ಅಮಾನವೀಯ ಕೃತ್ಯ ಎಸಗಿದ ಮನಪಾಕ್ಕೆ ಧಿಕ್ಕಾರ, ಘಟನೆಯನ್ನು ಸಮರ್ಥಿಸಿದ ಮೇಯರ್ ರಾಜಿನಾಮೆ ನೀಡಲಿ ಎಂಬಿತ್ಯಾದಿ […]