ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಮಗ ಸಾವು

Wednesday, June 2nd, 2021
Shailesh

ಪುತ್ತೂರು : ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಆಸ್ಟ್ರೇಲಿಯಾ ಉದ್ಯೋಗಿ, ಕೊರೋನದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ  ಘಟನೆ ಬುಧವಾರ ನಡೆದಿದೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ಎಂಬಲ್ಲಿ ಈ ಘಟನೆ ನಡೆದಿದೆ. ಪುಣಚ ಬೈಲುಗುತ್ತು ಕೊಪ್ಪಳ ನಿವಾಸಿ ಕೆಪಿಟಿ ನಿವೃತ್ತ ಪ್ರೊಫೆಸರ್ ಭುಜಂಗ ಶೆಟ್ಟಿ(85) ಅವರು ಕೋವಿಡ್‌ನಿಂದ ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಅವರ ಅಂತಿಮ ಸಂಸ್ಕಾರವು ಬುಧವಾರ ಬೈಲುಗುತ್ತು ಕೊಪ್ಪಳ ನಿವಾಸದಲ್ಲಿ ಕೋವಿಡ್ ನಿಯಮಾವಳಿ ಯೊಂದಿಗೆ ನಡೆಸಲಾಯಿತು. […]

ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಸಂಬಂಧಿ ಸಾವು

Monday, March 15th, 2021
Sirasi Accident

ಶಿರಸಿ  : ಬಸ್ಸು ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಈ ಘಟನೆ ಶಿರಸಿ ನಗರದ ಎಸ್‍ಬಿಐ ಸರ್ಕಲ್ ಬಳಿ ಸಂಭವಿಸಿದೆ. ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಶಿರಸಿಯ ಗಣೇಶ ನಗರದ ನಿವಾಸಿಗಳಾದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಎಂದು ಗುರುತಿಸಲಾಗಿದೆ. ರವಿಚಂದ್ರ ತಂದೆ ಹನುಮಂತಪ್ಪ ಇಂದು ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು […]

ತಂದೆಯ ಲಾರಿಯ ಚಕ್ರದಡಿ ಸಿಲುಕಿ ಎಂಟು ವರ್ಷದ ಬಾಲಕ ಮೃತ್ಯು

Thursday, March 11th, 2021
Marshid

ಬೆಳ್ತಂಗಡಿ : ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಎಂಟು ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಉಜಿರೆ ಅತ್ತಾಜೆ‌ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ‌ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (8) ಮೃತಪಟ್ಟ ಬಾಲಕ. ಉಜಿರೆ ಅತ್ತಾಜೆ ಇಬ್ರಾಹಿಂ ಮತ್ತು ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ‌ ಮುರ್ಷಿದ್ ಮೊದಲನೆಯವನಾಗಿದ್ದ. ತಂದೆ ಮೂಡುಬಿದಿರೆಯ ಕಲ್ಲಿನ‌ಕೋರೆಗೆ ಹೋಗುವಾಗ ಬಾಲಕನೂ ಜತೆಗೆ ತೆರಳಿದ್ದನೆಂದು ಹೇಳಲಾಗಿದೆ. ತಂದೆಯೇ ಚಾಲಕನಾಗಿ ಲಾರಿ […]

ಸುತ್ತಿಗೆಯಿಂದ ಹೊಡೆದು ತಂದೆಯನ್ನು ಸಾಯಿಸಿದ ಮಗ

Monday, January 18th, 2021
sridhar

ಬೆಳ್ತಂಗಡಿ : ಮಗನೊಬ್ಬ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ ಘಟನೆ ಬೆಳ್ತಂಗಡಿತಾಲ್ಲೂಕಿನ ಗರ್ದಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಜನವರಿ 18 ರ ಸೋಮವಾರ ನಡೆದಿದೆ. ಮೃತರನ್ನು ಶ್ರೀಧರ್ ಎಂದು ಗುರುತಿಸಲಾಗಿದೆ, ಅವರ ಮಗ ಹರೀಶ್ ಈ ಕೊಲೆ ಮಾಡಿದ ಆರೋಪಿ.ಮೃತ ರಿಗೆ ಇಬ್ಬರು ಗಂಡು ಮತ್ತು ಒಬ್ಬರು ಮಗಳು ಇದ್ದಾರೆ. ಕೌಟುಂಬಿಕ ವಿವಾದವೇ ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ತನ್ನ ಸ್ವಂತ ಮಗಳನ್ನೇ ನೀರಿನ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ತಂದೆ ಮತ್ತು ಚಿಕ್ಕಮ್ಮ!

Wednesday, August 26th, 2020
Mahalakshmi

ಚಾಮರಾಜನಗರ : ತನ್ನ ಸ್ವಂತ ಮಗಳನ್ನೇ  ಎರಡನೇ ಹೆಂಡತಿಯ ಜೊತೆ ಸೇರಿ  ನೀರು ತುಂಬಿದ್ದ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ಅಮಾನುಷ ಘಟನೆ ಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ತನ್ನ ಎರಡನೇ ಹೆಂಡತಿಗೆ ಮಕ್ಕಳಾಗಿಲ್ಲವೆಂಬ ಕಾರಣಕ್ಕೆ ತಂದೆ ಮತ್ತು ಚಿಕ್ಕಮ್ಮನೇ ಪುಟ್ಟ ಬಾಲಕಿಯನ್ನು ಕೊಂದು ಹಾಕಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪಾಪಿ ತಂದೆ ಮಹೇಶ ಹಾಗೂ ಕ್ರೂರಿ ಚಿಕ್ಕಮ್ಮ ರತ್ನಮ್ಮ ದಂಪತಿಯನ್ನು ತೆರಕಣಾಂಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶನ ಮೊದಲ ಪತ್ನಿ, ಸೋಮಹಳ್ಳಿ ಗ್ರಾಮದ ಗೌರಮ್ಮ ಎಂಬುವರ […]

ತಂದೆ – ಮಗನ ನಡುವೆ ಕಾಳಗ, ಆಸ್ಪತ್ರೆ ದಾರಿಯಲ್ಲಿ ತಂದೆ ಮೃತ್ಯು

Monday, August 17th, 2020
quarrel

ಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಗಂಭೀರ ಗಾಯಗೊಂಡ ತಂದೆ ಆಸ್ಪತ್ರೆ ದಾರಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಕೆದಂಬಾಡಿ ಗ್ರಾಮದ ತಿಂಗಳಾಡಿ ಬಾಲಯ ಬಳಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಸೋಮವಾರ ರಾತ್ರಿ ಗಂಗಾಧರ್ ನಾಯ್ಕ್ ಹಾಗೂ ಅವರ ಪುತ್ರ ಶಶಿಧರ್ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಘರ್ಷಣೆ ಸಂಭವಿಸಿದೆ. ಈ ಸಂದರ್ಭದಲ್ಲಿ ಗಂಗಾಧರ್ ನಾಯ್ಕ್ ಗಂಭೀರವಾಗಿ ಗಾಯಗೊಂಡರು. ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟರು […]

ತಂದೆಯ 3 ಕೋಟಿ ಆಸ್ತಿ ಹಂಚಿ ಕೊಂಡು, ಅವರನ್ನು ಬೀದಿಗೆ ತಳ್ಳಿದ ಮೂವರು ಪೋತುಗಳ ಕತೆ ಏನಾಯಿತು ನೋಡಿ !

Sunday, August 9th, 2020
Mallayya

ಹೈದರಾಬಾದ್: ಜೀವಿತಾವಧಿಯಲ್ಲಿ ಅಂದಾಜು 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ ತಂದೆಯನ್ನು ಬೀದಿಗೆ ತಳ್ಳಿ  ಅವರ  ಹೆಸರಿನಲ್ಲಿದ್ದ 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹಂಚಿಕೊಂಡ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಎಂಬಲ್ಲಿ ನಡೆದಿದೆ. ಕೊನೆಗೆ ಅಣ್ಣತಮ್ಮಂದಿರು  ವಯಸ್ಸಾದ ಅಪ್ಪನ ಜವಾಬ್ದಾರಿ ಹೊರಲು ನಿರಾಕರಿಸಿ ಬೀದಿಗೆ ತಳ್ಳಿದ್ದಾರೆ. ಬೀದಿಗೆ ಬಿದ್ದ ವೃದ್ಧರಿಗೆ ಗ್ರಾಮದ ಜನರು ಊಟ ಕೊಡಲು ಮುಂದಾದರೆ, ಕೊಡದಂತೆ ಅವರನ್ನೂ ಬೆದರಿಸಿದ್ದ  ಅವರ ಗತಿ ಏನಾಯಿತು ನೋಡಿ. ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಗ್ರಾಮದ ಪೋತು ಸುಧಾಕರ್ (45), ಪೋತು ಜನಾರ್ದನ […]

ವಿಷವುಣಿಸಿ ತಂದೆಯನ್ನು ಕೊಲ್ಲಲು ಮುಂದಾದ ಮಕ್ಕಳು

Sunday, July 26th, 2020
sullia

ಸುಳ್ಯ : ಸಾಕಿ ಬೆಳೆಸಿದ ಮಕ್ಕಳೇ ತಂದೆಯನ್ನು ವಿಷ ಹಾಕಿ ಕೊಲ್ಲಲು ಯೋಚಿಸುತ್ತಾರೆಂದರೆ ಅವರ  ಮನಸ್ಥಿತಿ ಹೇಗಿರಬೇಕು ನೀವೇ ಯೋಚಿಸಿ, ಸುಳ್ಯ ತಾಲೂಕಿನ  ನಾಲ್ಕೂರು ಗ್ರಾಮದ ಅಂಜೇರಿ ಎಂಬಲ್ಲಿ ಮಕ್ಕಳಿಬ್ಬರು ಸೇರಿ ಆಹಾರಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ಮುಂದಾದ ಘಟನೆಯೊಂದು ಜು.24 ರ ಗುರುವಾರ ನಡೆದಿದೆ. ಮಕ್ಕಳಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬಿಬ್ಬರು ತಂದೆಗೆ ವಿಷವುಣಿಸಿದ್ದು, ತಂದೆ, ಹೊನ್ನಪ್ಪ ನಾಯ್ಕ ಅಂಜೇರಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ.  ಪೊಲೀಸರು ಮಕ್ಕಳನ್ನು  ವಶಕ್ಕೆ ಪಡೆದಿದ್ದಾರೆ. ಪುತ್ರ ಲೊಕೇಶ್ […]