ತಣ್ಣೀರುಬಾವಿ ತೀರದಲ್ಲಿ ಸಂಭ್ರಮದ ಲಕ್ಷ ಕಂಠಗಳ ಗೀತ ಗಾಯನ

Friday, October 29th, 2021
Geetha Gayana

ಮಂಗಳೂರು : ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೀತಗಾಯನ ಕಾರ್ಯಕ್ರಮವನ್ನು ಡೊಂಗರಕೇರಿಯ ಕೆನರಾ ಪ್ರೌಢಶಾಲೆ, ಕೊಡಿಯಾಲ್ ಬೈಲ್‍ನ ಶಾರದ ವಿದ್ಯಾಲಯ, ಸುರತ್ಕಲ್‍ನ ಗೋವಿಂದ ದಾಸ್ ಪಿಯು ಕಾಲೇಜು, ರಥಬೀದಿಯ ಸರಕಾರಿ […]

ಗಿಲ್ ನೆಟ್ ಬೋಟ್ ನಲ್ಲಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Monday, September 13th, 2021
Azar Boat

ಮಂಗಳೂರು, : ಪಣಂಬೂರು ಸಮುದ್ರ ತೀರದಲ್ಲಿ ಸೆ.11 ರಂದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ತಣ್ಣೀರುಬಾವಿ ಬೀಚ್ ಭಾನುವಾರ ರಾತ್ರಿ ವೇಳೆ ಪತ್ತೆಯಾಗಿದೆ. ನಾಪತ್ತೆಯಾಗಿದ್ದ  ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಶರೀಫ್ (35) ಎಂಬ ಮೀನುಗಾರನ  ಮೃತದೇಹ ಪತ್ತೆಯಾಗಿದೆ. ಸೆ. 11 ರಂದು ಗಿಲ್ ನೆಟ್ ಬೋಟ್ ಮೀನುಗಾರಿಕೆಗೆ ತೆರಳುತ್ತಿರುವಾಗ ಅವಘಡ ಸಂಭವಿಸಿ ಮೀನುಗಾರರು ನೀರುಪಾಲಾಗಿದ್ದು ಈ ಪೈಕಿ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದರು. ಆದರೆ ಶರೀಫ್ […]