ಬೈಕ್ ಗಳ ನಡುವೆ ಡಿಕ್ಕಿ : ಗಾಯಗೊಂಡಿದ್ದ ಮಂಜೇಶ್ವರದ ಮೆಡಿಕಲ್ ಶಾಪ್ ಮಾಲಕ ಮೃತ್ಯು

Wednesday, March 16th, 2022
Nagappa

ಮಂಜೇಶ್ವರ : ತಲಪಾಡಿ ಟೋಲ್ ಗೇಟ್ ಬಳಿ ಬೈಕ್ ಗಳ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ನಿವೃತ್ತ ಅಧ್ಯಾಪಕರೋರ್ವರು ಬುಧವಾರ ಮೃತ ಪಟ್ಟಿದ್ದಾರೆ. ವರ್ಕಾಡಿ ಗುಡ್ಡೊಡಿಯ ನಾಗಪ್ಪ (68) ಮೃತಪಟ್ಟವರು. ಅವರು ಕೊಡ್ಲ ಮೊಗರು ವಾಣಿ ವಿಜಯ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಮಂಜೇಶ್ವರದ ಮೆಡಿಕಲ್ ಶಾಪ್ ಮಾಲಕರಾಗಿದ್ದರು. ಪ್ರಸ್ತುತ ಎಕ್ಕೂರಿನಲ್ಲಿ ವಾಸವಾಗಿದ್ದರು. ಫೆ. 28ರಂದು ತಲಪಾಡಿ ಟೋಲ್ ಗೇಟ್ ಬಳಿ ಬೈಕ್ ಗಳ ನಡುವೆ ಅಪಘಾತ ನಡೆದು ಗಂಭೀರ ಗಾಯಗೊಂಡಿದ್ದರು

ತಲಪಾಡಿ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ

Saturday, December 25th, 2021
mustafa

ಮಂಗಳೂರು  :  ತಲಪಾಡಿ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ನಡೆದಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಬಂಧಿತ ಆರೋಪಿ. ಈತ ಕಳೆದ ಶನಿವಾರ ಸ್ಕೂಟರ್ ನಲ್ಲಿ ಬಂದಿದ್ದ ಯುವಕನೋರ್ವ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಸ್ಥಳೀಯರು ಆರೋಪಿಯ ಚಹರೆಯನ್ನು ಪತ್ತೆ ಹಚ್ಚಿದ್ದರು. ಇಂದು ಬಂಧಿತ […]

ತಲಪಾಡಿ, ಹೆಜಮಾಡಿ ಹಾಗೂ ಸಾಸ್ತಾನ ಟೋಲ್‌ಗಳ ದರ ಹೆಚ್ಚಳ

Wednesday, March 31st, 2021
Sasthana Toll

ಮಂಗಳೂರು :  ಎಪ್ರಿಲ್ 1ರಿಂದ ತಲಪಾಡಿ,  ಹೆಜಮಾಡಿ ಹಾಗೂ ಸಾಸ್ತಾನ  ಟೋಲ್‌ಗಳ ದರ ವನ್ನು  ನವಯುಗ ಸಂಸ್ಥೆಯು ಪರಿಷ್ಕರಣೆ ಮಾಡದೆ.  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇರ ನಿರ್ವಹಣೆ ಮಾಡುವ ಬ್ರಹ್ಮರಕೂಟ್ಲು ಮತ್ತು ಎನ್‌ಐಟಿಕೆ ಟೋಲ್‌ಗೇಟ್‌ಗಳ ಪರಿಷ್ಕೃತ ದರ ಎಪ್ರಿಲ್ 1ರಂದು ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ತಲಪಾಡಿ: ಲಘುವಾಹನ- ಏಕಮುಖ ಸಂಚಾರಕ್ಕೆ ಯಥಾವತ್ 40 ರೂ., ದ್ವಿಮುಖ ಸಂಚಾರಕ್ಕೆ 60ರಿಂದ 65ರೂ.ಗೆ ಏರಿಕೆ. ಮಾಸಿಕ ಪಾಸ್ ದರ 1,400 ರೂ. ಲಘು ವಾಣಿಜ್ಯ ವಾಹನ- ಮಿನಿ ಬಸ್ ಏಕಮುಖ ಸಂಚಾರಕ್ಕೆ 65 […]

ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ; ಕರ್ನಾಟಕ ಪ್ರವೇಶ ನಿರ್ಬಂಧ

Monday, February 22nd, 2021
keralagate

ಮಂಗಳೂರು  : ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ವಯನಾಡ್ ಮತ್ತು ಕಾಸರಗೋಡು ಜಿಲ್ಲೆಯಲ್ಲಿರುವ 13  ಪ್ರವೇಶ ದ್ವಾರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಗಡಿಭಾಗ ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಇಂದಿನಿಂದ ಮತ್ತೆ ಆರಂಭಗೊಂಡಿದ್ದು, ಆರ್ಟಿಪಿಸಿಆರ್ ವರದಿ ಇದ್ದರೆ ಮಾತ್ರ ನಾಳೆಯಿಂದ ಕರ್ನಾಟಕ ಪ್ರವೇಶಕ್ಕೆ ಅವಕಾಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ರಾಮಕೃಷ್ಣ ಬಾಯರಿ, ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದ ತಂಡ ತಲಪಾಡಿ ಗಡಿಭಾಗದಲ್ಲಿ ನಿಂತು ಕೇರಳದಿಂದ ಬರುವವರನ್ನು ತಡೆದು ಟೆಸ್ಟ್ ವರದಿ ನೀಡುವಂತೆ […]

ತಲಪಾಡಿಯ ಶಾರದಾ ಆಸ್ಪತ್ರೆಯಲ್ಲಿ ಪೋಸ್ಟ್-ಕೋವಿಡ್ ಆಯುಷ್ ಕೇರ್ ಕೇಂದ್ರ ಲೋಕಾರ್ಪಣೆ

Friday, November 20th, 2020
sharadha

ಮಂಗಳೂರು  : ಬಹು ನಿರೀಕ್ಷೆಯ ಪೋಸ್ಟ್-ಕೋವಿಡ್ ಆಯುಷ್ ಕೇರ್ ಕೇಂದ್ರವನ್ನು ನವೆಂಬರ್ 18 ರಂದು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ಧಾಮ ಕ್ಯಾಂಪಸ್‌ನಲ್ಲಿ ಉದ್ಘಾಟಿಸಲಾಯಿತು. ಕೋವಿಡ್19ನಿಂದ ಗುಣಮುಖರಾದರೂ ಹಲವರಲ್ಲಿ ಬಳಲಿಕೆ, ಮೈಕೈ ನೋವು, ಉಸಿರಾಟದ ತೊಂದರೆ, ಶ್ವಾಸಕೋಶದ ಸಮಸ್ಯೆ, ತಲೆನೋವು, ನರದೌರ್ಬಲ್ಯ, ಮಲಬದ್ಧತೆ, ಮತ್ತು ಮಾನಸಿಕವಾಗಿ ಒತ್ತಡ, ಆತಂಕ, ಖಿನ್ನತೆಯಂತಹ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಕೋವಿಡ್ ನಂತರದ ಆರೈಕೆ ಸೇವೆಗಳ ಅಗತ್ಯವನ್ನು ಪರಿಗಣಿಸಿ, ಮಂಗಳೂರಿನ ತಲಪಾಡಿಯಲ್ಲಿರುವ ಶಾರದಾ ಆಯುರ್ವೇದ, ಪ್ರಕೃತಿಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಗಳು, ಈ ಕೇಂದ್ರವನ್ನು ತೆರೆದಿದ್ದು, ಕಡಿಮೆ […]

ಕೇರಳ ಪೊಲೀಸರು ಮತ್ತು ಜಿಲ್ಲಾಡಳಿತದ ದೌರ್ಜನ್ಯ ಖಂಡಿಸಿ ಬಿಜೆಪಿಯಿಂದ ತಲಪಾಡಿಯಲ್ಲಿ ಪ್ರತಿಭಟನೆ

Tuesday, September 1st, 2020
Bjp protest

ಮಂಜೇಶ್ವರ : ಕೇರಳ ಮತ್ತು ಕರ್ನಾಟಕ ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ನೀಡಬೇಕೆಂದು ಆಗ್ರಹಿಸಿ ಮಂಜೇಶ್ವರ ಬಿಜೆಪಿ ಮಂಡಲ ಸಮಿತಿಯ ನೇತೃತ್ವದಲ್ಲಿ ತಲಪಾಡಿಯಲ್ಲಿ ಗಡಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿಗಳು ಆದ ಶ್ರೀಕಾಂತ್ ಚಾಲನೆ ನೀಡಿದರು. ಮಂಜೇಶ್ವರ ಮಂಡಲ ಸಮಿತಿಯ ಅಧ್ಯಕ್ಷರಾದ ಮಣಿಕಂಠ ರೈ ಅಧ್ಯಕ್ಷತೆ ವಹಿಸಿದ್ದರು. ಕೊರೊನಾ ಪಾಸಿಟಿವ್ ಹೆಚ್ಚಿರುವ ಮಲಪ್ಪುರಂ, ಕಣ್ಣೂರು ಮತ್ತು ಅನ್ಯರಾಜ್ಯಗಳಿಂದ ವ್ಯಾಪಾರ ಸಂಭಂದಿತ ಸರಕು ವಾಹನಗಳಿಗೆ ಯಾವುದೇ ನಿರ್ಬಂಧ ಮಾಡದೆ ಕೇವಲ ದಕ್ಷಿಣಕನ್ನಡ ಜಿಲ್ಲೆಗೆ […]

ತಲಪಾಡಿಯಲ್ಲಿರುವ ಕೇರಳ ಪೊಲೀಸರಿಂದಲೇ ಕೇರಳಿಗರಿಗೆ ಕಿರಿಕಿರಿ

Tuesday, July 7th, 2020
Kerala Border

ಮಂಗಳೂರು  : ತಲಪಾಡಿ ಯಲ್ಲಿರುವ ಕೇರಳ ಪೊಲೀಸರು ಕೇರಳದಿಂದ ಮಂಗಳೂರಿಗೆ ಕೆಲಸಕ್ಕೆ ಬರುವವವರನ್ನು ಮಂಗಳೂರಿನಲ್ಲಿ ಕೋವಿಡ್  ನೆಪಯೊಡ್ಡಿ ತಡೆಹಿಡಿದ ಘಟನೆ ಮಂಗಳವಾರ ನಡೆದಿದೆ. ಕೇರಳ ಸರಕಾರ ಕೇರಳಿಗರಿಗೆ ಮಂಗಳೂರು ಪ್ರವೇಶ ನಿರ್ಬಂಧಿಸಿದ ಕಾರಣ ಪಾಸ್ ಹಿಡಿದು ದಿನನಿತ್ಯ ಕೆಲಸಕ್ಕೆ ಬರುತ್ತಿದ್ದವರನ್ನು ಕೇರಳ ಪೊಲೀಸರು ತಲಪಾಡಿಯಲ್ಲಿ ತಡೆಹಿಡಿದಿರುವುದು ಗೊಂದಲಕ್ಕೆ ಕಾರಣವಾಗಿದೆ.100 ಕ್ಕೂ ಅಧಿಕ ಮಂದಿ ಸ್ಥಳದಲ್ಲಿ ಜಮಾಯಿಸಿ ಪೊಲೀಸರ ಜತೆಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣ ಆಗಿದೆ. ಜು.11 ರ ಅವಧಿವರೆಗೆ ದ.ಕ ಜಿಲ್ಲಾಡಳಿತ ನೀಡಿರುವ ಪಾಸ್ ಇದೆ. ಅಷ್ಟು […]

ನೇತ್ರಾವತಿ ಸೇತುವೆಯಯಿಂದ ಹಾರಿದ ವ್ಯಕ್ತಿ ಶವವಾಗಿ ಪತ್ತೆ

Saturday, June 20th, 2020
Surendrarai

ಮಂಗಳೂರು : ನೇತ್ರಾವತಿ ಸೇತುವೆಯಯಿಂದ ಶುಕ್ರವಾರ ಅಪರಾಹ್ನ ಹಾರಿದ ವ್ಯಕ್ತಿಯ ಶವವು ಶನಿವಾರ ಬೆಳಿಗ್ಗೆಉಳ್ಳಾಲದ ಉಳಿಯ ಎಂಬಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ಸುರೇಂದ್ರ ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದರು, ಅವರಿಗೆ ವಿಪರೀತ ಕುಡಿತದ ಚಟವಿತ್ತು ಎನ್ನಲಾಗಿದೆ ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಶುಕ್ರವಾರ ನೇತ್ರಾವತಿ ಸೇತುವೆಯ ಮೇಲೆ ಫೋನ್ ಪತ್ತೆಯಾಗಿತ್ತು, ಇದನ್ನು ಕಂಡ ಸ್ಥಳೀಯರು ನದಿಗೆ ಯಾರೋ ವ್ಯಕ್ತಿ ಹಾರಿರಬೇಕೆಂದು ಶಂಕೆ […]

ಕೇರಳದ ರೋಗಿಗಳು ಮಂಗಳೂರಿಗೆ, ಒಬ್ಬ ಚಿಕಿತ್ಸೆ ಲಭ್ಯವಿಲ್ಲದ ವಾಪಾಸ್

Thursday, April 9th, 2020
kerala

ಮಂಗಳೂರು : ಹೃದಯ ಸಂಬಂಧಿ ಕಾಯಿಲೆ ಮತ್ತು ಮೆದುಳು ಸಂಬಂಧಿ ಕಾಯಿಲೆಯ ರೋಗಿ ಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರೂ ಮೆದುಳು ಸಂಬಂಧಿ ರೋಗಿಗೆ ಅಲ್ಲಿ ಚಿಕಿತ್ಸೆ ಲಭ್ಯವಿಲ್ಲದ ಕಾರಣ ಮತ್ತೆ ಕಣ್ಣೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಜಿಲ್ಲಾ ವೈದ್ಯರ ಪ್ರಮಾಣ ಪತ್ರ ಅಗತ್ಯವಿರುವುದರಿಂದ ಕಾಸರಗೋಡು ಸರಕಾರಿ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ಆರೋಗ್ಯ ಸಿಬಂದಿಯನ್ನು ತಾತ್ಕಾಲಿಕವಾಗಿ ಗಡಿ ಪ್ರದೇಶವಾದ ತಲಪಾಡಿಯಲ್ಲಿ ನಿಯೋಜಿಸಿದ್ದು, ಗಡಿಭಾಗದಲ್ಲಿಯೇ ಪ್ರಮಾಣ ಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ. ಇಲ್ಲೇ ಕೋವಿದ್‌ -19 ತಪಾಸಣೆ ನಡೆಯ […]

ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ದುರಸ್ತಿ : ಯುವ‌ಮೋರ್ಚಾ ಕಾರ್ಯಕರ್ತರಿಂದ ರಸ್ತೆ ತಡೆ

Monday, September 16th, 2019
kasaragod

ಕಾಸರಗೋಡು : ತಲಪಾಡಿ ಯಿಂದ ಕಾಸರಗೋಡು ತನಕ ಸಂಪೂರ್ಣ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ನಡೆಸದೆ ಜನತೆಯನ್ನು ಸಂಕಷ್ಟಕ್ಕೆ ತಳ್ಳಿರುವ ಕೇರಳದ ಎಡರಂಗ ಸರಕಾರದ ವಿರುದ್ಧ ಹಾಗೂ ರಾಷ್ಟ್ರೀಯ ಹೆದ್ದಾರಿ – 66 ದುರಸ್ತಿ ಕಾಮಗಾರಿಗೆ ಶೀಘ್ರ ಕ್ರಮಕೈಗೊಳ್ಳ ಬೇಕೆಂದು ಆಗ್ರಹಿಸಿ ಯುವ‌ಮೋರ್ಚಾ ಕಾರ್ಯಕರ್ತರು ಕಾಸರಗೋಡಿನ ಅಶ್ವಿ‌ನಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ  ನಡೆಸಿದರು. ರಸ್ತೆ ತಡೆ ಚಳವಳಿಯನ್ನು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ವಿಜಯ ಕುಮಾರ್‌ ರೈ ಅವರು ಉದ್ಘಾಟಿಸಿದರು. ಕೇಂದ್ರ ಸರಕಾರ ಈಗಾಗಲೇ ತಲಪಾಡಿ […]