ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಲವಾರು ದಾಳಿ

Wednesday, December 16th, 2020
Tajuddin

ಮಂಗಳೂರು: ಮೂವರು ದುಷ್ಕರ್ಮಿಗಳ ತಂಡ ಯುವಕನೋರ್ವನ‌ ಮೇಲೆ ಅಡ್ಡೂರಿನಲ್ಲಿ ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ತಲವಾರು ದಾಳಿಯಿಂದ‌ ಗಾಯಗೊಂಡವರು ಎಂದು ತಿಳಿದುಬಂದಿದೆ. ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದು, ಈ ವೇಳೆ‌ ಮೂವರಿದ್ದ ದುಷ್ಕರ್ಮಿಗಳ ತಂಡ ಯುವಕನ‌ ಮೇಲೆ ತಲವಾರು ಬೀಸಿದ್ದಾರೆ. ಪರಿಣಾಮ ಯುವಕನ ತೊಡೆ ಭಾಗ, ಕೈ ಸಹಿತ ವಿವಿಧೆಡೆ ಗಾಯಗಳಾಗಿವೆ. ಹಳೆ‌ ವೈಷಮ್ಯದಿಂದಲೇ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಗಾಯಾಳುವನ್ನು […]

ಕಂದಾವರ ಮಸೀದಿ ಬಳಿ ವ್ಯಕ್ತಿಯೊಬ್ಬರ ಮೇಲೆ ತಲವಾರು ದಾಳಿ

Monday, November 16th, 2020
Kandavara Attack

ಮಂಗಳೂರು : ಉದ್ಯಮಿಯೊಬ್ಬರ ಮೇಲೆ ಇಬ್ಬರು ಯುವಕರು ತಲವಾರು ದಾಳಿ ನಡೆಸಿ ಪರಾರಿಯಾದ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌  ನಡೆದಿದೆ. ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡ ಅಝೀಝ್ […]

ಮಂಗಳೂರು ತಾಪಂ ಮಾಜಿ ಸದಸ್ಯನ ಮೇಲೆ ಕುಲಶೇಖರ ಬಳಿ ತಲವಾರು ದಾಳಿ

Tuesday, October 13th, 2020
Yusuf

ಮಂಗಳೂರು : ದುಷ್ಕರ್ಮಿಗಳ ತಂಡವೊಂದು ಉಳಾಯಿಬೆಟ್ಟು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಅವರ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಕುಲಶೇಖರ ಬಳಿ ಸೋಮವಾರ ಸಂಜೆ ನಡೆದಿದೆ. ಗಾಯಗೊಂಡ ಯೂಸುಫ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತನ್ನ ಕಾರಿನಲ್ಲಿ ಮಂಗಳೂರಿನಿಂದ ಉಳಾಯಿಬೆಟ್ಡುವಿಗೆ ಯೂಸುಫ್ ಅವರು ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕೊಂದು ಯೂಸುಫ್‌ರ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ತಕ್ಷಣ ಯೂಸುಫ್‌ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ […]

ವಾಕಿಂಗ್ ಮಾಡುತ್ತಿದ್ದ ಟ್ಯಾಕ್ಸಿ ಡ್ರೈವರ್ ಮೇಲೆ ತಲವಾರು ದಾಳಿ ನಡೆಸಿ ಕೊಲೆ

Monday, August 24th, 2020
Belthangady

ಬೆಳ್ತಂಗಡಿ : ಬೆಳಗ್ಗಿನ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಮೂವರು ದುಷ್ಕರ್ಮಿಗಳ  ತಂಡ ದಾಳಿ ನಡೆಸಿದಾಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಾಸು ಸಪಲ್ಯ(65) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಿಗ್ಗೆ ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ವಾಸು ಸಪಲ್ಯ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು ಪರಿಣಾಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಾಸು ಸಪಲ್ಯ ವೃತ್ತಿಯಲ್ಲಿ ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ವಾಹನದ ಚಾಲಕರಾಗಿ ಕೆಲಸ‌ ಮಾಡುತ್ತಿದ್ದರು. ಮಗ ಕೂಡ ಚಾಲಕ […]

ರಿಕ್ಷಾ ಚಾಲಕನ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ಪ್ರಕರಣ : 9 ಆರೋಪಿಗಳು ಬಂಧನ

Tuesday, October 22nd, 2019
talavaru-daali

ಮಂಗಳೂರು : ನೀರುಮಾರ್ಗದ ಪಡು ಬಿತ್ತ್‌ಪಾದೆ ಸಮೀಪ ರಿಕ್ಷಾ ಚಾಲಕನ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳನ್ನು ಮಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅ.17ರಂದು ಸಂಕ್ರಮಣವಾದ ಕಾರಣ ಸಂತೋಷ್ ಅವರು ಬಿತ್ತ್‌ಪಾದೆಯ ಅಂಗಡಿಯೊಂದರಲ್ಲಿ ಎಳ್ಳೆಣ್ಣೆ ಖರೀದಿಸಿ ತನ್ನ ಮನೆ ಗುತ್ತಿಗೆಯತ್ತ ರಿಕ್ಷಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಕಪ್ಪು ಬಣ್ಣದ ಆಕ್ಟೀವಾದಲ್ಲಿ ಬಂದ ಇಬ್ಬರು ಯುವಕರು ಸಂತೋಷ್‌ನನ್ನು ಅಡ್ಡಗಟ್ಟಿ ತಗಾದೆ ತೆಗೆದಿದ್ದಾರೆ. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ತಾವು ತಂದಿದ್ದ ತಲವಾರಿನಿಂದ […]

ಸೂರಲ್ಪಾಡಿಯಲ್ಲಿ ಹಿಂದೂ ಮುಖಂಡನ ಮೇಲೆ ತಲವಾರು ದಾಳಿ, ಗಂಭೀರ ಸ್ಥಿತಿ

Monday, September 24th, 2018
Harish-Shetty

ಮಂಗಳೂರು :  ಹಿಂದೂ ಮುಖಂಡರೊಬ್ಬರಿಗೆ ತಲವಾರು ದಾಳಿ ನಡೆಸಿದ ಘಟನೆ ಸೋಮವಾರ  ರಾತ್ರಿ 8 ಗಂಟೆಯ ಸುಮಾರಿಗೆ ಮಂಗಳೂರು ಹೊರವಲಯದ ಸೂರಲ್ಪಾಡಿಯಲ್ಲಿ ನಡೆದಿದೆ. ಮೂಡಬಿದ್ರೆಯಲ್ಲಿ ಬೆಳಿಗ್ಗೆ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಮೇಲೆ ತಲವಾರು ಬೀಸಿದ ಘಟನೆ  ಬೆನ್ನಲ್ಲೇ ಇದೀಗ ಮತ್ತೆ ಸೂರಲ್ಪಾಡಿಯಲ್ಲಿ ಭಯದ ವಾತಾವರಣ ಮರುಕಳಿಸಿದೆ. ಸೂರಲ್ಪಾಡಿ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳ ತಂಡ ಕೈಕಂಬದ ವಿಶ್ವಹಿಂದೂ ಪರಿಷತ್ ವಲಯಾಧ್ಯಕ್ಷ ಹರೀಶ್ ಶೆಟ್ಟಿ ಪೊಳಲಿ ದಾಳಿಗೆ ದಾಳಿ ನಡೆಸಿ ಪರಾರಿಯಾಗಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಅವರನ್ನ ನಗರದ ಖಾಸಗಿ […]

ತುಳು ಚಿತ್ರ ನಟನಿಂದ ಬಂಟ್ವಾಳ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ

Monday, June 11th, 2018
surendra Bantwala

ಮಂಗಳೂರು :  ಬಿಜೆಪಿ ಕಾರ್ಯಕರ್ತರ ಮೇಲೆ ಚಿತ್ರ ನಟ ಸುರೇಂದ್ರ ಬಂಟ್ವಾಳ ತಲವಾರು ಬೀಸಿ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಸಮೀಪದ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತರಾದ ಗಣೇಶ್ ಮತ್ತು ಪುಷ್ಪರಾಜ್ ಅವರ ಮೇಲೆ ತಲವಾರ್‌ ಬೀಸಿದ್ದು, ಇದರಿಂದ ಗಾಯಗೊಂಡ ಅವರು ಚಿಕಿತ್ಸೆಗಾಗಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಳಿಕ ಆರೋಪಿ ಸುರೇಂದ್ರ ಬಂಟ್ವಾಳ ತಲೆಮರೆಸಿಕೊಂಡಿದ್ದಾನೆ. ಸೋಮವಾರ ಮಧ್ಯಾಹ್ನ ಸುಮಾರು ಒಂದು ಗಂಟೆಯ ವೇಳೆಗೆ ಬಿಜೆಪಿ ಕಾರ್ಯಕರ್ತರಾದ ಗಣೇಶ್, ಚರಣ್, ಪುಷ್ಪರಾಜ್ , ಮತ್ತಿತರರು ಬಡ್ಡಕಟ್ಟೆ […]