ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಆರು ತಿಂಗಳ ನಂತರ : ಕೆ.ಎಸ್ ಈಶ್ವರಪ್ಪ

Saturday, June 19th, 2021
ks-Eswarappa

ದಾವಣಗೆರೆ : ಕರೊನಾ ಅಲೆ ಸಂಪೂರ್ಣವಾಗಿ ಮುಗಿದಿಲ್ಲ. ಡಿಸೆಂಬರ್‌ವರೆಗೆ ಯಾವುದೇ ಚುನಾವಣೆ ನಡೆಯಲ್ಲ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯನ್ನೂ ಮಾಡಲ್ಲ. ಚುನಾವಣೆ ಬೇಡ ಎಂದು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು. ಕರೊನಾ ಉಲ್ಬಣಿಸದಿದ್ದಲ್ಲಿ ರಾಜ್ಯದಲ್ಲಿ ಇಷ್ಟೊತ್ತಿಗೆ ತಾಪಂ ಮತ್ತು ಜಿಪಂ ಚುನಾವಣೆ ರಂಗೇರುತ್ತಿತ್ತು. 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದಂತೆ ಇನ್ನೂ 6 ತಿಂಗಳ ಕಾಲ ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆಯಲ್ಲ ಎಂದು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ ಎಂದರು. ಸದ್ಯ ಲಾಕ್ಡೌನ್ […]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಇಲ್ಲ: ದೇವೇಗೌಡ

Friday, December 10th, 2010
ದೇವೇಗೌಡ

ಬೆಂಗಳೂರು  : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ  ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು. ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ […]