ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥ ಉದ್ಭವ

Monday, October 18th, 2010
ತಲಕಾವೇರಿ

ಮಡಿಕೇರಿ : ಸೋಮವಾರ ಮುಂಜಾನೆ 3.11ಕ್ಕೆ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಪಾರ ಭಕ್ತವೃಂದಕ್ಕೆ ಕಾವೇರಿ ತೀರ್ಥರೂಪಿಣಿಯಾಗಿ ಹರಿಯುವುದರೊಂದಿಗೆ ನೆರೆದ ಭಕ್ತರಿಗೆ ದರ್ಶನವಿತ್ತಳು.  ಭಕ್ತರ ಉದ್ಘೋಷ, ಮುಗಿಲು ಮುಟ್ಟಿದ ಮಂತ್ರಘೋಷ ದೊಂದಿಗೆ ತಲಕಾವೇರಿಯಲ್ಲಿ ತಿರ್ಥೂದ್ಭವವಾಯಿತು. ನೆರೆದ ಭಕ್ತವೃಂದ ಸ್ನಾನಕೊಳದ ಸಮೀಪ ತೀರ್ಥ ಪ್ರೋಕ್ಷಣೆಗೆ ಶಿರವೊಡ್ಡಿ ಪುನೀತರಾದರು.  ತಮಿಳುನಾಡು, ಮಂಡ್ಯ, ಬೆಂಗಳೂರು ಮುಂತಾದ ಕಡೆಗಳಿಂದ ಆಗಮಿಸಿದ ಭಕ್ತರು ಭಾಗಮಂಡಲದಲ್ಲಿ ಸ್ನಾನ ಮಾಡಿ ಭಗಂಡೇಶ್ವರನ ದರ್ಶನ ಪಡೆದು ತಲಕಾವೇರಿಗೆ ಆಗಮಿಸಿದರೆ, ಇನ್ನು ಕೆಲವರು ಮೈಸೂರು ದಸರಾ ಮುಗಿಸಿ ಬಂದಿದ್ದರು. ಬ್ರಹ್ಮಕುಂಡಿಕೆಯ ಮುಂಭಾಗದ ಸ್ನಾನಕೊಳದಿಂದ […]