ಆಸ್ಕರ್‌ ಫರ್ನಾಂಡಿಸ್‌ ಅವರ ಮಿದುಳಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ಹೊರ ತೆಗೆದ ವೈದ್ಯರ ತಂಡ

Tuesday, July 27th, 2021
Oscar Fernandese

ಮಂಗಳೂರು : ತೀವ್ರ ನಿಗಾ ಘಟಕದಲ್ಲಿ  ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸಿಗ ಆಸ್ಕರ್‌ ಫರ್ನಾಂಡಿಸ್‌ ಅವರ ಚಿಕಿತ್ಸೆ ಮುಂದುವರೆದಿದ್ದು ಮಂಗಳವಾರ ಮುಂಜಾನೆ ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಲಾಗಿದೆ. ನಗರದ ಖ್ಯಾತ ನ್ಯೂರೊ ಸರ್ಜನ್‌ ಡಾ.ಸುನಿಲ್‌ ಶೆಟ್ಟಿ ಹಾಗೂ ಅವರ ತಂಡ ಆಸ್ಕರ್‌  ಅವರ ಮಿದುಳಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ತೆಗೆಯುವಲ್ಲಿ ಯಶಸ್ವಿಯಾಗಿದೆ. ಸೋಮವಾರ ಮಧ್ಯರಾತ್ರಿ 12.30 ರಿಂದಲೇ ಶಸ್ತ್ರಕ್ರಿಯೆ ಪ್ರಾರಂಭಿಸಿದ್ದು ಮಂಗಳವಾರ ಮುಂಜಾನೆ 4.40 ರ ವರೆಗೂ ನಡೆದಿದೆ. ಕಾಂಗ್ರೆಸ್‌ ಮುಖಂಡರಾದ ಮಾಜಿ ಸಚಿವ ಬಿ.ರಮಾನಾಥ ರೈ, ಪ್ರತಾಪಚಂದ್ರ ಶೆಟ್ಟಿ, ವಿನಯ ಕುಮಾರ್‌ […]

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ತೀವ್ರ ನಿಗಾ ಘಟಕದಲ್ಲಿ

Wednesday, July 21st, 2021
oscar faradise

ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಫ್ಲ್ಯಾಟ್ ನಲ್ಲಿ  ಜಾರಿ ಬಿದ್ದು  ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಮಂಗಳೂರು ಅತ್ತಾವರದಲ್ಲಿರುವ ಫ್ಲ್ಯಾಟ್ ನಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡಿಸ್ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಇನ್ನು ಭಾನುವಾರ ಜಾರಿ ಬಿದ್ದ ಸಮಯ ಯಾವ ಗಾಯವಾಗಿಲ್ಲ ಎಂಬ ನಿರ್ಲಕ್ಷ್ಯದಿಂದಿದ್ದ ಫರ್ನಾಂಡಿಸ್ ಅವರು ಅದೇ ದಿನ ಸಂಜೆ ಡಯಾಲಿಸಿಸಿ ಗೆ ತೆರಳಿದ್ದಾಗ […]