ರಾಪಟ ತುಳು ಸಿನಿಮಾದ ಟ್ರೇಲರ್ ಬಿಡುಗಡೆ

Tuesday, November 14th, 2023
Rapata

ಮಂಗಳೂರು: ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ಡಾ ದೇವದಾಸ್ ಕಾಪಿಕಾಡ್ ರ ಚಿತ್ರಕತೆ ಸಾಹಿತ್ಯ ಸಂಭಾಷಣೆಯಲ್ಲಿ ತಯಾರಾದ ಅರ್ಜುನ್ ಕಾಪಿಕಾಡ್ ನಿರ್ದೇಶನದ ರಾಪಟ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ನಡೆಯಿತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಡಾ. ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ ಶೆಟ್ಟಿ, ಪ್ರಕಾಶ್ ಪಾಂಡೇಶ್ವರ್, ಮುಖೇಶ್ ಹೆಗ್ಡೆ, ಸನಿಲ್ ಗುರು, ಉದ್ಯಮಿ ಸಂಜಯ್ ರಾವ್ , ಸಂತೋಷ್ ಸುವರ್ಣ , ರಾಕೇಶ್ ಶೆಟ್ಟಿ , […]

“ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆ.22ರಂದು ಕರಾವಳಿಯಾದ್ಯಂತ ತೆರೆಗೆ

Wednesday, September 20th, 2023
"ಯಾನ್ ಸೂಪರ್ ಸ್ಟಾರ್" ತುಳು ಸಿನಿಮಾ ಸೆ.22ರಂದು ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: “ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರವು ಸೆಪ್ಟಂಬರ್ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ” ಎಂದು ರಾಮ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ಸಿಐಡಿ ದಯಾ ಖ್ಯಾತಿಯ ದಯಾನಂದ ಶೆಟ್ಟಿ ಅವರು, “ಹಿಂದಿ ಸಿನಿಮಾ ಮತ್ತು ಧಾರವಾಹಿ ಕ್ಷೇತ್ರದಲ್ಲಿ ನಾನು ಕಳೆದ 25 ವರ್ಷಗಳಿಂದ ದುಡಿಯುತ್ತಿದ್ದೇನೆ. ನಾನೆಲ್ಲಿ ಹೋದರೂ […]

‘ಎನ್ನ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ

Friday, February 14th, 2020
yenna

ಮಂಗಳೂರು : ಗ್ಲೋರಿಯಸ್ ಆಂಜೆಲೋರ್ ಪ್ರೋಡಕ್ಷನ್ ಲಾಂಛನದಲ್ಲಿ ಕ್ಯಾನೆಟ್ ಮಾತಾಯಸ್ ಪಿಲಾರ್ ನಿರ್ಮಾಣದ ಕೋಡಿಕಲ್ ವಿಶ್ವನಾಥ ನಿರ್ದೇಶನದ ‘ಎನ್ನ’ ತುಳು ಚಲನ ಚಿತ್ರದ ಬಿಡುಗಡೆ ಸಮಾರಂಭವು ನಗರದ ಜ್ಯೋತಿ ಚಿತ್ರ ಮಂದಿರದಲ್ಲಿ ನಡೆಯಿತು. ಚಲನ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಸಿನಿಮಾವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳುವಿನಲ್ಲಿ ತೆರೆಕಾಣುತ್ತಿರುವ 114ನೇ ಸಿನಿಮಾ ‘ಎನ್ನ’ ಪ್ರೇಮಕತೆಯನ್ನೊಳಗೊಂಡಿದೆ. ತುಳು ಸಿನಿಮಾಗಳಿಗೆ ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ ಎಂದು ಅವರು ಸಿನಿಮಾಕ್ಕೆ ಶುಭ ಹಾರೈಸಿದರು. 173 ಕಲಾವಿದರು ‘ಎನ್ನ’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಮುಖ್ಯವಾಗಿ […]

‘ರಡ್ಡ್ ಎಕ್ರೆ’ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

Friday, January 10th, 2020
radd-yekare

ಮಂಗಳೂರು : ಒನ್‌ಲೈನ್ ಸಿನಿಮಾ ಲಾಂಛನದಲ್ಲಿ ಸಂದೇಶ್ ರಾಜ್ ಬಂಗೇರ, ರೋಹನ್ ಕೋಡಿಕಲ್ ನಿರ್ಮಾಣದಲ್ಲಿ ವಿಸ್ಮಯ ವಿನಾಯಕ್ ನಿರ್ದೇಶನದಲ್ಲಿ ತಯಾರಾದ ‘ರಡ್ಡ್ ಎಕ್ರೆ’ ತುಳು ಸಿನಿಮಾ ಭಾರತ್ ಮಾಲ್‌ನ್ ಬಿಗ್ ಸಿನಿಮಾಸ್‌ನಲ್ಲಿ ಬಿಡುಗಡೆ ಗೊಂಡಿತು. ಸಮಾರಂಭವನ್ನು ಶ್ರೀನಿವಾಸ ಯುನಿರ್ವಸಿಟಿಯ ಚಾನ್ಸಿಲರ್ ರಾಘವೇಂದ್ರ ರಾವ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ‘ರಡ್ಡ್ ಎಕ್ರೆ’ ಸಿನಿಮಾದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಲಿ. ಪ್ರಾದೇಶಿಕ ಭಾಷೆಯಲ್ಲಿ ಬರುತ್ತಿರುವ ಸಿನಿಮಾಗಳನ್ನು ಪ್ರೇಕ್ಷಕರು ಪ್ರೋತ್ಸಾಹಿಸಬೇಕು ಎಂದು ಅವರು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ […]

ತುಳು ಸಿನಿಮಾ ‘ಎನ್ನ’ ಫೆಬ್ರವರಿ 14 ರಂದು ಬಿಡುಗಡೆ

Thursday, December 19th, 2019
yenna

ಮಂಗಳೂರು : ಯುವ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಅನ್ನೋ ದೃಷ್ಟಿಕೋನದಿಂದ ಗ್ಲೋರಿಯಸ್ ಆಂಜೆಲೋರ್ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ತಯಾರಾಗಿರುವ ತುಳು ಸಿನಿಮಾ ಎನ್ನ . ಈ ಸಿನೆಮಾವನ್ನು ಕ್ಯಾನೆಟ್ ಮ್ಯಾಥಿಯಸ್ ಪಿಲಾರ್ ನಿರ್ಮಾಣ ಮಾಡಿದ್ದು ವಿಶ್ವನಾಥ್ ಕೋಡಿಕಲ್ ನಿರ್ದೇಶನ ಮಾಡಿದ್ದಾರೆ. ಬಹುದಿನಗಳಿಂದ ಎನ್ನ ಸಿನಿಮಾದ ಸುದ್ದಿಗಾಗಿ ಕಾಯುತ್ತಿದ್ದ ಸಿನಿಪ್ರಿಯರಿಗೆ ಒಂದು ಸಂತೋಷದ ವಿಷಯ. ಕಳೆದವರವಷ್ಟೇ ಎನ್ನ ಸಿನಿಮಾದ ಹಾಡೊಂದು ಬಿಡುಗಡೆಗೊಂಡಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ಮೂಡಿಬಂದಿದೆ . ಚಿತ್ರತಂಡ ಇದೀಗ ಮತ್ತೊಂದು ಸುದ್ದಿಯನ್ನು ಬಿಡುಗಡೆಗೊಳಿಸಿದೆ. ಎನ್ನ ಸಿನೆಮದ […]

ಮದಿಪು ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

Saturday, March 11th, 2017
Madipu

ಮಂಗಳೂರು: ಆಸ್ಥಾ ಪೊಡಕ್ಷನ್ ಲಾಂಛನದಲ್ಲಿ ತಯಾರಾದ ಚೇತನ್ ಮುಂಡಾಡಿ ನಿರ್ದೇಶನ ಸಂದೀಪ್ ಕುಮಾರ್ ನಂದಳಿಕೆ ನಿರ‍್ಮಾಣದ ಮದಿಪು ನಂಬೊಲಿಗೆದ ಪುರುಸದ ಟ್ಯಾಗ್‌ಲೈನ್ ಹೊಂದಿರುವ ತುಳು ಸಿನಿಮಾ ಮಾರ್ಚ್ 10ರಂದು ನಗರದ ಸುಚಿತ್ರ ಟಾಕೀಸ್‌ನಲ್ಲಿ ಬಿಡುಗಡೆಗೊಂಡಿತು. ಸಮಾರಂಭವನ್ನು ಬಾಲನಟಿ ಅಂಚಿತ್ಯಾ ದೀಪಬೆಳಗಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಾನಪದ ವಿದ್ವಾಂಸ ದಯಾನಂದ ಕತ್ತಲ್‌ಸಾರ್ ಮಾತನಾಡಿ ತುಳುನಾಡಿನ ದೈವರಾದನೆ ಎಂಬ ನಂಬಿಕೆ, ದೈವಾರಾಧನೆಯ ಕೊಡಿಯಡಿಯಲ್ಲಿ ದೈವಾರಾಧಕರ ನೋವು ಮತ್ತು ಸಾಮಾಜಿಕ ಅಸ್ಥಿರತೆ, ಹಿಂದೂ -ಮುಸಲ್ಮಾನ ಬಾವೈಕ್ಯತೆ, ತಾಯಿ ಮತ್ತು […]

ಸ್ಯಾಂಡಲ್‌‌ವುಡ್‌‌ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ತುಳು ಸಿನಿಮಾದಲ್ಲಿ ನಟನೆ

Thursday, October 13th, 2016
Bharathi-vishnuvardan

ಮಂಗಳೂರು: ಸ್ಯಾಂಡಲ್‌‌ವುಡ್‌‌ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಇದೇ ಮೊದಲ ಬಾರಿಗೆ ತುಳು ಸಿನಿಮಾದಲ್ಲಿ ನಟಿಸುತ್ತಿರುವ ಸುದ್ದಿ ಹೊರಬಂದಿದೆ. ಪುನೀತ್‌‌ ಅವರ `ದೊಡ್ಮನೆ ಹುಡ್ಗ’ ನಂತರ ಇವರಿಗೆ ಇದು ಹೊಸ ಅನುಭವವಂತೆ. ನಾಗೇಶ್ವರ ಸಿನಿ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಡಂದಲೆ ಸುರೇಶ್ ಎಸ್. ಭಂಡಾರಿ ನಿರ್ಮಾಣದ ಅಂಬರ್ ಕೇಟರರ್ಸ್ ತುಳು ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಭಾರತಿಯವರು ಭಾಗಿಯಾಗುತ್ತಿದ್ದಾರೆ. ಅಂಬರ್ ಕೇಟರರ್ಸ್ ಇದೊಂದು ವಿನೂತನ ಶೈಲಿಯ ಸಿನಿಮಾ ಇದಾಗಿದ್ದು, ಹಾಸ್ಯ ಪ್ರಧಾನ ಕಥಾವಸ್ತು ಹೊಂದಿದೆ. ಕೇಟರರ್ಸ್ ಉದ್ಯಮ ವ್ಯವಸ್ಥೆಯೊಳಗಿನ […]

ದೇವದಾಸ್ ಕಾಪಿಕಾಡ್ ನಿರ್ದೇಶನದ ’ಬರ್ಸ’ ತುಳು ಸಿನಿಮಾ ಅಕ್ಟೋಬರ್ 13 ರಂದು ತೆರೆಗೆ

Wednesday, October 5th, 2016
barsa-film

ಮಂಗಳೂರು: ಬೊಳ್ಳಿ ಮೂವೀಸ್ ಲಾಂಚನದಲ್ಲಿ ದೇವದಾಸ್ ಕಾಪಿಕಾಡ್ ನಿರ್ದೇಶನದ ’ಬರ್ಸ’ ತುಳು ಸಿನಿಮಾ ಸೆನ್ಸಾರ್‌ನಲ್ಲಿ ಯು ಸರ್ಟಿಪಿಕೇಟ್ ಪಡೆದಿದೆ. ಕುಟುಂಬ ಸಮೇತರಾಗಿ ನೋಡಬಹುದಾದ ಉತ್ತಮ ಚಿತ್ರ ಎಂಬ ಹೆಗ್ಗಳಿಕೆಗೆ ಬರ್ಸ ಪಾತ್ರವಾಗಿದೆ. ಇದೀಗ ಈ ಸಿನಿಮಾವನ್ನು ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಗೆ ಭರದ ಸಿದ್ದತೆ ನಡೆಸಲಾಗಿದೆ. ಅಕ್ಟೋಬರ್ 13 ರಂದು ಕರವಳಿ ಜಿಲ್ಲೆಯಾದ್ಯಂತ ಸಿನಿಮಾತೆರೆಗೆ ಬರಲಿದೆ. ಅರ್ಜುನ್ ಕಾಪಿಕಾಡ್ ನಾಯಕ ನಟನಾಗಿರುವ ಬರ್ಸ ಸಿನಿಮಾದಲ್ಲಿ ಲವ್ ಸೆಂಟಿಮೆಂಟ್, ಫೈಟ್ ಕ್ವಾಮಿಡಿ ಎಲ್ಲವೂ ಇದೆ. ಪ್ರೇಕ್ಷಕರಿಗೆ ಏನು ಬೇಕೋ ಅದನ್ನು ಈ ಸಿನಿಮಾದಲ್ಲಿ […]

ಕೋಡ್ಲು ನಿರ್ದೇಶನದ ತುಳು ಚಲನಚಿತ್ರ ’ಏರೆಗ್ಲಾ ಪನೊಡ್ಚಿ’ ಮುಕ್ತಾಯ ಹಂತದಲ್ಲಿ

Sunday, August 2nd, 2015
Eregla Panodchi

ಮಂಗಳೂರು : ಕನ್ನಡದ ಹೆಸರಾಂತ ಚಿತ್ರ ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರ 25ನೇ ಚಿತ್ರ ’ಏರೆಗ್ಲಾ ಪನೊಡ್ಚಿ’ ಮುಕ್ತಾಯ ಹಂತದಲ್ಲಿದೆ. ವಠಾರವೊಂದರಲ್ಲಿ ನಡೆಯುವ ನಿತ್ಯ ಘಟನೆಯನ್ನಾಧರಿಸಿ ಚಿತ್ರಕಥೆ ರಚಿಸಲಾಗಿದ್ದು ಪ್ರತೀ ಸನ್ನಿವೇಶ ಕೂಡಾ ಇಂದಿನ ಕಾಲಕ್ಕೆ ತಕ್ಕುದಾಗಿದೆ. ಮದ್ಯಮ ವರ್ಗದ ಹೆಂಗಸರ ಸುತ್ತ ನಡೆಯುವ ಕತೆ ಇದೆ. ವಠಾರದಲ್ಲಿ ಬಾಡಿಗೆಗೆ ಇರುವ ನಾಲ್ಕು ಸಂಸಾರ. ಹೆಂಗಸರಿಗೆಲ್ಲಾ ಸ್ವಂತ ಮನೆ ಬೇಕೆಂಬ ಆಸೆ. ಆದರೆ ಗಂಡಸರಿಗೆ ಮನೆಯ ಬಗ್ಗೆ ಯಾವುದೇ ರೀತಿಯ ಆಸಕ್ತಿ ಇರುವುದಿಲ್ಲ. ಇದೇ ಸಮಯ ವಠಾರಕ್ಕೆ […]

ತುಳು ಸಿನಿಮಾ ತೆಲಿಕೆದ ಬೊಳ್ಳಿ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಸಮಾರಂಭ

Friday, November 9th, 2012
Telikeda Bolli

ಮಂಗಳೂರು :ತುಳು ರಂಗಭೂಮಿಯಲ್ಲಿ ಅತ್ಯಂತ ಪ್ರಸಿದ್ಧಿ ಪಡೆದು ತೆಲಿಕೆದ ಬೊಳ್ಳಿ ಎಂಬ ಬಿರುದು ಹೊಂದಿರುವ ಪ್ರಸಿದ್ಧ ನಟ ದೇವದಾಸ್ ಕಾಪಿಕಾಡ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ಬಹು ನಿರೀಕ್ಷೆಯ ತೆಲಿಕೆದ ಬೊಳ್ಳಿ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭವು ನಗರದ ಪ್ರತಿಷ್ಠಿತ ಹೊಟೇಲ್ ಓಶಿಯನ್‌ ಪರ್ಲ್‌ನಲ್ಲಿ ಜರಗಿತು. ಕನ್ನಡ ಚಿತ್ರರಂಗದ ಪ್ರಸಿದ್ಧ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್ ತೆಲಿಕೆದ ಬೊಳ್ಳಿ ಚಿತ್ರದ ಧ್ವನಿಸುರುಳಿಯನ್ನು ಬಿಡುಗಡೆಗೊಳಿಸಿದರು. ಚಿತ್ರವು ಅತ್ಯುತ್ತಮ ಹಾಡುಗಳನ್ನು ಹೊಂದಿದ್ದು, ದಕ್ಷಿಣ ಕನ್ನಡದಲ್ಲಿ ಉತ್ತಮ ಕಥಾಹಂದರಗಳುಳ್ಳ ಚಿತ್ರಗಳು ಬಿಡುಗಡೆಯಾಗುತ್ತಿರುವುದು ಸಂತಸದ […]